Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...