Homeಮುಖಪುಟಬಿಜೆಪಿಯ 'ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಎಂಕೆ ಸ್ಟಾಲಿನ್

ಬಿಜೆಪಿಯ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಎಂಕೆ ಸ್ಟಾಲಿನ್

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ನೀತಿ ಜಾರಿಗಾಗಿ ಬಿಜೆಪಿ ತಯಾರಿ ನಡೆಸುತ್ತಿರುವಾಗಲೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. “ಇದು ಭಾರತದ ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಗೆ ಬೆದರಿಕೆ ಹಾಕುವ ಒಕ್ಕೂಟ ವಿರೋಧಿ ಕ್ರಮ” ಎಂದು ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಚುನಾವಣಾ ಸುಧಾರಣೆಯ ನೆಪದಲ್ಲಿ ಬಿಜೆಪಿ ಏಕೀಕೃತ ಆಡಳಿತವನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

“ಭಾರತವು ಒಕ್ಕೂಟ ವಿರೋಧಿ ಹಾಗೂ ಅಪ್ರಾಯೋಗಿಕ ‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ವಿರೋಧಿಸುತ್ತದೆ. ಏಕೆಂದರೆ, ಅದು ದೇಶವನ್ನು ಏಕೀಕೃತ ಆಡಳಿತದ ಅಪಾಯಗಳಿಗೆ ತಳ್ಳುತ್ತದೆ. ಈ ಪ್ರಕ್ರಿಯೆಯಲ್ಲಿ ಅದರ ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವವನ್ನು ಕೊಲ್ಲುತ್ತದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿಯ ಅಂತಿಮ ಗುರಿ ರಾಷ್ಟ್ರಪತಿ ಆಡಳಿತವನ್ನು ತರುವುದಾಗಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು. “ಇದು ಭಾರತೀಯ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಪ್ರಸ್ತಾವನೆಯು ಅಂಗೀಕಾರವಾದರೆ, ರಾಜ್ಯ ಚುನಾವಣೆಗಳ ವ್ಯವಸ್ಥೆಯನ್ನು ತೆಗೆದುಹಾಕುತ್ತದೆ. ಇದರಿಂದಾಗಿ ಪ್ರಾದೇಶಿಕ ಭಾವನೆಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಭಾರತದ ವೈವಿಧ್ಯತೆಯನ್ನು ನಾಶಪಡಿಸುತ್ತದೆ” ಎಂದು ಸ್ಟಾಲಿನ್ ವಾದಿಸಿದರು.

‘ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ನಿರ್ದಿಷ್ಟ ಚುನಾವಣೆಗಳು, ನಿರ್ಣಾಯಕ ತಪಾಸಣೆ ಮತ್ತು ಸಮತೋಲನಗಳಾಗಿ ಕಾರ್ಯನಿರ್ವಹಿಸುತ್ತವೆ. ಉದ್ದೇಶಿತ ಮಸೂದೆಯು ಅಂಗೀಕರಿಸಿ ಜಾರಿಗೆ ಬಂದರೆ, ದೇಶವು ಅರಾಜಕತೆ ಮತ್ತು ನಿರಂಕುಶಾಧಿಕಾರಕ್ಕೆ ಜಾರಿಬೀಳುವುದನ್ನು ತಡೆಯಲು ಜಾರಿಯಲ್ಲಿರುವ ಕಾನೂನು ತಪಾಸಣೆ ಮತ್ತು ಸಮತೋಲನಗಳನ್ನು ತೆಗೆದುಹಾಕುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ.

ಇಂತಹ ನಿರ್ಣಾಯಕ ಕಾನೂನನ್ನು ಅಂಗೀಕರಿಸಲು ಅಗತ್ಯವಾದ ಸಂಸದೀಯ ಬಹುಮತದ ಕೊರತೆಯ ಹೊರತಾಗಿಯೂ ಬಿಜೆಪಿಯು ಈ ಪ್ರಸ್ತಾಪವನ್ನು ಮುಂದುವರೆಸಿದೆ ಎಂದು ಸ್ಟಾಲಿನ್ ಆರೋಪಿಸಿದರು.

ರಾಜಕೀಯ ಅಂಕಗಳನ್ನು ಇತ್ಯರ್ಥಪಡಿಸುವ, ಭಾರತದ ಪ್ರಗತಿಗೆ ಅಡ್ಡಿಯಾಗುವ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರದ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಎಂದು ಅವರು ಈ ಬಿಜೆಪಿ ಕ್ರಮವನ್ನು ವಿರೋಧಿಸಿದರು.

ಪ್ರಸ್ತಾಪದ ವಿರುದ್ಧ ಐಕ್ಯರಂಗಕ್ಕೆ ಕರೆ ನೀಡಿದ ಸ್ಟಾಲಿನ್, ನೀತಿಯನ್ನು ವಿರೋಧಿಸಲು ಮತ್ತು ಭಾರತದ ಸಂವಿಧಾನವನ್ನು ರಕ್ಷಿಸಲು ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒತ್ತಾಯಿಸಿದರು. “ಭಾರತ, ಅದರ ವೈವಿಧ್ಯತೆ ಮತ್ತು ಸಂವಿಧಾನವನ್ನು ಉಳಿಸಲು ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು. ಚುನಾವಣಾ ಸುಧಾರಣೆಯ ಉಡುಪಿನಲ್ಲಿ ಹೇರಲಾದ ಈ ಅಸಹ್ಯಕರ ನೀತಿ ವಿರುದ್ಧ ಹಲ್ಲು ಮತ್ತು ಉಗುರುಗಳೊಂದಿಗೆ ಹೋರಾಡಬೇಕು” ಎಂದು ಅವರು ಹೇಳಿದರು.

ಸ್ಟಾಲಿನ್ ಹೇಳಿಕೆಗಳು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪದ ಬಗ್ಗೆ ಹೆಚ್ಚುತ್ತಿರುವ ಟೀಕೆಗಳನ್ನು ತೀವ್ರಗೊಳಿಸುತ್ತದೆ. ಈ ನಿರ್ಧಾರವು ಫೆಡರಲಿಸಂ ಅನ್ನು ದುರ್ಬಲಗೊಳಿಸಿ, ರಾಜ್ಯ ಚುನಾವಣೆಗಳ ಪ್ರಾಮುಖ್ಯತೆಯನ್ನು ಕಡಿಮೆ ಮಾಡುತ್ತದೆ ಎಂದು ವಿರೋಧ ಪಕ್ಷಗಳು ವಾದಿಸುತ್ತಿವೆ.

ಈ ಮಸೂದೆಯನ್ನು ಟೀಕಿಸಿದವರಲ್ಲಿ ಸ್ಟಾಲಿನ್ ಮೊದಲಿಗರು,  “ಈ ಅಪ್ರಾಯೋಗಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮವು ಪ್ರಾದೇಶಿಕ ಧ್ವನಿಗಳನ್ನು ಅಳಿಸಿಹಾಕುತ್ತದೆ, ಫೆಡರಲಿಸಂ ಅನ್ನು ನಾಶಪಡಿಸುತ್ತದೆ ಮತ್ತು ಆಡಳಿತವನ್ನು ಅಡ್ಡಿಪಡಿಸುತ್ತದೆ. ಎದ್ದೇಳಿ ಭಾರತ! ಭಾರತೀಯ ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ನಮ್ಮೆಲ್ಲ ಶಕ್ತಿಯಿಂದ ವಿರೋಧಿಸೋಣ” ಎಂದು ಸ್ಟಾಲಿನ್ ಹೇಳಿದರು.

“ಒಂದು ರಾಷ್ಟ್ರ, ಒಂದು ಚುನಾವಣೆ” ನೀತಿ ಎಂದರೇನು?

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳು ಸೇರಿದಂತೆ ಎಲ್ಲ ಚುನಾವಣೆಗಳು ಏಕಕಾಲದಲ್ಲಿ ನಡೆಯುವ ಏಕೀಕೃತ ಚುನಾವಣಾ ಪ್ರಕ್ರಿಯೆಯನ್ನು ನೀತಿಯು ಪ್ರಸ್ತಾಪಿಸುತ್ತದೆ. ಪ್ರಸ್ತುತ, ಭಾರತವು ವಿವಿಧ ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳಿಗೆ ವಿವಿಧ ಸಮಯಗಳಲ್ಲಿ ಚುನಾವಣೆಗಳನ್ನು ನಡೆಸುವ ವ್ಯವಸ್ಥೆಯನ್ನು ಅನುಸರಿಸುತ್ತದೆ.

ಈ ಪ್ರಸ್ತಾಪದ ಅಡಿಯಲ್ಲಿ, ಮತದಾರರು ಒಂದೇ ದಿನದಲ್ಲಿ ಸರ್ಕಾರದ ಎರಡೂ ಹಂತಗಳಿಗೆ ತಮ್ಮ ಮತಗಳನ್ನು ಚಲಾಯಿಸುತ್ತಾರೆ. ಚುನಾವಣೆಗಳ ಒತ್ತಡವನ್ನು ಕಡಿಮೆ ಮಾಡುವ, ಆಡಳಿತ ಪ್ರಕ್ರಿಯೆಗೆ ದಕ್ಷತೆ ಮತ್ತು ಸ್ಥಿರತೆಯನ್ನು ತರುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ಹೇಳಿಕೊಂಡಿದೆ.

ಭಾನುವಾರ ಹೊರಡಿಸಿದ ಕಲಾಪದ ಪರಿಷ್ಕೃತ ಪಟ್ಟಿಯಂತೆ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಪರಿಚಯಿಸುವುದನ್ನು ಸರ್ಕಾರ ಮುಂದೂಡಿದೆ.

ಇದನ್ನೂ ಓದಿ; ‘ಭಾರತೀಯರು ಮಾಡಲು ಸಾಕಷ್ಟಿದೆ..’; ವಾರಕ್ಕೆ 70 ಗಂಟೆಗಳ ಕೆಲಸದ ಹೇಳಿಕೆ ಸಮರ್ಥಿಸಿಕೊಂಡ ನಾರಾಯಣ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...