Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...