Homeಮುಖಪುಟಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

- Advertisement -
- Advertisement -

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ ‘ಜನ್ಮಭೂಮಿ’, ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ ‘ಚಂದ್ರಿಕಾ’ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ.

‘ಜನ್ಮಭೂಮಿ’ ಪತ್ರಿಕೆಯ ಕಣ್ಣೂರು-ಕಾಸರಗೋಡು ಆವೃತ್ತಿಯಲ್ಲಿ ಈ ಗೊಂದಲ ಉಂಟಾಗಿದೆ. “ಇದು ಮುದ್ರಣ ಪ್ರಕ್ರಿಯೆಯಲ್ಲಿ ಉಂಟಾದ ತಾಂತ್ರಿಕ ಗೊಂದಲ” ಎಂದು ಜನ್ಮಭೂಮಿಯ ಕಣ್ಣೂರು ಬ್ಯೂರೋ ಮುಖ್ಯಸ್ಥ ಗಣೇಶ್ ಮೋಹನ್ ಹೇಳಿದ್ದಾರೆ.

ಕಣ್ಣೂರಿನ ಅದೇ ಖಾಸಗಿ ಕಂಪ್ಯೂಟರ್-ಟು-ಪ್ಲೇಟ್ (CTP) ಕೇಂದ್ರದಲ್ಲಿ ಪ್ರತಿಸ್ಪರ್ಧಿ ಪತ್ರಿಕೆಗಳನ್ನು ಸಂಸ್ಕರಿಸಲಾಗುತ್ತದೆ ಎಂದು ಹಿಂದೂ ವರದಿ ಮಾಡಿದೆ. CTP ಯಲ್ಲಿ, ಚಂದ್ರಿಕಾದ ಸಂಪಾದಕೀಯ ಪುಟದ ಫಲಕಗಳನ್ನು ಆಕಸ್ಮಿಕವಾಗಿ ಜನ್ಮಭೂಮಿಯ ಫಲಕಗಳೊಂದಿಗೆ ಇರಿಸಲಾಯಿತು ಮತ್ತು ಮುದ್ರಕರಿಗೆ ಕಳುಹಿಸಲಾಯಿತು.

ಚಂದ್ರಿಕಾ ಮತ್ತು ಜನ್ಮಭೂಮಿ ಎರಡೂ ಪತ್ರಿಕೆಗಳು ಕಣ್ಣೂರಿನಲ್ಲಿರುವ ಪ್ರತೀಕ್ಷಾ ಪ್ರಿಂಟರ್ಸ್‌ ಎಂಬ ಕಂಪ್ಯೂಟರ್-ಟು-ಪ್ಲೇಟ್ (ಸಿಟಿಪಿ) ಕೇಂದ್ರದಲ್ಲಿ ತಮ್ಮ ಪ್ರಿಂಟಿಂಗ್ ಪ್ಲೇಟ್‌ಗಳನ್ನು ತಯಾರಿಸಿಕೊಳ್ಳುತ್ತವೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಸಿಟಿಪಿ ಕೇಂದ್ರದಲ್ಲಿ, ಚಂದ್ರಿಕಾ ಪತ್ರಿಕೆಯ ಸಂಪಾದಕೀಯ ಪುಟದ ಪ್ಲೇಟ್‌ಗಳು ತಪ್ಪಾಗಿ ಜನ್ಮಭೂಮಿ ಪತ್ರಿಕೆಯ ಪ್ಲೇಟ್‌ಗಳೊಂದಿಗೆ ಬೆರೆತುಹೋಗಿ, ಪ್ರಿಂಟಿಂಗ್ ಯೂನಿಟ್‌ಗೆ ಹೋಗಿವೆ. ಇದರಿಂದಾಗಿ, ಒಂದು ಪತ್ರಿಕೆಯ ಸಂಪಾದಕೀಯ ಇನ್ನೊಂದು ಪತ್ರಿಕೆಯಲ್ಲಿ ತಪ್ಪಾಗಿ ಮುದ್ರಿತವಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಮಾಧ್ಯಮಂ, ಸುಪ್ರಭಾತಂ ಮತ್ತು ವೀಕ್ಷಣಂನಂತಹ ಇತರ ಸ್ಥಳೀಯ ಪತ್ರಿಕೆಗಳನ್ನೂ ಪ್ರತೀಕ್ಷಾ ಪ್ರಿಂಟರ್ಸ್‌ನಲ್ಲಿ ಮುದ್ರಿಸಲಾಗುತ್ತದೆ.

ಜನ್ಮಭೂಮಿ ಪತ್ರಿಕೆಯ ಪುಟ 4ರಲ್ಲಿ ಚಂದ್ರಿಕಾ ಪತ್ರಿಕೆಯ ಮುಖ್ಯ ಶೀರ್ಷಿಕೆ ಹಾಗೂ ಐಯುಎಂಎಲ್‌ ರಾಜ್ಯಾಧ್ಯಕ್ಷ ಸೈಯದ್ ಸಾದಿಕಲಿ ಶಿಹಾಬ್ ತಂಙಳ್, ಎಂ.ಕೆ. ಮುನೀರ್ ಮತ್ತು ಮೊಹಮ್ಮದ್ ಶಾ ಅವರ ಮೂರು ಅಭಿಪ್ರಾಯಗಳನ್ನು ಪ್ರಕಟಿಸಲಾಗಿದೆ. ಜನ್ಮಭೂಮಿಯ ‘ಅದೃಷ್ಟವ ಎಂಬಂತೆ, ಗೊಂದಲ ಉಂಟಾದ ದಿನ ಚಂದ್ರಿಕಾದ ಸಂಪಾದಕೀಯ ಪುಟದಲ್ಲಿ ಬಿಜೆಪಿಯನ್ನು ನೇರವಾಗಿ ಗುರಿಯಾಗಿಸಿಕೊಂಡ ಯಾವುದೇ ಲೇಖನ ಇರಲಿಲ್ಲ ಎಂದು ಕಾಸರಗೋಡಿನ ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ ದಿ ಹಿಂದೂ ವಿವರಿಸಿದೆ.

ಪತ್ರಿಕೆಯಲ್ಲಿ ಬಂಕಿಮ್ ಚಂದ್ರ ಚಟರ್ಜಿಯವರ ಕೃತಿಗಳ ಕುರಿತಾದ ಲೇಖನ ಮತ್ತು ಯಲಹಂಕ ತೆರವು ಕಾರ್ಯಾಚರಣೆ ಕುರಿತಾದ ಒಂದು ಲೇಖನವೂ ತಪ್ಪಾಗಿ ಪ್ರಕಟಗೊಂಡಿದೆ ಎಂದು ವರದಿ ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾದಿಕಲಿ ಶಿಹಾಬ್ ತಂಙಳ್, “ಹೆಚ್ಚಿನ ಓದುಗರನ್ನು ತಲುಪುವುದಕ್ಕಿಂತ, ವಿಭಿನ್ನ ವರ್ಗದ ಓದುಗರನ್ನು ತಲುಪಲು ಸಾಧ್ಯವಾಗಿದ್ದಕ್ಕೆ ನನಗೆ ಸಂತೋಷವಾಗಿದೆ. ಇದು ನಿಜವಾಗಿಯೂ ಹೊಸ ವರ್ಷದ ಅಚ್ಚರಿಯಾಗಿತ್ತು. ಮುಂದಿನ ವರ್ಷ ನಾನು ಇದನ್ನು ಖಂಡಿತವಾಗಿಯೂ ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

“ಹೊಸ ವರ್ಷದ ದಿನ ನಮ್ಮ ಸಂಪಾದಕೀಯ ಹೆಚ್ಚಿನ ಓದುಗರನ್ನು ಪಡೆದಿರುವುದು ಒಳ್ಳೆಯ ಸೂಚನೆ. ಇದು ಮುಂದಿನ ದಿನಗಳು ಉಜ್ವಲವಾಗಿವೆ ಎಂಬುದನ್ನು ತೋರಿಸುತ್ತದೆ” ಎಂದು ಚಂದ್ರಿಕಾ ಪತ್ರಿಕೆಯ ಸಂಪಾದಕ ಕಮಲ್ ವರದೂರ್ ಹೇಳಿದ್ದಾರೆ.

ನ್ಯೂಸ್‌ ಮಿನಿಟ್‌ನ ಪತ್ರಕರ್ತೆ ಧನ್ಯಾ ರಾಜೇಂದ್ರನ್ ವಿರುದ್ಧದ ಅವಹೇಳನಕಾರಿ ವಿಷಯವನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಈ ಹಿಂದೆ ಕೇರಳ ಮೂಲದ ಸುದ್ದಿ ವಾಹಿನಿಗಳಾದ ದಿ ಕರ್ಮ ನ್ಯೂಸ್ ಮತ್ತು ಜನಮ್ ಟಿವಿಯೊಂದಿಗೆ ಜನ್ಮಭೂಮಿಗೂ ಆದೇಶಿಸಿತ್ತು. ಆಗ ಬಿಜೆಪಿ ಮುಖವಾಣಿ ಸುದ್ದಿಯಾಗಿತ್ತು. ಈಗ ಸಂಪಾದಕೀಯದ ಮೂಲಕ ಮತ್ತೊಮ್ಮೆ ಸುದ್ದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...