Homeಮುಖಪುಟಬಿಜೆಪಿಯ ಅನ್ವರ್ಥನಾಮ 'ಸುಳ್ಳಿನ ಪಕ್ಷ'; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು .

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನವರು ಏನೇ ಆಮಿಷಗಳನ್ನು ತೋರಿಸಿದರೂ ಕೂಡ ಅದಕ್ಕೆ ಮಣಿಯದೇ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ನೀಡಿದ್ದ ಭಾರವಸೆಯಂತೆ ₹470 ಕೋಟಿಗಳ ಅಂದಾಜು ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಕಳೆದ ಚುನಾವಣೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಗಳನ್ನು ಎಂಟು ತಿಂಗಳಲ್ಲಿ ಜಾರಿ ಮಾಡಿ ಭರವಸೆ ಈಡೇರಿಸಿದ್ದೇವೆ. ಬಿಜೆಪಿ, ಜೆಡಿಎಸ್‌ನಂತೆ ನಾವು ಮಾತಿಗೆ ತಪ್ಪುವವರಲ್ಲ. ಬಿಜೆಪಿ, ಜೆಡಿಎಸ್ ಈಗ ಒಂದಾಗಿದ್ದಾರೆ. ಆದರೆ, ಹಿಂದೊಮ್ಮೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನ ನಾಗಿ ಹುಟ್ಟು ತ್ತೇನೆ ಎಂದಿದ್ದರು. ಈಗ ಕೋಮುವಾದಿ ಬಿಜೆಪಿಯವರ ಜೊತೆಗೆ ಸೇರಿದ್ದಾರೆ. ಈಗ ನಾನೇ ಮಗನನ್ನು ಬಿಜೆಪಿಗೆ ಕಳುಹಿಸಿದೆ ಎನ್ನುತ್ತಾರೆ. ನಿಮ್ಮ ಜನತಾದಳ ಜಾತ್ಯತೀತದಲ್ಲಿ ಜಾತ್ಯತೀತ ಎನ್ನುವ ಪದ ತೆಗೆಯಿರಿ. ಅದನ್ನು ಮುಂದುವರಿಸಲು ನಿಮಗೆ ಯಾವುದೇ ನೈತಿಕತೆ ಇಲ್ಲ ಎಂದರು.

20 ಸ್ಥಾನಗಳನ್ನು ಗೆಲ್ಲಲಿದೆ

ಬಿಜೆಪಿ ಢೋಂಗಿತನದ ಮಾತುಗಳನ್ನು ಆಡುತ್ತಾರೆ. 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ. ನೀವು ಆಶೀರ್ವಾದ ಮಾಡುತ್ತೀರಿ ಎಂದು ನಂಬಿಕೆ ಇದೆ ಎಂದರು.

ಶಕ್ತಿ ಯೋಜನೆ: 155 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ

ಜೂನ್ 11 ರಿಂದ ಈವರೆಗೆ ಶಕ್ತಿ ಯೋಜನೆಯಡಿ 155 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿದಿನ 60 ಲಕ್ಷ ಮಹಿಳೆಯರು ಓಡಾಡುತ್ತಿದ್ದಾರೆ ಎಂದು ವಿವರಿಸಿದರು.

ಬಡವರಿಗೆ ಕೇಂದ್ರ ಅಕ್ಕಿ ಕೊಡಲಿಲ್ಲ

ಜನರು ಹಸಿದು ಮಲಗಬಾರದು, ರಾಜ್ಯ ಹಸಿವುಮುಕ್ತವಾಗಬೇಕೆಂದು ಅನ್ನಭಾಗ್ಯ ಜಾರಿ ಮಾಡಲಾಯಿತು. ಬಡವರಿಗೆ ಅಕ್ಕಿ ನೀಡದ ಕೇಂದ್ರದ ಬಿಜೆಪಿ ಪಕ್ಷಕ್ಕೆ ಜನರು ಮತ ಹಾಕಬಾರದು. ಗ್ಯಾರಂಟಿ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ನಾನು ಮಂಡಿಸಿದ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಇಡಲಾಗಿದೆ. 8 ತಿಂಗಳ ಅವಧಿಯಲ್ಲಿ ಎಲ್ಲ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ ಎಂದರು

ಜಾತ್ಯಾತೀತ ಜೆಡಿಎಸ್ ಜಾತಿವಾದಿಗಳ ಜೊತೆ ಮೈತ್ರಿ

ಜೆಡಿಎಸ್ ಪಕ್ಷದವರು ತಮ್ಮ ಪಕ್ಷ ಸೋಲುತ್ತದೆ ಎಂಬ ಕಾರಣಕ್ಕೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಜಾತ್ಯಾತೀತ ಪಕ್ಷ ಎಂದು ಹೇಳಿಕೊಂಡ ಜೆಡಿಎಸ್ ಅವರು ಜಾತಿವಾದಿಗಳ ಜೊತೆ ಸೇರಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮತ್ತೊಮ್ಮೆ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂಬ ವಿಶ್ವಾಸವಿದೆ. 2013-18 ರವರೆಗಿನ ನಮ್ಮ ಅವಧಿಯಲ್ಲಿ ಹೆಚ್ಚಿನ ಭರವಸೆಗಳನ್ನು ಈಡೇರಿಸಿದ್ದೆವು. ಬಿಜೆಪಿ ಹಾಗೂ ಜೆಡಿಎಸ್ ನಂತೆ ಸುಳ್ಳು ಹೇಳದೆ, ಕಾಂಗ್ರೆಸ್ ಪಕ್ಷ ಜನರಿಗಾಗಿ ಕೈಗೊಂಡಿರುವ ಕಾರ್ಯಕ್ರಮದ ಸತ್ಯದ ಆಧಾರದ ಮೇಲೆ ಮತ ಕೇಳಿ ಎಂದು ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದರು.

ಬಿಜೆಪಿ ಅನ್ವರ್ಥನಾಮ ‘ಸುಳ್ಳಿನ ಪಕ್ಷ’

ರಾಜ್ಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕೊಡುಗೆ ಏನು? ಆದರೆ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ಜನರ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಬಿಜೆಪಿಯ ಅನ್ವರ್ಥ ನಾಮವೆಂದರೆ ಸುಳ್ಳಿನ ಪಕ್ಷ. ಸ್ವತಂತ್ರ ಭಾರತದಲ್ಲಿ ಪ್ರಧಾನಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಮತ್ತೊಬ್ಬರಿಲ್ಲ. 15 ಲಕ್ಷ ದೇಶದ ಜನರ ಖಾತೆಗೆ ಹಾಕುವ , ರೈತರ ಆದಾಯ ದುಪ್ಪಟ್ಟು, 7 ಕೋಟಿ ಉದ್ಯೋಗ ಸೃಷ್ಟಿಸುವ ಸುಳ್ಳು ಭರವಸೆಯನ್ನು ನೀಡಿ, ಈಡೇರಿಸಲಿಲ್ಲ ಎಂದರು.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ಫೆ.24 ರವರೆಗೆ ಇಂಟರ್‌ನೆಟ್ ಸೇವೆಗಳ ಸ್ಥಗಿತ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...