Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...