Homeಮುಖಪುಟಡಾರ್ಜಿಲಿಂಗ್: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಬಿಜೆಪಿ ಶಾಸಕ ಸ್ಪರ್ಧೆ

ಡಾರ್ಜಿಲಿಂಗ್: ಸ್ವಪಕ್ಷದ ಅಭ್ಯರ್ಥಿ ವಿರುದ್ಧ ಬಿಜೆಪಿ ಶಾಸಕ ಸ್ಪರ್ಧೆ

- Advertisement -
- Advertisement -

ಬಿಜೆಪಿಯ ಕುರ್ಸಿಯಾಂಗ್ ಶಾಸಕ ಬಿಷ್ಣು ಪ್ರಸಾದ್ ಶರ್ಮಾ ಅವರು ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ರಾಜು ಬಿಸ್ತಾ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ  ಘೋಷಿಸಿದ್ದಾರೆ.

ತಂತ್ರವಾಗಿ ಸ್ಪರ್ಧಿಸುವಾಗ ಬಿಜೆಪಿಯಲ್ಲೇ ಇರುತ್ತೇನೆ,  ಪಕ್ಷವು ಬಯಸಿದ ಯಾವುದೇ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬಹುದು ಆದರೆ ಅವರು ಪಕ್ಷದೊಂದಿಗಿನ ಸಂಬಂಧವನ್ನು ಸ್ವಂತವಾಗಿ ಕಡಿದುಕೊಳ್ಳುವ ಉದ್ದೇಶವನ್ನು ಹೊಂದಿಲ್ಲ. ಬಿಸ್ತಾ ನಮ್ಮ ಅಭ್ಯರ್ಥಿ ಅಲ್ಲ. ನಮಗೆ ಹೊರಗಿನವರು ಬೇಡ. ಬಿಜೆಪಿಗೆ ಯಾವುದೇ ಮಣ್ಣಿನ ಮಗ ಸಿಗದಿರುವುದು ದುರದೃಷ್ಟಕರ ಎಂದು ಶರ್ಮಾ ಹೇಳಿದ್ದಾರೆ.

ಡಾರ್ಜಿಲಿಂಗ್ ಬೆಟ್ಟಗಳಿಂದ ಬಂದವರಲ್ಲದ ವ್ಯಕ್ತಿಯೊಬ್ಬರು ಬಿಜೆಪಿಯಿಂದ ನಾಮನಿರ್ದೇಶನಗೊಂಡಿರುವುದು ಇದು ನಾಲ್ಕನೇ ಬಾರಿಯಾಗಿದೆ ಮತ್ತು ಅಂತಹ ಅಭ್ಯರ್ಥಿಗಳು ಜನರ ನಿಜವಾದ ಸಮಸ್ಯೆಗಳ ಬಗ್ಗೆ ಧ್ವನಿ  ಎತ್ತುವುದಿಲ್ಲ. ಇದು ಡಾರ್ಜಿಲಿಂಗ್ ಬೆಟ್ಟಗಳಲ್ಲಿರುವ 17 ಲಕ್ಷ ಮತದಾರರಿಗೆ ಮಾಡಿದ ಕಪಾಳಮೋಕ್ಷವಾಗಿದೆ.

ಗೂರ್ಖಾಲ್ಯಾಂಡ್ ಪ್ರತ್ಯೇಕ ರಾಜ್ಯದ ರಚನೆಯ ಧ್ವನಿಯನ್ನು ಬೆಂಬಲಿಸುವ ಕುರ್ಸಿಯಾಂಗ್‌ನ ಬಿಜೆಪಿ ಶಾಸಕರು, 2009ರಿಂದ ಡಾರ್ಜಿಲಿಂಗ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಐತಿಹಾಸಿಕ ಯಶಸ್ಸನ್ನು ಎತ್ತಿ ತೋರಿಸಿದ್ದಾರೆ. ಆದರೆ ಡಾರ್ಜಿಲಿಂಗ್ ಬೆಟ್ಟಗಳೊಂದಿಗೆ ಯಾವುದೇ ಸಂಬಂಧವಿಲ್ಲದ ಅಭ್ಯರ್ಥಿಗಳನ್ನು ಪಕ್ಷವು ಸತತವಾಗಿ ಆಯ್ಕೆ ಮಾಡುತ್ತಿದೆ ಎಂದು ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ಸಾಮಿಕ್ ಭಟ್ಟಾಚಾರ್ಯ, ರಾಜು ಬಿಸ್ತಾ ಅವರನ್ನು ಮರು ನಾಮನಿರ್ದೇಶನ ಮಾಡುವ ನಿರ್ಧಾರ ಅಂತಿಮವಾಗಿದ್ದು, ಈ ವಿಷಯದಲ್ಲಿ ಪಕ್ಷವು ಒಗ್ಗಟ್ಟಾಗಿದೆ. ಬಿಸ್ತಾ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಆದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಶರ್ಮಾ ಅವರ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.

ಗೂರ್ಖಾಲ್ಯಾಂಡ್‌ನ ಬೇಡಿಕೆಯು ಒಂದು ಶತಮಾನದಷ್ಟು ಹಿಂದಿನದು ಆದರೆ ರಾಜ್ಯತ್ವ ಚಳುವಳಿಯು 1986 ರಲ್ಲಿ ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್ (GNLF) ನಾಯಕ ಸುಭಾಷ್ ಘೀಸಿಂಗ್ ನೇತೃತ್ವದಲ್ಲಿ ವೇಗವನ್ನು ಪಡೆಯಿತು. ಈ ಚಳವಳಿಯು ಹಲವಾರು ಸಾವುಗಳಿಗೆ ಕಾರಣವಾಯಿತು ಮತ್ತು 1988ರಲ್ಲಿ ಡಾರ್ಜಿಲಿಂಗ್ ಗೂರ್ಖಾ ಹಿಲ್ ಕೌನ್ಸಿಲ್ ರಚನೆಯೊಂದಿಗೆ ಉತ್ತುಂಗಕ್ಕೇರಿತು. ಈ ಪ್ರದೇಶವು ಅದರ ನಂತರ ಹಲವಾರು ಹಿಂಸಾತ್ಮಕ ಆಂದೋಲನಗಳಿಗೆ ಸಾಕ್ಷಿಯಾಗಿದೆ.

ಇದನ್ನು ಓದಿ: ‘ಅಲ್ಪಸಂಖ್ಯಾತರನ್ನು ರಕ್ಷಿಸುವವರಿಗೆ ಮತ ನೀಡಿ’: ಸಿರೊ ಮಲಬಾರ್ ಚರ್ಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...