Homeಮುಖಪುಟಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

ಮನೆಯಲ್ಲೇ ಲಸಿಕೆ ಪಡೆದ ಸಂಸದೆ ಪ್ರಜ್ಞಾ ಠಾಕೂರ್: ಖಂಡನೆ

ಪ್ರಜ್ಞಾ ಠಾಕೂರ್ 2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.

- Advertisement -
- Advertisement -

ಅನಾರೋಗ್ಯದ ಕಾರಣ ನೀಡಿ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ರಿಯಾಯಿತಿ ನೀಡುವಂತೆ ಕೇಳಿಕೊಂಡು, ಬಳಿಕ ನೃತ್ಯ ಮಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಈಗ ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಮತ್ತೆ ಹೊಸ ವಿವಾದದಲ್ಲಿ ಸಿಲುಕಿದ್ದಾರೆ.

ಭೋಪಾಲ್ ಸಂಸದೆ ಮನೆಯಲ್ಲಿಯೇ ಲಸಿಕೆ ಪಡೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಅವರ ಮೊದಲ ಕೊರೊನಾ ಲಸಿಕೆಯ ಡೋಸ್ ಎಂದು ತಿಳಿದುಬಂದಿದೆ.

ವಿವಾದಗಳಿಗೆ ಉತ್ತರಿಸಿರುವ ರಾಜ್ಯ ಆಡಳಿತ ಅಧಿಕಾರಿಗಳು, ’ಪ್ರಜ್ಞಾ ಠಾಕೂರ್ ಅವರು ವೃದ್ಧರು ಮತ್ತು ಅಂಗವಿಕಲರಿಗೆ ಇರುವ ವಿಶೇಷ ನಿಯಮಗಳ ಅಡಿಯಲ್ಲಿ ಮನೆ ವ್ಯಾಕ್ಸಿನೇಷನ್ ಪಡೆಯಲು ಅರ್ಹರಾಗಿದ್ದಾರೆ’ ಎಂದಿದ್ದಾರೆ.

“ನಿಯಮಗಳ ಪ್ರಕಾರ, ವೃದ್ಧರು ಮತ್ತು ಅಂಗವಿಕಲರಿಗೆ ಅವರ ಮನೆಗಳಿಗೆ ತೆರಳಿ ಲಸಿಕೆ ನೀಡಲಾಗುವುದು, ಆದ್ದರಿಂದ ಪ್ರಜ್ಞಾ ಠಾಕೂರ್ ಅವರಿಗೆ ಲಸಿಕೆಯ ಮೊದಲ ಡೋಸ್ ನೀಡುವಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿಲ್ಲ” ಎಂದು ಅಧಿಕಾರಿ ಸಂತೋಷ್ ಶುಕ್ಲಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಪ್ರಜ್ಞಾ ಠಾಕೂರ್‌ ವಿಚಾರದಲ್ಲಿ ಮೋದಿ ಮನಸು ಬದಲಾಯಿಸಿದ ಹಾಗಿದೆ’: ಕಾಂಗ್ರೆಸ್‌‌ ಆಕ್ರೋಶ

 

“ನಮ್ಮ ಭೋಪಾಲ್ ಸಂಸದೆ ಪ್ರಜ್ಞಾ ಠಾಕೂರ್ ಅವರು ಕೆಲವೇ ದಿನಗಳ ಹಿಂದೆ ಬ್ಯಾಸ್ಕೆಟ್‌ಬಾಲ್ ಆಡುತ್ತಿದ್ದರು ಮತ್ತು ಡೋಲಿನ ತಾಳಕ್ಕೆ ನೃತ್ಯ ಮಾಡುತ್ತಿದ್ದರು. ಆದರೆ, ಅವರಿಗೆ ಲಸಿಕೆ ಹಾಕಲು ತಂಡವೊಂದು ಮನೆಗೆ ತೆರಳಿದೆ. ಪ್ರಧಾನಿ ನರೇಂದ್ರ ಮೋದಿಯಿಂದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವರೆಗೆ ಎಲ್ಲಾ ಎಲ್ಲಾ ಬಿಜೆಪಿ ನಾಯಕರು ಲಸಿಕೆ ಪಡೆಯಲು ಆಸ್ಪತ್ರೆಗಳಿಗೆ ಹೋಗಿದ್ದಾರೆ. ಇವರಿಗೆ ಮಾತ್ರ ಏಕೆ ಇಂತಹ ವಿನಾಯಿತಿ..?” ಎಂದು ಕಾಂಗ್ರೆಸ್ ವಕ್ತಾರ ನರೇಂದ್ರ ಸಲೂಜಾ ಪ್ರಶ್ನಿಸಿದ್ದಾರೆ.

ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ 51 ವರ್ಷದ ಪ್ರಜ್ಞಾ ಠಾಕೂರ್ 2008 ರ ಮಾಲೆಗಾಂವ್ ಭಯೋತ್ಪಾದಕ ಸ್ಫೋಟದ ಪ್ರಮುಖ ಆರೋಪಿಯಾಗಿದ್ದಾರೆ. ವೈದ್ಯಕೀಯ ಕಾರಣಗಳಿಂದ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. 2017 ರಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು. ಜಾಮೀನು ಪಡೆಯುವ ಮೊದಲು ಅವರು ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿದ್ದರು.

ಮುಂಬೈಯಿಂದ 200 ಕಿ.ಮೀ ದೂರದಲ್ಲಿರುವ ಮಾಲೆಗಾಂವ್ ಎಂಬ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ನಲ್ಲಿ ಇಟ್ಟಿದ್ದ ಸ್ಫೋಟಕ ಸ್ಪೋಟಗೊಂಡು ಆರು ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...