Homeಮುಖಪುಟಬಿಜೆಪಿಯ ಅನ್ವರ್ಥನಾಮ 'ಸುಳ್ಳಿನ ಪಕ್ಷ'; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು .

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನವರು ಏನೇ ಆಮಿಷಗಳನ್ನು ತೋರಿಸಿದರೂ ಕೂಡ ಅದಕ್ಕೆ ಮಣಿಯದೇ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ನೀಡಿದ್ದ ಭಾರವಸೆಯಂತೆ ₹470 ಕೋಟಿಗಳ ಅಂದಾಜು ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಕಳೆದ ಚುನಾವಣೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಗಳನ್ನು ಎಂಟು ತಿಂಗಳಲ್ಲಿ ಜಾರಿ ಮಾಡಿ ಭರವಸೆ ಈಡೇರಿಸಿದ್ದೇವೆ. ಬಿಜೆಪಿ, ಜೆಡಿಎಸ್‌ನಂತೆ ನಾವು ಮಾತಿಗೆ ತಪ್ಪುವವರಲ್ಲ. ಬಿಜೆಪಿ, ಜೆಡಿಎಸ್ ಈಗ ಒಂದಾಗಿದ್ದಾರೆ. ಆದರೆ, ಹಿಂದೊಮ್ಮೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನ ನಾಗಿ ಹುಟ್ಟು ತ್ತೇನೆ ಎಂದಿದ್ದರು. ಈಗ ಕೋಮುವಾದಿ ಬಿಜೆಪಿಯವರ ಜೊತೆಗೆ ಸೇರಿದ್ದಾರೆ. ಈಗ ನಾನೇ ಮಗನನ್ನು ಬಿಜೆಪಿಗೆ ಕಳುಹಿಸಿದೆ ಎನ್ನುತ್ತಾರೆ. ನಿಮ್ಮ ಜನತಾದಳ ಜಾತ್ಯತೀತದಲ್ಲಿ ಜಾತ್ಯತೀತ ಎನ್ನುವ ಪದ ತೆಗೆಯಿರಿ. ಅದನ್ನು ಮುಂದುವರಿಸಲು ನಿಮಗೆ ಯಾವುದೇ ನೈತಿಕತೆ ಇಲ್ಲ ಎಂದರು.

20 ಸ್ಥಾನಗಳನ್ನು ಗೆಲ್ಲಲಿದೆ

ಬಿಜೆಪಿ ಢೋಂಗಿತನದ ಮಾತುಗಳನ್ನು ಆಡುತ್ತಾರೆ. 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ. ನೀವು ಆಶೀರ್ವಾದ ಮಾಡುತ್ತೀರಿ ಎಂದು ನಂಬಿಕೆ ಇದೆ ಎಂದರು.

ಶಕ್ತಿ ಯೋಜನೆ: 155 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ

ಜೂನ್ 11 ರಿಂದ ಈವರೆಗೆ ಶಕ್ತಿ ಯೋಜನೆಯಡಿ 155 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿದಿನ 60 ಲಕ್ಷ ಮಹಿಳೆಯರು ಓಡಾಡುತ್ತಿದ್ದಾರೆ ಎಂದು ವಿವರಿಸಿದರು.

ಬಡವರಿಗೆ ಕೇಂದ್ರ ಅಕ್ಕಿ ಕೊಡಲಿಲ್ಲ

ಜನರು ಹಸಿದು ಮಲಗಬಾರದು, ರಾಜ್ಯ ಹಸಿವುಮುಕ್ತವಾಗಬೇಕೆಂದು ಅನ್ನಭಾಗ್ಯ ಜಾರಿ ಮಾಡಲಾಯಿತು. ಬಡವರಿಗೆ ಅಕ್ಕಿ ನೀಡದ ಕೇಂದ್ರದ ಬಿಜೆಪಿ ಪಕ್ಷಕ್ಕೆ ಜನರು ಮತ ಹಾಕಬಾರದು. ಗ್ಯಾರಂಟಿ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ನಾನು ಮಂಡಿಸಿದ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಇಡಲಾಗಿದೆ. 8 ತಿಂಗಳ ಅವಧಿಯಲ್ಲಿ ಎಲ್ಲ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ ಎಂದರು

ಜಾತ್ಯಾತೀತ ಜೆಡಿಎಸ್ ಜಾತಿವಾದಿಗಳ ಜೊತೆ ಮೈತ್ರಿ

ಜೆಡಿಎಸ್ ಪಕ್ಷದವರು ತಮ್ಮ ಪಕ್ಷ ಸೋಲುತ್ತದೆ ಎಂಬ ಕಾರಣಕ್ಕೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಜಾತ್ಯಾತೀತ ಪಕ್ಷ ಎಂದು ಹೇಳಿಕೊಂಡ ಜೆಡಿಎಸ್ ಅವರು ಜಾತಿವಾದಿಗಳ ಜೊತೆ ಸೇರಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮತ್ತೊಮ್ಮೆ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂಬ ವಿಶ್ವಾಸವಿದೆ. 2013-18 ರವರೆಗಿನ ನಮ್ಮ ಅವಧಿಯಲ್ಲಿ ಹೆಚ್ಚಿನ ಭರವಸೆಗಳನ್ನು ಈಡೇರಿಸಿದ್ದೆವು. ಬಿಜೆಪಿ ಹಾಗೂ ಜೆಡಿಎಸ್ ನಂತೆ ಸುಳ್ಳು ಹೇಳದೆ, ಕಾಂಗ್ರೆಸ್ ಪಕ್ಷ ಜನರಿಗಾಗಿ ಕೈಗೊಂಡಿರುವ ಕಾರ್ಯಕ್ರಮದ ಸತ್ಯದ ಆಧಾರದ ಮೇಲೆ ಮತ ಕೇಳಿ ಎಂದು ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದರು.

ಬಿಜೆಪಿ ಅನ್ವರ್ಥನಾಮ ‘ಸುಳ್ಳಿನ ಪಕ್ಷ’

ರಾಜ್ಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕೊಡುಗೆ ಏನು? ಆದರೆ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ಜನರ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಬಿಜೆಪಿಯ ಅನ್ವರ್ಥ ನಾಮವೆಂದರೆ ಸುಳ್ಳಿನ ಪಕ್ಷ. ಸ್ವತಂತ್ರ ಭಾರತದಲ್ಲಿ ಪ್ರಧಾನಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಮತ್ತೊಬ್ಬರಿಲ್ಲ. 15 ಲಕ್ಷ ದೇಶದ ಜನರ ಖಾತೆಗೆ ಹಾಕುವ , ರೈತರ ಆದಾಯ ದುಪ್ಪಟ್ಟು, 7 ಕೋಟಿ ಉದ್ಯೋಗ ಸೃಷ್ಟಿಸುವ ಸುಳ್ಳು ಭರವಸೆಯನ್ನು ನೀಡಿ, ಈಡೇರಿಸಲಿಲ್ಲ ಎಂದರು.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ಫೆ.24 ರವರೆಗೆ ಇಂಟರ್‌ನೆಟ್ ಸೇವೆಗಳ ಸ್ಥಗಿತ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...