Homeಕರ್ನಾಟಕಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಔಟ್: ಪಕ್ಷಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

- Advertisement -
- Advertisement -

ಆಪರೇಷನ್ ಕಮಲದಿಂದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ತಮ್ಮ ಸ್ವಕ್ಷೇತ್ರವನ್ನೇ ಕಳೆದುಕೊಂಡ ಮಾಜಿ ಉಪಮುಖ್ಯಂತ್ರಿ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಕ್ಷ್ಮಣ ಸವದಿ  ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಣೆ ಮಾಡಿದರು. ಬೆಳಗಾವಿಯ ಅಥಣಿಯಲ್ಲಿ ಇಂದು(ಏಪ್ರಿಲ್ 12) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

”ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್​ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ ಮಾಡಿದ್ದಾರೆ. ನಾಳೆ ಸಂಜೆ ಕ್ಷೇತ್ರದ ಜನರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಮಾಡುತ್ತೇನೆ. ಸವದಿ ಯಾವತ್ತೂ ಒಳಗೊಂದು ಹೊರಗೊಂದು ಮಾತನಾಡಲ್ಲ. ವಿಧಾನಸಭೆಯಲ್ಲಿ ನಡೆದ ಘಟನೆಯಿಂದ ರಾಜೀನಾಮೆ ಕೊಡಬೇಕಾಯಿತು. ಈ ಪ್ರಕರಣದಿಂದ ನನ್ನ ಗುರುಗಳ ಕಣ್ಣಲ್ಲಿ ನೀರು ಬಂದಿತ್ತು” ಎಂದು ಆ ದಿನಗಳನ್ನು ನೆನೆದರು.

”ಸೌಜನ್ಯಕ್ಕಾದರೂ ಮೊದಲು ನನ್ನ ಜೊತೆ ಚರ್ಚೆ ಮಾಡಬೇಕಿತ್ತು. ಮುಂದಿನ ದಿನಗಳಲ್ಲಿ ಸಿಎಂ ಆಗಿ, ಪ್ರಧಾನಿ ಆಗುವ ಅವಕಾಶ ಇದೆ. ಪ್ರಧಾನಿ ಆಗಿ ನೋಡುವ ಆಸೆ ಇದೆ. ಅವರು ಈ ರಾಷ್ಟ್ರದ ಪ್ರಧಾನಮಂತ್ರಿ ಆಗಲು ಯಾರು ತಪ್ಪಿಸಲ್ಲ ಅಂದುಕೊಂಡಿದ್ದೇನೆ. ಮೋದಿಗೆ 75 ವರ್ಷ ಆದ ಬಳಿಕ, ಇವರಿಗೆ ಅವಕಾಶ ಸಿಗಬಹುದು” ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

”ನಿನಗೆ ಟಿಕೆಟ್​ ಕೊಡುವುದಕ್ಕೆ ಆಗಲ್ಲ ಸುಮ್ಮನೆ ಬಿದ್ದುಕೊಂಡು ಇರು ಎಂದು ಹೇಳಿದ್ದರೆ ಕೇಳುತ್ತಿದ್ದೆ. ನನಗೆ ಅವರ ಮೇಲೆ ದ್ವೇಷ ಇಲ್ಲ. ಅವರ ತಂದೆ ಸಿಎಂ ಆಗಿದ್ದ ದಿನದಿಂದಲೂ ಒಳ್ಳೆಯ ಸಂಬಂಧ ಇದೆ. ಸಿ.ಸಿ.ಪಾಟೀಲ್ ಹಾಗೂ ನನ್ನ ವಿನಂತಿ ಮನ್ನಿಸಿ ಬಿಜೆಪಿಗೆ ಬಂದರು. ನಾನು ಸಿ‌‌.ಸಿ‌‌.ಪಾಟೀಲ್ ಸೇರಿ ಬೊಮ್ಮಾಯಿರ‌ನ್ನು ಬಿಜೆಪಿಗೆ ಸೇರ್ಪಡೆ ಮಾಡಿಸಿದ್ದೇವು. ಅವರು ಬೃಹತ್ ನೀರಾವರಿ ಸಚಿವರಾಗಿ ಸಿಎಂ ಆಗಿ ಕಾರ್ಯನಿರ್ವಹಿಸುವುದು ನನಗೆ ಬಹಳ ಸಂತೋಷ ಆಗಿದೆ. ನನಗೆ ಸಹಾಯ ಮಾಡಿದ ಎಲ್ಲರಿಗೂ ಅಭಿನಂದನೆ ಹೇಳುತ್ತೇನೆ. ನಾನು ಎಲ್ಲೇ ಇರಲಿ ಹೇಗೆ ಇರಲಿ ಅಲ್ಲಿ ನನ್ನ ಗುರು ಇದ್ದಾರೆ, ಆ ಗುರುವನ್ನು ಮಾತ್ರ ಮರೆಯಲ್ಲ. ಅವರಿಗೆ ನಾನು ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನನ್ನ ಕ್ಷಮಿಸಬೇಕು ಎಂದು ಹೇಳುತ್ತೇನೆ” ಎಂದರು.

ಟಿಕೆಟ್ ಸಿಗದಿರುವ ಬಗ್ಗೆ ತಿಳಿದ ಸವದಿ ಬೆಂಬಲಿಗರ ಜೊತೆ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಿದ್ಧರಾಗಿದ್ದರು.  ”ಗುರುವಾರ (ಏಪ್ರಿಲ್ 13) ಸಂಜೆ 4 ಗಂಟೆಗೆ ಅಥಣಿ ಕ್ಷೇತ್ರ ಬೃಹತ್ ಜನರ ಸಭೆ ಕರೆಯಲಾಗುವುದು. ನೀವು ಏನು ಹೇಳುತ್ತಿರಿ ನಾನು ಅದನ್ನು ಕೇಳುತ್ತೇನೆ. ನೀವು ಮನೆಯಲ್ಲಿರು ಎಂದರೆ ನಾನು ಮನೆಯಲ್ಲಿ ಕೂರುತ್ತೇನೆ. ನೀವು ಯಾವು ದಿಕ್ಕು ತೊರುತ್ತಿರಿ ನಾನು ಆ ದಿಕ್ಕು ಕಡೆ ಹೋಗುತ್ತೇನೆ. ನೀವು ಕೊಡುವಂತಹ ಆದೇಶಕ್ಕೆ ನಾನು ಬದ್ಧನಾಗಿದ್ದೇನೆ ಎಂಬ ಸಂದೇಶವನ್ನು ಸವದಿ ರವಾನಿಸಿದ್ದರು.

ಪಕ್ಷೇತರ ಅಥವಾ ಕಾಂಗ್ರೆಸ್‌ನಿಂದ ಸ್ಪರ್ಧೆ ಸಾಧ್ಯತೆ

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಲಕ್ಷ್ಮಣ ಸವದಿ ಅವರು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೂ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಕ್ಷೇತರರಾಗಿಯಾದರೂ ಸ್ಪರ್ಧೆ ಮಾಡಲು ನಿಶ್ಚಿಯಿಸಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅವರು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿವೆ. ಮತ್ತೊಂದೆಡೆ ಕಾಂಗ್ರೆಸ್ ಕೂಡ ಅಥನಿ ಕ್ಷೇತ್ರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದಾಗ ಲಕ್ಷ್ಮಣ ಸವದಿ ಕಾಮಗ್ರೆಸ್ ಸೇರಿದರೂ ಅಚ್ಚರಿಪಡಬೇಕಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...