Homeಮುಖಪುಟಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

ಯುಪಿಎ ಆಡಳಿತದಲ್ಲಿ 2ಜಿ ಸ್ಪೆಕ್ಟ್ರಂನ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಕರೆದಿದ್ದ ಬಿಜೆಪಿ, ಈಗ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಹರಾಜು ಇಲ್ಲದೆ ಸ್ಪೆಕ್ಟ್ರಂ ನೀಡಲು ಸುಪ್ರೀಂ ಕೋರ್ಟ್‌ನಿಂದ ಅನುಮತಿ ಕೇಳುತ್ತಿದ್ದು, ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ ತನ್ನ ತೀರ್ಪನ್ನು ಮಾರ್ಪಡಿಸುವಂತೆ ಕೋರಿ ಕೇಂದ್ರವು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮೋದಿ ಸರ್ಕಾರ ಮತ್ತು ಭ್ರಷ್ಟ ಜನತಾ ಪಾರ್ಟಿಯ ಬೂಟಾಟಿಕೆಗೆ ಯಾವುದೇ ಮಿತಿಯಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ, 2ಜಿ ಸ್ಪೆಕ್ಟ್ರಂ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಬಿಜೆಪಿ ಹೇಳಿತ್ತು. ಈಗ ಅದಕ್ಕೆ ತದ್ವಿರುದ್ಧವಾಗಿ ವಾದ ಮಂಡಿಸುತ್ತಿದ್ದಾರೆ. ಹರಾಜು ಮಾಡದೆ ತಮಗೆ ಬೇಕಾದವರಿಗೆ ಸ್ಪೆಕ್ಟ್ರಂ ನೀಡಲು ಅನುಮತಿ ನೀಡಲು ಕೇಂದ್ರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಖಂಡಿತವಾಗಿಯೂ, ಈ ‘ಮೋದಾನಿ ಆಡಳಿತ’ ಈಗಾಗಲೇ ಸಾರ್ವಜನಿಕ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯ ಕ್ರೂರಿ ಬಂಡವಾಳಶಾಹಿ ಸ್ನೇಹಿತರಿಗೆ ಹಸ್ತಾಂತರಿಸುತ್ತಿದೆ. ವಿಮಾನ ನಿಲ್ದಾಣಗಳನ್ನು ಒಂದು ಕಂಪನಿಗೆ ಹಸ್ತಾಂತರಿಸಲಾಗಿದೆ. ಕಲ್ಲಿದ್ದಲು ಗಣಿಗಳನ್ನು ಮೋಸದ ಹರಾಜಿನಲ್ಲಿ ನೀಡಲಾಗಿದೆ. ಉಪಗ್ರಹ ಸ್ಪೆಕ್ಟ್ರಮ್ ಅನ್ನು ಸಹ ಹಸ್ತಾಂತರಿಸಲಾಗಿದೆ” ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

“ಒಟ್ಟಾರೆಯಾಗಿ 150 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್‌ಗಳಿಗೆ ಬದಲಾಗಿ, ಅವರು ಈಗಾಗಲೇ ತಮ್ಮ ಕಾರ್ಪೊರೇಟ್ ದಾನಿಗಳಿಗೆ 4 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಸಂಪನ್ಮೂಲಗಳನ್ನು ಹಸ್ತಾಂತರಿಸಿದ್ದಾರೆ” ಎಂದಿದ್ದಾರೆ.

“ಜೂನ್ 4 ರಂದು, ಭಾರತದ ಮತದಾರರು ಈ ಪಕ್ಷಕ್ಕೆ ‘ಸಂಘಟಿತ ಲೂಟಿ’ ಬಾಗಿಲನ್ನು ತೋರಿಸಲಿದ್ದಾರೆ. ಇಂಡಿಯಾ ಸರ್ಕಾರವು ಅದಾನಿ ಮೆಗಾ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ ಮೂಲಕ ತನಿಖೆ ನಡೆಸಲಿದೆ. ಪ್ರಧಾನಿ ತಮ್ಮ ಸುಸಜ್ಜಿತವಾದ ‘ಚಾರ್ ರಾಸ್ತೆ’ ಮೂಲಕ 8200 ಕೋಟಿ ರೂ. ಸಂಗ್ರಹಿಸಿದ
#PayPM ಹಗರಣ ಸೇರಿದಂತೆ ಇತರ ಹಗರಣಗಳನ್ನು ಸರ್ಕಾರ ತನಿಖೆ ನಡೆಸಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಫೆಬ್ರವರಿ 2, 2012 ರಂದು ನೀಡಿದ್ದ ತೀರ್ಪಿನಲ್ಲಿ, ಜನವರಿ 2008ರಲ್ಲಿ ಎ ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಅವಧಿಯಲ್ಲಿ ವಿವಿಧ ಸಂಸ್ಥೆಗಳಿಗೆ ನೀಡಲಾಗಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಸೋಮವಾರ, ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಅವರ ಪೀಠದ ಮುಂದೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಕೆಲವು ಪ್ರಕರಣಗಳಲ್ಲಿ ಕೇಂದ್ರವು 2ಜಿ ಸ್ಪೆಕ್ಟ್ರಂ ಪರವಾನಗಿಗಳನ್ನು ನೀಡಲು ಬಯಸಿರುವುದರಿಂದ 2012 ರ ತೀರ್ಪನ್ನು ಮಾರ್ಪಾಡು ಮಾಡಬೇಕು ಎಂದು ಮನವಿ ಮಾಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : 27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...