Homeಮುಖಪುಟ'ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ' : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

‘ರಾಷ್ಟ್ರಪತಿ ಮುಂದಿಟ್ಟುಕೊಂಡು ಬಿಜೆಪಿಯಿಂದ ರಾಜಕೀಯ’ : ದ್ರೌಪದಿ ಮುರ್ಮು ಆರೋಪಗಳಿಗೆ ಮಮತಾ ಬ್ಯಾನರ್ಜಿ ತಿರುಗೇಟು

- Advertisement -
- Advertisement -

‘ಅಂತಾರಾಷ್ಟ್ರೀಯ ಸಂತಾಲ್’ ಸಮ್ಮೇಳನದ ಸ್ಥಳ ಬದಲಾವಣೆ, ಶಿಷ್ಟಾಚಾರ ಉಲ್ಲಂಘನೆ ಸೇರಿದಂತೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿರುವ ಆರೋಪಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿರುಗೇಟು ಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಆಯೋಜಿಸಿದ್ದ ‘ಆದಿವಾಸಿಗಳ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನ’ಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಮಾ.7) ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಉತ್ತರ ಬಂಗಾಳದಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನಕ್ಕೆ ರಾಜ್ಯ ಸರ್ಕಾರ ಮೊದಲು ಅನುಮತಿ ನಿರಾಕರಿಸಿತ್ತು ಎಂದು ರಾಷ್ಟ್ರಪತಿ ಆರೋಪಿಸಿದ್ದರು.

ಕೊನೆಯ ಕ್ಷಣದಲ್ಲಿ ಸಮ್ಮೇಳನವನ್ನು ಡಾರ್ಜಿಲಿಂಗ್ ಜಿಲ್ಲೆಯ ಬಿಧಾನನಗರದಿಂದ ಸಿಲಿಗುರಿ ಹೊರವಲಯದ ಗೋಸೈನ್‌ಪುರಕ್ಕೆ ವರ್ಗಾಯಿಸಲಾಗಿದೆ ಎಂದಿದ್ದರು. ಅಲ್ಲದೆ, ರಾಷ್ಟ್ರಪತಿ ಪಶ್ಚಿಮ ಬಂಗಾಳಕ್ಕೆ ಆಗಮಿಸಿದಾಗ ಸಿಎಂ ಮಮತಾ ಬ್ಯಾನರ್ಜಿ ಅಥವಾ ಯಾವುದೇ ಹಿರಿಯ ಸಚಿವರು ಅವರನ್ನು ಸ್ವಾಗತಿಸಲು ಬರದಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಬೆಟ್ಟು ಮಾಡಿದ್ದರು.

ಬಂಗಾಳದಲ್ಲಿ ಬುಡಕಟ್ಟು ಸಮುದಾಯದ ಅಭಿವೃದ್ಧಿ ಸರಿಯಾಗಿ ನಡೆಯುತ್ತಿದೆಯೇ ಎಂದು ಅವರು ಪ್ರಶ್ನಿಸಿದ್ದರು.

ದಾಖಲೆ ಸಹಿತ ಮಮತಾ ತಿರುಗೇಟು

ರಾಷ್ಟ್ರಪತಿಯ ಗಂಭೀರ ಆರೋಪಗಳಿಗೆ ಸಿಎಂ ಮಮತಾ ಬ್ಯಾನರ್ಜಿ ದಾಖಲೆ ಸಹಿತ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ರಾಷ್ಟ್ರಪತಿಯ ಕಾರ್ಯಾಲಯ ಅನುಮೋದಿಸಿದ ಕಾರ್ಯಕ್ರಮದ ಪಟ್ಟಿಯಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಚಿವರು ಹಾಜರಿರಬೇಕೆಂದು ಎಲ್ಲಿಯೂ ಉಲ್ಲೇಖಿಸಿರಲಿಲ್ಲ ಮತ್ತು ಈ ಕಾರ್ಯಕ್ರಮವನ್ನು ಖಾಸಗಿ ಸಂಸ್ಥೆಯೊಂದು ಆಯೋಜಿಸಿತ್ತು ಎಂದು ಹೇಳಿದ್ದಾರೆ. ಅಲ್ಲದೆ, ಬಿಧಾನನಗರವು ಕಾರ್ಯಕ್ರಮದ ಆರಂಭಿಕ ಸ್ಥಳವಾಗಿತ್ತು ಎಂಬ ಬಗ್ಗೆ ಯಾವುದೇ ದಾಖಲೆಗಳಲ್ಲಿ ಉಲ್ಲೇಖವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾರ್ಯಕ್ರಮವು ಮೊದಲಿನಿಂದಲೂ ಗೊಸೈನ್‌ಪುರದಲ್ಲಿಯೇ ನಡೆಯಬೇಕಿತ್ತು ಎಂದು ಅವರು ಹೇಳಿದ್ದಾರೆ. ರಾಷ್ಟ್ರಪತಿ ಭವನಕ್ಕೆ ನೀಡಲಾದ ಮೂಲ ದಾಖಲೆಗಳಲ್ಲಿಯೂ ಇದೇ ಸ್ಥಳದ ಉಲ್ಲೇಖವಿದೆಯೇ ಹೊರತು ಬಿಧಾನನಗರದ್ದಲ್ಲ ಎಂದು ಅವರು ವಾದಿಸಿದ್ದಾರೆ.

ಸಿಲಿಗುರಿ ಜಿಲ್ಲಾಡಳಿತವು ಕಾರ್ಯಕ್ರಮದ ಸ್ಥಳದಲ್ಲಿ ವ್ಯವಸ್ಥೆಗಳ ಕೊರತೆಯಿರುವ ಬಗ್ಗೆ ರಾಷ್ಟ್ರಪತಿಯ ಕಾರ್ಯಾಲಯಕ್ಕೆ ಮುಂಚಿತವಾಗಿಯೇ ಮಾಹಿತಿ ನೀಡಿತ್ತು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅವರು ಹಂಚಿಕೊಂಡ ದಾಖಲೆಗಳ ಪ್ರಕಾರ, ಕಾರ್ಯಕ್ರಮ ಗೊಸೈನ್‌ಪುರದಲ್ಲಿಯೇ ನಡೆಯಬೇಕಿತ್ತು. ರಾಷ್ಟ್ರಪತಿ ಭೇಟಿಗೆ ಎರಡು ದಿನಗಳ ಮೊದಲು ತೆಗೆಯಲಾದ ಫೋಟೋಗಳನ್ನು ಸಿಎಂ ಬಿಡುಗಡೆ ಮಾಡಿದ್ದು, ಅವುಗಳಲ್ಲಿ ಸಾರ್ವಜನಿಕ ಸಮಾರಂಭಕ್ಕೆ ಅಗತ್ಯವಿರುವ ಯಾವುದೇ ಸೌಲಭ್ಯಗಳಿಲ್ಲದ ಬಂಜರು ಮೈದಾನವನ್ನು ಕಾಣಬಹುದು.

ಖಾಸಗಿ ಸಂಸ್ಥೆಯಾದ ಅಂತಾರಾಷ್ಟ್ರೀಯ ಸಂತಾಲ್ ಕೌನ್ಸಿಲ್, ಗೌರವಾನ್ವಿತ ರಾಷ್ಟ್ರಪತಿಯವರನ್ನು ಸಿಲಿಗುರಿಯಲ್ಲಿ ಆಯೋಜಿಸಿದ್ದ 9ನೇ ಅಂತಾರಾಷ್ಟ್ರೀಯ ಆದಿವಾಸಿ ಸಂತಾಲ್ ಸಮ್ಮೇಳನಕ್ಕೆ ಆಹ್ವಾನಿಸಿತ್ತು. ಮುಂಗಡ ಭದ್ರತಾ ಸಂಪರ್ಕದ ನಂತರ, ಸಂಘಟಕರು ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಜಿಲ್ಲಾಡಳಿತವು ರಾಷ್ಟ್ರಪತಿಯ ಕಾರ್ಯಾಲಯಕ್ಕೆ ಲಿಖಿತವಾಗಿ ಮಾಹಿತಿ ನೀಡಿತ್ತು; ಈ ವಿಷಯವನ್ನು ದೂರವಾಣಿ ಮೂಲಕವೂ ತಿಳಿಸಲಾಗಿತ್ತು. ರಾಷ್ಟ್ರಪತಿಯ ಸಚಿವಾಲಯದ ಮುಂಗಡ ತಂಡವು ದಿನಾಂಕ 05.03.26 ರಂದು ಭೇಟಿ ನೀಡಿದಾಗಲೂ ವ್ಯವಸ್ಥೆಗಳ ಕೊರತೆಯ ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿತ್ತು, ಆದರೂ ಕಾರ್ಯಕ್ರಮವು ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರಿಯಿತು” ಎಂದು ಸಿಎಂ ಮಮತಾ ಬ್ಯಾನರ್ಜಿ ಎಕ್ಸ್‌ ಹಾಗೂ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರಪತಿಯವರ ತಂಡವು ಮೊದಲೇ ಅನುಮೋದಿಸಿದ ಪಟ್ಟಿಯಂತೆಯೇ ಸಿಲಿಗುರಿ ಮೇಯರ್, ಡಾರ್ಜಿಲಿಂಗ್ ಜಿಲ್ಲಾಧಿಕಾರಿ ಮತ್ತು ಸಿಲಿಗುರಿ ಪೊಲೀಸ್ ಕಮಿಷನರ್ ಅವರು ರಾಷ್ಟ್ರಪತಿ ಮುರ್ಮು ಅವರನ್ನು ಸ್ವಾಗತಿಸಿ, ಬೀಳ್ಕೊಟ್ಟಿದ್ದಾರೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಷ್ಟ್ರಪತಿಯ ಸಚಿವಾಲಯ ಹಂಚಿಕೊಂಡಿದ್ದ ಅನುಮೋದಿತ ಪಟ್ಟಿಯ ಪ್ರಕಾರವೇ ಗೌರವಾನ್ವಿತ ರಾಷ್ಟ್ರಪತಿಯವರನ್ನು ಸಿಲಿಗುರಿ ಮಹಾನಗರ ಪಾಲಿಕೆಯ ಮೇಯರ್, ಡಾರ್ಜಿಲಿಂಗ್ ಜಿಲ್ಲಾಧಿಕಾರಿ ಮತ್ತು ಸಿಲಿಗುರಿ ಪೊಲೀಸ್ ಕಮಿಷನರ್ ಅವರು ಸ್ವಾಗತಿಸಿ, ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿದ್ದಾರೆ. ಈ ಪಟ್ಟಿಯಲ್ಲಾಗಲಿ ಅಥವಾ ವೇದಿಕೆಯ ಕಾರ್ಯಕ್ರಮದಲ್ಲಾಗಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯವರ ಹೆಸರು ಇರಲಿಲ್ಲ. ಆದ್ದರಿಂದ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಶಿಷ್ಟಾಚಾರದ ಉಲ್ಲಂಘನೆಯಾಗಿಲ್ಲ ಎಂದು ಮಮತಾ ಬ್ಯಾನರ್ಜಿ ತಮ್ಮ ಪೋಸ್ಟ್‌ನಲ್ಲಿ ವಿವರಿಸಿದ್ದಾರೆ.

ಬಿಜೆಪಿಯು ‘ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ತನ್ನ ಪಕ್ಷದ ಕಾರ್ಯಸೂಚಿಗಾಗಿ ಅಗೌರವಗೊಳಿಸುತ್ತಿದೆ ಮತ್ತು ದುರುಪಯೋಗಪಡಿಸಿಕೊಳ್ಳುತ್ತಿದೆ’ ಎಂದು ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದು, ‘ಇದು ಅತ್ಯಂತ ದುರದೃಷ್ಟಕರ’ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಮಾಡಿರುವ ಆರೋಪಗಳನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪಶ್ಚಿ ಬಂಗಾಳ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದರು. “ಬಂಗಾಳ ಸರ್ಕಾರ ರಾಷ್ಟ್ರಪತಿಗೆ ಅವಮಾನ ಮಾಡುತ್ತಿರುವುದು ಅತ್ಯಂತ ನಾಚಿಕೆಗೇಡು, ಇದು ಹಿಂದೆಂದೂ ನಡೆಯದ ಘಟನೆ ಎಂದು ಹೇಳಿದ್ದರು.

ಪ್ರಧಾನಿಯವರು ಹೀಗೆ ಹೇಳಿದ ಕೂಡಲೇ ವಿವಾದ ದೊಡ್ಡದಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ, “ರಾಷ್ಟ್ರಪತಿ ಸ್ವತಂತ್ರವಾಗಿ ಕೆಲಸ ಮಾಡುತ್ತಿಲ್ಲ, ಅವರು ಬಿಜೆಪಿಯ ಪರವಾಗಿ (ಬಿಜೆಪಿ ಹೇಳಿದಂತೆ) ನಡೆದುಕೊಳ್ಳುತ್ತಿದ್ದಾರೆ” ಎಂದು ನೇರವಾಗಿ ಆರೋಪ ಮಾಡಿದ್ದಾರೆ.

ರಾಷ್ಟ್ರಪತಿಯನ್ನು ಬಳಸಿಕೊಂಡು ಬಿಜೆಪಿಯ ಸಲಹೆಯಂತೆ ರಾಜಕೀಯ ಮಾಡಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೋಲ್ಕತ್ತಾದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದನ್ನು ಹೇಳಲು ನನಗೆ ನಾಚಿಕೆಯಾಗುತ್ತಿದೆ. ಗೌರವಾನ್ವಿತ ರಾಷ್ಟ್ರಪತಿಗಳ ಮೇಲೆ ನಮಗೆ ಅಪಾರ ಗೌರವವಿದೆ. ಆದರೆ, ಅವರನ್ನು ಇಲ್ಲಿಗೆ ಕೇವಲ ರಾಜಕೀಯ ಮಾಡಲು ಕಳುಹಿಸಲಾಗಿದೆ ಎಂದು ದೂರಿದ್ದಾರೆ.

“ಕ್ಷಮಿಸಿ ಮೇಡಂ, ನಿಮ್ಮ ಬಗ್ಗೆ ನನಗೆ ಬಹಳ ಗೌರವವಿದೆ. ಆದರೆ ನೀವು ಈಗ ಸಂಪೂರ್ಣವಾಗಿ ಬಿಜೆಪಿಯ ನೀತಿಗಳು ಮತ್ತು ಅವರ ಸೂಚನೆಗಳಂತೆ ನಡೆಯುತ್ತಿದ್ದೀರಿ” ಎಂದು ಮಮತಾ ನೇರವಾಗಿ ರಾಷ್ಟ್ರಪತಿಗೆ ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಸಂದರ್ಭದಲ್ಲೇ ರಾಷ್ಟ್ರಪತಿ ಪಶ್ಚಿಮ ಬಂಗಾಳಕ್ಕೆ ಪದೇ ಪದೇ ಭೇಟಿ ನೀಡುತ್ತಿರುವುದನ್ನು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ನೀವು ವರ್ಷಕ್ಕೊಮ್ಮೆ ಬಂದರೆ ನಾನು ನಿಮ್ಮನ್ನು ಸ್ವಾಗತಿಸಬಹುದು. ಆದರೆ, ಚುನಾವಣೆ ಇರುವಾಗ ನೀವು ಪದೇ ಪದೇ ಬರುತ್ತಿದ್ದರೆ, ನಮಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸಲು ಹೇಗೆ ಸಾಧ್ಯ? ನಾವು ಯಾವಾಗಲೂ ನಿಮ್ಮನ್ನೇ ಹಿಂಬಾಲಿಸಿಕೊಂಡಿರಬೇಕೇ?” ಎಂದು ಮಮತಾ ಪ್ರಶ್ನಿಸಿದ್ದಾರೆ.

“ಗಾಳಿಪಟ ಹಾರಿಸುವವನು ದಾರ ಹಿಡಿದು ಓಡುವಂತೆ ನಾವು ಸದಾ ನಿಮ್ಮ ಹಿಂದೆ ಓಡಬೇಕೇ? ಗಾಳಿಪಟವನ್ನು ವರ್ಷಕ್ಕೆ ಒಮ್ಮೆ ವಿಶ್ವಕರ್ಮ ಪೂಜೆಯ ಸಮಯದಲ್ಲಿ ಹಾರಿಸಲಾಗುತ್ತದೆ (ಆದರೆ ನೀವು ಯಾವಾಗಲೂ ಬರುತ್ತಿದ್ದೀರಿ)” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...