Homeಮುಖಪುಟವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

ವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್‌ ಅಲಿ

- Advertisement -
- Advertisement -

ಲೋಕಸಭೆಯಲ್ಲಿ ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಅವರ  ಬಗ್ಗೆ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ನಿಂದನೆ ಮಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಮಧ್ಯೆ ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದನಿಗೆ ಸಮುದಾಯಕ್ಕೆ ಲಿಂಕ್‌ ಮಾಡಿ ದಾಳಿ ಮಾಡಲು ಕರೆಯಲಾಗಿದೆಯೇ? ಎಂದು ಡ್ಯಾನಿಶ್‌ ಅಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಡ್ಯಾನಿಶ್ ಅಲಿ, ರಮೇಶ್ ಬಿಧುರಿ ವಿರುದ್ಧ ಸ್ಪೀಕರ್‌ ಕ್ರಮಕೈಗೊಳ್ಳದಿದ್ದರೆ ನಾನು ಸಂಸತ್‌ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಅವಹೇಳನದಿಂದ ನೊಂದು ರಾತ್ರಿಯಿಡೀ ನನಗೆ ನಿದ್ರೆ ಬಂದಿಲ್ಲ. ವಿಶೇಷ ಅಧಿವೇಶನವನ್ನು ಚುನಾಯಿತ ಸಂಸದರನ್ನು ಅವರ ಸಮುದಾಯದ ಜೊತೆ ಲಿಂಕ್‌ ಮಾಡಿ ದಾಳಿ ಮಾಡಲು(ಅವಹೇಳನ ಮಾಡಲು) ಕರೆಯಲಾಗಿದೆಯಾ ?  ಈ ಬೆಳವಣಿಗೆ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದೆ. ಅವರ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾ ಅಥವಾ  ಅವರಿಗೆ ಪ್ರಚಾರ ನೀಡುತ್ತಾ ಎಂದು ನಾವು ನೋಡುತ್ತೇವೆ. ಇದು ದ್ವೇಷದ ಮಾತು ಎಂದು ಹೇಳಿದ್ದಾರೆ.

ಇದಲ್ಲದೆ  ಸಂಸದ ರಮೇಶ್‌ ಬಿಧುರಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದಿರುವುದಾಗಿ ಡ್ಯಾನಿಶ್‌ ಅಲಿ ಹೇಳಿದ್ದಾರೆ. ಪತ್ರದಲ್ಲಿ ಅವರು ನನ್ನ ವಿರುದ್ಧ ಅತ್ಯಂತ ಅಸಹ್ಯಕರ, ನಿಂದನೀಯ ಪದ ಬಳಕೆ  ಮಾಡಿದ್ದಾರೆ.  ಅವರು ನನ್ನ ವಿರುದ್ಧ ಬಳಸಿದ ಪದಗಳಲ್ಲಿ ‘ಭದ್ವಾ’ (ಪಿಂಪ್), ‘ಕಟ್ವಾ’ (ಸುನ್ನತಿ ಮಾಡಿಸಿಕೊಂಡವರು), ‘ಮುಲ್ಲಾ ಉಗ್ರವಾದಿ’ ಮತ್ತು ‘ಮುಲ್ಲಾ ಆತಂಕ್ವಾದಿ’  ‘(ಮುಸ್ಲಿಂ ಭಯೋತ್ಪಾದಕ) ಇತ್ಯಾದಿ ಇದೆ. ಇದು ಅತ್ಯಂತ ದುರದೃಷ್ಟಕರ ಮತ್ತು ಸ್ಪೀಕರ್ ಆಗಿ ನಿಮ್ಮ ನೇತೃತ್ವದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇದು ನಡೆದಿದೆ. ಈ ಮಹಾನ್ ರಾಷ್ಟ್ರದ ಅಲ್ಪಸಂಖ್ಯಾತ ಸದಸ್ಯ ಮತ್ತು ಚುನಾಯಿತ ಸಂಸದನಾಗಿ ನನಗೆ ನಿಜವಾಗಿಯೂ ಹೃದಯ ವಿದ್ರಾವಕ ಎನಿಸಿದೆ ಎಂದು ಬರೆದಿದ್ದಾರೆ.

ಇನ್ನು ಅವಹೇಳನಕಾರಿ ಹೇಳಿಕೆಯನ್ನು ಕೊಟ್ಟ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಸ್ವಪಕ್ಷದ ಸಂಸದ ನಿಶಿಕಾಂತ್ ದುಬೆ ಟೀಕಿಸಿದ್ದು, ಇಂತಹ ಹೇಳಿಕೆಗಳು ಸುಸಂಸ್ಕೃತ ಸಮಾಜಕ್ಕೆ ಸೂಕ್ತವಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ತಮ್ಮ ಪಕ್ಷದ ಸಂಸದ ರಮೇಶ್ ಬಿಧುರಿ ಮತ್ತೋರ್ವ ಸಂಸದರ ವಿರುದ್ಧ ನೀಡಿದ್ದ ಕೋಮುವಾದಿ ಹೇಳಿಕೆಗಳನ್ನು ಖಂಡಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಅವಹೇಳನಾಕಾರಿ ಹೇಳಿಕೆ ಬಗ್ಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಬಿಜೆಪಿ ಸಂಸದ ಬಿಧುರಿಗೆ ಎಚ್ಚರಿಕೆಯನ್ನು ನೀಡಿದ್ದು, ಲೋಕಸಭೆಯ ಕಡತದಿಂದ ಹೇಳಿಕೆ ತೆಗೆದು ಹಾಕಿರುವುದಾಗಿ ಹೇಳಿದ್ದರು. ರಮೇಶ್ ಬಿಧುರಿ ಅವರು ನೀಡಿರುವ ಹೇಳಿಕೆಯನ್ನು ನಾಗರಿಕ ಸಮಾಜ ಸ್ವೀಕರಿಸಲು ಸಾಧ್ಯವಿಲ್ಲ. ಇದಕ್ಕೆ ಎಷ್ಟು ಖಂಡನೆ ವ್ಯಕ್ತಪಡಿಸಿದರೂ ಸಾಲದು. ಸಂಸದರ ಬಗೆಗಿನ ಹೇಳಿಕೆ ಮತ್ತು ಅಸಭ್ಯ ಪದಗಳ ಬಗ್ಗೆ ತನಿಖೆ ನಡೆಸಬೇಕು ಎಂದು ದುಬೆ ಹೇಳಿದ್ದಾರೆ.

ಬಿಜೆಪಿ ಸಂಸದರ ಹೇಳಿಕೆಗೆ ಪ್ರತಿಪಕ್ಷಗಳು ವ್ಯಾಪಕ ಖಂಡನೆಯನ್ನು ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಪಾರ್ಟಿ ಸಂಸದರಿಗೆ ವಿವರಣೆ ಕೇಳಿ ಶೋಕಾಸ್‌ ನೊಟೀಸ್‌ ನೀಡಿದ್ದು, 15 ದಿನಗಳೊಳಗೆ ಉತ್ತರಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಸಂಸತ್ತಿನಲ್ಲಿ ಮುಸ್ಲಿಂ ವಿರೋಧಿ ನಿಂದನೆ: ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ ಎಂದ ಮಹುವಾ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...