Homeಮುಖಪುಟಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ: 2ಜಿ ಪ್ರಕರಣದ ತೀರ್ಪು ತಿದ್ದುಪಡಿ ಕೋರಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ

- Advertisement -
- Advertisement -

ಯುಪಿಎ ಆಡಳಿತದಲ್ಲಿ 2ಜಿ ಸ್ಪೆಕ್ಟ್ರಂನ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಕರೆದಿದ್ದ ಬಿಜೆಪಿ, ಈಗ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಹರಾಜು ಇಲ್ಲದೆ ಸ್ಪೆಕ್ಟ್ರಂ ನೀಡಲು ಸುಪ್ರೀಂ ಕೋರ್ಟ್‌ನಿಂದ ಅನುಮತಿ ಕೇಳುತ್ತಿದ್ದು, ಬಿಜೆಪಿಯ ಬೂಟಾಟಿಕೆಗೆ ಮಿತಿಯಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ ತನ್ನ ತೀರ್ಪನ್ನು ಮಾರ್ಪಡಿಸುವಂತೆ ಕೋರಿ ಕೇಂದ್ರವು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಮೋದಿ ಸರ್ಕಾರ ಮತ್ತು ಭ್ರಷ್ಟ ಜನತಾ ಪಾರ್ಟಿಯ ಬೂಟಾಟಿಕೆಗೆ ಯಾವುದೇ ಮಿತಿಯಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ, 2ಜಿ ಸ್ಪೆಕ್ಟ್ರಂ ಆಡಳಿತಾತ್ಮಕ ಹಂಚಿಕೆಯನ್ನು ‘ಹಗರಣ’ ಎಂದು ಬಿಜೆಪಿ ಹೇಳಿತ್ತು. ಈಗ ಅದಕ್ಕೆ ತದ್ವಿರುದ್ಧವಾಗಿ ವಾದ ಮಂಡಿಸುತ್ತಿದ್ದಾರೆ. ಹರಾಜು ಮಾಡದೆ ತಮಗೆ ಬೇಕಾದವರಿಗೆ ಸ್ಪೆಕ್ಟ್ರಂ ನೀಡಲು ಅನುಮತಿ ನೀಡಲು ಕೇಂದ್ರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ.

“ಖಂಡಿತವಾಗಿಯೂ, ಈ ‘ಮೋದಾನಿ ಆಡಳಿತ’ ಈಗಾಗಲೇ ಸಾರ್ವಜನಿಕ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯ ಕ್ರೂರಿ ಬಂಡವಾಳಶಾಹಿ ಸ್ನೇಹಿತರಿಗೆ ಹಸ್ತಾಂತರಿಸುತ್ತಿದೆ. ವಿಮಾನ ನಿಲ್ದಾಣಗಳನ್ನು ಒಂದು ಕಂಪನಿಗೆ ಹಸ್ತಾಂತರಿಸಲಾಗಿದೆ. ಕಲ್ಲಿದ್ದಲು ಗಣಿಗಳನ್ನು ಮೋಸದ ಹರಾಜಿನಲ್ಲಿ ನೀಡಲಾಗಿದೆ. ಉಪಗ್ರಹ ಸ್ಪೆಕ್ಟ್ರಮ್ ಅನ್ನು ಸಹ ಹಸ್ತಾಂತರಿಸಲಾಗಿದೆ” ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

“ಒಟ್ಟಾರೆಯಾಗಿ 150 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್‌ಗಳಿಗೆ ಬದಲಾಗಿ, ಅವರು ಈಗಾಗಲೇ ತಮ್ಮ ಕಾರ್ಪೊರೇಟ್ ದಾನಿಗಳಿಗೆ 4 ಲಕ್ಷ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಸಂಪನ್ಮೂಲಗಳನ್ನು ಹಸ್ತಾಂತರಿಸಿದ್ದಾರೆ” ಎಂದಿದ್ದಾರೆ.

“ಜೂನ್ 4 ರಂದು, ಭಾರತದ ಮತದಾರರು ಈ ಪಕ್ಷಕ್ಕೆ ‘ಸಂಘಟಿತ ಲೂಟಿ’ ಬಾಗಿಲನ್ನು ತೋರಿಸಲಿದ್ದಾರೆ. ಇಂಡಿಯಾ ಸರ್ಕಾರವು ಅದಾನಿ ಮೆಗಾ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ ಮೂಲಕ ತನಿಖೆ ನಡೆಸಲಿದೆ. ಪ್ರಧಾನಿ ತಮ್ಮ ಸುಸಜ್ಜಿತವಾದ ‘ಚಾರ್ ರಾಸ್ತೆ’ ಮೂಲಕ 8200 ಕೋಟಿ ರೂ. ಸಂಗ್ರಹಿಸಿದ
#PayPM ಹಗರಣ ಸೇರಿದಂತೆ ಇತರ ಹಗರಣಗಳನ್ನು ಸರ್ಕಾರ ತನಿಖೆ ನಡೆಸಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಫೆಬ್ರವರಿ 2, 2012 ರಂದು ನೀಡಿದ್ದ ತೀರ್ಪಿನಲ್ಲಿ, ಜನವರಿ 2008ರಲ್ಲಿ ಎ ರಾಜಾ ಅವರು ದೂರಸಂಪರ್ಕ ಸಚಿವರಾಗಿದ್ದ ಅವಧಿಯಲ್ಲಿ ವಿವಿಧ ಸಂಸ್ಥೆಗಳಿಗೆ ನೀಡಲಾಗಿದ್ದ 2ಜಿ ತರಂಗಾಂತರ ಪರವಾನಗಿಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.

ಸೋಮವಾರ, ಕೇಂದ್ರದ ಪರವಾಗಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಅವರ ಪೀಠದ ಮುಂದೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಕೆಲವು ಪ್ರಕರಣಗಳಲ್ಲಿ ಕೇಂದ್ರವು 2ಜಿ ಸ್ಪೆಕ್ಟ್ರಂ ಪರವಾನಗಿಗಳನ್ನು ನೀಡಲು ಬಯಸಿರುವುದರಿಂದ 2012 ರ ತೀರ್ಪನ್ನು ಮಾರ್ಪಾಡು ಮಾಡಬೇಕು ಎಂದು ಮನವಿ ಮಾಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : 27 ಪ್ರಕರಣಗಳು: ಪ್ರಧಾನಿ ಮೋದಿ ವಿರುದ್ಧದ ದೂರುಗಳಿಗೆ ಸಂಬಂಧಿಸಿ ಚುನಾವಣಾ ಆಯೋಗ ಏನು ಮಾಡಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...