Homeನಿಜವೋ ಸುಳ್ಳೋವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

- Advertisement -
- Advertisement -

ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು “ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ “ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ ಓಂ ಅನ್ನು ಕೂಡಾ ನಿಷೇಧ ಮಾಡುವ ದಿನ ದೂರವಿಲ್ಲ, ಜಾತ್ಯಾತೀತತೆ ಜಿಂದಾಬಾದ್” ಎಂದು ಪತ್ರಿಕೆಯೊಂದರ ಮೊದಲ ಪುಟದ ಚಿತ್ರವನ್ನು ಟ್ವಿಟ್ಟರಿನಲ್ಲಿ (ಆರ್ಕೈವ್ ನೋಡಿ) ಹಂಚಿಕೊಂಡಿದ್ದಾರೆ.

ಅವರ ಈ ಟ್ವೀಟನ್ನು ತಗೆದು ಹಾಕುವ ಮೊದಲು ಸುಮಾರು 14,000 ಲೈಕ್‌ಗಳು ಹಾಗೂ 4,000 ರಿಟ್ವೀಟ್‌ಗಳನ್ನು ಗಳಿಸಿತ್ತು.ಇತರ ಕೆಲವು ಟ್ವಿಟ್ಟರ್‌ ಬಳಕೆದಾರರು ಕೂಡಾ ಇದನ್ನು ನಂಬಿ ಹಂಚಿಕೊಂಡಿದ್ದರು.

@theskindoctor13 ಎಂಬ ಟ್ವಿಟರ್ ಹ್ಯಾಂಡಲ್ ಇದನ್ನು ಸೈಬರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿತ್ತು ಟ್ವೀಟ್ ಮಾಡಿತ್ತು.

ನಿಜವಾಗಿಯೂ ನಡೆದದ್ದೇನು?

ಪತ್ರಿಕೆಯ ಚಿತ್ರವೂ ಕಂಪ್ಯೂಟರ್ ರಚಿತ ಸ್ಪೂಫ್ ಪತ್ರಿಕೆ ಎಂಬ ಅಂಶವನ್ನು ಪೂನಿಯಾ ಗಮನಿಸದೆ ಇದ್ದುದರಿಂದ ಇಷ್ಟೆಲ್ಲ ರಾದ್ದಾಂತಗಳಾಗಿವೆ. ಪತ್ರಿಕೆಯ ಹೆಸರು ‘ಡೆಕ್ಕನ್ ಕ್ರೊನಿಕಲ್’ ಮತ್ತು ‘ವಿಡಂಬನೆ ಮಾಡಿದವರು @theskindoctor13’ ಎಂದು ಪತ್ರಿಕೆಯ ಬಲಗಡೆ ಕೊನೆಯಲ್ಲಿ ಸ್ಪಷ್ಟವಾಗಿ ಬರೆಯಲಾಗಿದೆ.


ಇದನ್ನೂ ಓದಿ: Fact Check: ಸುಳ್ಳು ಹೇಳಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌


ಆದರೆ ಪೂನಿಯಾ ಶರಿಯಾ ಮತ್ತು ಜಾತ್ಯಾತೀತತೆಯನ್ನು ಉಲ್ಲೇಖಿಸುವ ಆತುರದಲ್ಲಿ ಪತ್ರಿಕೆಯಲ್ಲಿದ್ದ ವಿಡಂಬನೆಯನ್ನು ಗಮನಿಸಿರಲಿಲ್ಲ. ಪತ್ರಿಕೆಯೂ ‘ಯುನೆಸ್ಕೋ ಸೈಬರಾಬಾದ್ ಪೊಲೀಸರನ್ನು ವಿಶ್ವದ ಅತ್ಯಂತ ಜಾತ್ಯತೀತ ಪೊಲೀಸ್ ಎಂದು ಘೋಷಿಸಿದೆ’ ಎಂದು ಬರೆದಿದೆ.

ನೀಲಂ ಸಿಂಗ್ ಎಂಬ ಟ್ವಿಟ್ಟರ್ ಬಳಕೆದಾರ @theskindoctor ಹೆಸರಿನೊಂದಿಗೆ ‘ಹಿಂದೂ ಹಣ್ಣಿನ ಅಂಗಡಿ’  ಎಂದು ಹೋರ್ಡಿಂಗ್ ಅನ್ನು ಹಾಕಿದ್ದಕ್ಕೆ ಜಾರ್ಖಂಡ್‌ನಲ್ಲಿ ಪೋಲಿಸರು ಮಾರಾಟಗಾರನ ವಿರುದ್ದ ಪ್ರಕರಣ ದಾಖಲಿಸಿದ್ದರಿಂದ ಅದಕ್ಕೆ ಪ್ರತಿಕ್ರಿಯೆಯಾಗಿ ವಿಡಂಬನಾತ್ಮಕ ಕ್ಲಿಪಿಂಗ್ ಮಾಡಿದ್ದರು. ತೆಲಂಗಾಣದಲ್ಲಿ ಕೂಡಾ ಇದೇ ರೀತಿಯ ಪ್ರಕರಣಗಳು ವರದಿಯಾಗಿತ್ತು. ಟ್ವಿಟ್ಟರ್‌ ಬಳಕೆದಾರರೊಬ್ಬರು ಪೊಲೀಸರನ್ನು ಟ್ಯಾಗ್ ಮಾಡಿ ಅತ್ತಾಪುರದಲ್ಲಿ ತರಕಾರಿ ಮಾರಾಟಗಾರರೊಬ್ಬರು ತಮ್ಮ ಗಾಡಿಗಳಲ್ಲಿ ಕೇಸರಿ ಧ್ವಜಗಳನ್ನು ಅಳವಡಿಸಿದ್ದಾರೆ ಎಂದು ಆರೋಪಿಸಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸೈಬದರಾಬಾದ್ ಪೊಲೀಸರು ರಾಜೇಂದ್ರ ನಗರ ಪೊಲೀಸ್ ಠಾಣೆಯನ್ನು ಟ್ಯಾಗ್ ಮಾಡಿದ್ದಾರೆ. ಇದರಿಂದಾಗಿ ಶಾಸಕ ಅರವಿಂದ್ ಧರ್ಮಪುರಿ ಸೇರಿದಂತೆ ಹಲವಾರು ಬಿಜೆಪಿ ಸದಸ್ಯರು ಪೊಲೀಸ್ ಠಾಣೆಯನ್ನು ಏಕೆ ಟ್ಯಾಗ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

 

ಇದಕ್ಕಾಗಿ @ theskindoctor13 ಎಂಬ ಬಳಕೆದಾರ ವಿಡಂಬನಾತ್ಮಕ ವೃತ್ತಪತ್ರಿಕೆ ಕ್ಲಿಪಿಂಗ್ ತಯಾರಿಸಿ ಅದನ್ನು ಪ್ರಶ್ನಿಸಿದ್ದರು. ಈಗ ಪೊಲೀಸರು ವಿಡಂಬನೆ ಮಾಡಿದ್ದಕ್ಕೆ ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಅಮಿತ್ ಷಾ ಸುಳ್ಳು ಹೇಳಿದ್ದೇಕೆ ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...