Homeಮುಖಪುಟಬಿಜೆಪಿಯ ಅನ್ವರ್ಥನಾಮ 'ಸುಳ್ಳಿನ ಪಕ್ಷ'; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಅವರಿಗೆ ಪಾಠ ಕಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕಕ್ಕೆ ತೆರಿಗೆಯ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಿದರೆ ಅವಮಾನ ಆಯಿತು ಎಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯ ಅನ್ವರ್ಥನಾಮ ‘ಸುಳ್ಳಿನ ಪಕ್ಷ’; ಈ ದ್ರೋಹದ ವಿರುದ್ಧ ಅವರಿಗೆ ಪಾಠ ಕಲಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಳವಳ್ಳಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಮತ್ತು ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ನಂತರ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು .

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನವರು ಏನೇ ಆಮಿಷಗಳನ್ನು ತೋರಿಸಿದರೂ ಕೂಡ ಅದಕ್ಕೆ ಮಣಿಯದೇ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಮಳವಳ್ಳಿಯಲ್ಲಿ ನೀಡಿದ್ದ ಭಾರವಸೆಯಂತೆ ₹470 ಕೋಟಿಗಳ ಅಂದಾಜು ಮೊತ್ತದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.

ಕಳೆದ ಚುನಾವಣೆಯಲ್ಲಿ ಘೋಷಿಸಿದಂತೆ ಐದು ಗ್ಯಾರಂಟಿ ಗಳನ್ನು ಎಂಟು ತಿಂಗಳಲ್ಲಿ ಜಾರಿ ಮಾಡಿ ಭರವಸೆ ಈಡೇರಿಸಿದ್ದೇವೆ. ಬಿಜೆಪಿ, ಜೆಡಿಎಸ್‌ನಂತೆ ನಾವು ಮಾತಿಗೆ ತಪ್ಪುವವರಲ್ಲ. ಬಿಜೆಪಿ, ಜೆಡಿಎಸ್ ಈಗ ಒಂದಾಗಿದ್ದಾರೆ. ಆದರೆ, ಹಿಂದೊಮ್ಮೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನ ನಾಗಿ ಹುಟ್ಟು ತ್ತೇನೆ ಎಂದಿದ್ದರು. ಈಗ ಕೋಮುವಾದಿ ಬಿಜೆಪಿಯವರ ಜೊತೆಗೆ ಸೇರಿದ್ದಾರೆ. ಈಗ ನಾನೇ ಮಗನನ್ನು ಬಿಜೆಪಿಗೆ ಕಳುಹಿಸಿದೆ ಎನ್ನುತ್ತಾರೆ. ನಿಮ್ಮ ಜನತಾದಳ ಜಾತ್ಯತೀತದಲ್ಲಿ ಜಾತ್ಯತೀತ ಎನ್ನುವ ಪದ ತೆಗೆಯಿರಿ. ಅದನ್ನು ಮುಂದುವರಿಸಲು ನಿಮಗೆ ಯಾವುದೇ ನೈತಿಕತೆ ಇಲ್ಲ ಎಂದರು.

20 ಸ್ಥಾನಗಳನ್ನು ಗೆಲ್ಲಲಿದೆ

ಬಿಜೆಪಿ ಢೋಂಗಿತನದ ಮಾತುಗಳನ್ನು ಆಡುತ್ತಾರೆ. 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ. ನೀವು ಆಶೀರ್ವಾದ ಮಾಡುತ್ತೀರಿ ಎಂದು ನಂಬಿಕೆ ಇದೆ ಎಂದರು.

ಶಕ್ತಿ ಯೋಜನೆ: 155 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ

ಜೂನ್ 11 ರಿಂದ ಈವರೆಗೆ ಶಕ್ತಿ ಯೋಜನೆಯಡಿ 155 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿದಿನ 60 ಲಕ್ಷ ಮಹಿಳೆಯರು ಓಡಾಡುತ್ತಿದ್ದಾರೆ ಎಂದು ವಿವರಿಸಿದರು.

ಬಡವರಿಗೆ ಕೇಂದ್ರ ಅಕ್ಕಿ ಕೊಡಲಿಲ್ಲ

ಜನರು ಹಸಿದು ಮಲಗಬಾರದು, ರಾಜ್ಯ ಹಸಿವುಮುಕ್ತವಾಗಬೇಕೆಂದು ಅನ್ನಭಾಗ್ಯ ಜಾರಿ ಮಾಡಲಾಯಿತು. ಬಡವರಿಗೆ ಅಕ್ಕಿ ನೀಡದ ಕೇಂದ್ರದ ಬಿಜೆಪಿ ಪಕ್ಷಕ್ಕೆ ಜನರು ಮತ ಹಾಕಬಾರದು. ಗ್ಯಾರಂಟಿ ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ನಾನು ಮಂಡಿಸಿದ ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಇಡಲಾಗಿದೆ. 8 ತಿಂಗಳ ಅವಧಿಯಲ್ಲಿ ಎಲ್ಲ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ ಎಂದರು

ಜಾತ್ಯಾತೀತ ಜೆಡಿಎಸ್ ಜಾತಿವಾದಿಗಳ ಜೊತೆ ಮೈತ್ರಿ

ಜೆಡಿಎಸ್ ಪಕ್ಷದವರು ತಮ್ಮ ಪಕ್ಷ ಸೋಲುತ್ತದೆ ಎಂಬ ಕಾರಣಕ್ಕೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಜಾತ್ಯಾತೀತ ಪಕ್ಷ ಎಂದು ಹೇಳಿಕೊಂಡ ಜೆಡಿಎಸ್ ಅವರು ಜಾತಿವಾದಿಗಳ ಜೊತೆ ಸೇರಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮತ್ತೊಮ್ಮೆ ಕಾಂಗ್ರೆಸ್ ತೆಕ್ಕೆಗೆ ಬರಲಿದೆ ಎಂಬ ವಿಶ್ವಾಸವಿದೆ. 2013-18 ರವರೆಗಿನ ನಮ್ಮ ಅವಧಿಯಲ್ಲಿ ಹೆಚ್ಚಿನ ಭರವಸೆಗಳನ್ನು ಈಡೇರಿಸಿದ್ದೆವು. ಬಿಜೆಪಿ ಹಾಗೂ ಜೆಡಿಎಸ್ ನಂತೆ ಸುಳ್ಳು ಹೇಳದೆ, ಕಾಂಗ್ರೆಸ್ ಪಕ್ಷ ಜನರಿಗಾಗಿ ಕೈಗೊಂಡಿರುವ ಕಾರ್ಯಕ್ರಮದ ಸತ್ಯದ ಆಧಾರದ ಮೇಲೆ ಮತ ಕೇಳಿ ಎಂದು ಕಾರ್ಯಕರ್ತರಿಗೆ ತಿಳಿಸಲಾಗಿದೆ ಎಂದರು.

ಬಿಜೆಪಿ ಅನ್ವರ್ಥನಾಮ ‘ಸುಳ್ಳಿನ ಪಕ್ಷ’

ರಾಜ್ಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಕೊಡುಗೆ ಏನು? ಆದರೆ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರ ಜನರ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ. ಬಿಜೆಪಿಯ ಅನ್ವರ್ಥ ನಾಮವೆಂದರೆ ಸುಳ್ಳಿನ ಪಕ್ಷ. ಸ್ವತಂತ್ರ ಭಾರತದಲ್ಲಿ ಪ್ರಧಾನಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಮತ್ತೊಬ್ಬರಿಲ್ಲ. 15 ಲಕ್ಷ ದೇಶದ ಜನರ ಖಾತೆಗೆ ಹಾಕುವ , ರೈತರ ಆದಾಯ ದುಪ್ಪಟ್ಟು, 7 ಕೋಟಿ ಉದ್ಯೋಗ ಸೃಷ್ಟಿಸುವ ಸುಳ್ಳು ಭರವಸೆಯನ್ನು ನೀಡಿ, ಈಡೇರಿಸಲಿಲ್ಲ ಎಂದರು.

ಇದನ್ನೂ ಓದಿ; ದೆಹಲಿ ಚಲೋ ಮೆರವಣಿಗೆ: ಫೆ.24 ರವರೆಗೆ ಇಂಟರ್‌ನೆಟ್ ಸೇವೆಗಳ ಸ್ಥಗಿತ ವಿಸ್ತರಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...