Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....