Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....