Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....