Homeಮುಖಪುಟಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

ಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

- Advertisement -
- Advertisement -

ಬಿಜೆಪಿಯ ‘ಅಬ್‌ ಕಿ ಬಾರ್‌ 400 ಪಾರ್‌’ ರ್ಯಾಲಿಯು ಸಂವಿಧಾನವನ್ನು ಬದಲಾಯಿಸುವ ಬಯಕೆಯನ್ನು ಸೂಚಿಸುತ್ತದೆ.  ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿಯವರ ಪರಂಪರೆ ಮತ್ತು ಅವರ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಮೋದಿ ಅವರ ರ್ಯಾಲಿಗಿಂತ ಮೊದಲು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ವಾರ್ಧಾ ಒಂದು ಕಾಲದಲ್ಲಿ ಮಹಾತ್ಮಾ ಗಾಂಧಿ ವಾಸಿಸುತ್ತಿದ್ದ ನಗರವಾಗಿದೆ. ಇಂದು ಮಹಾತ್ಮರ ಆದರ್ಶಗಳ ಮೇಲೆ ಪ್ರಧಾನಿಯವರ ಪಕ್ಷದ ನಾಯಕರಿಂದ ದಾಳಿ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಗಾಂಧಿಯವರ ಪರಂಪರೆ ಮತ್ತು ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ರಮೇಶ್ ಪ್ರಶ್ನಿಸಿದರು.

ರೈತರ ಆತ್ಮಹತ್ಯೆ ತಡೆಯಲು ಪ್ರಧಾನಿ ಏನು ಮಾಡಿದ್ದಾರೆ? ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ಬಿಜೆಪಿ ಆದಿವಾಸಿಗಳನ್ನು ಏಕೆ ನಿರಾಸೆಗೊಳಿಸಿದೆ? ಗಾಂಧಿ ಮತ್ತು ಗೋಡ್ಸೆ ವಿಚಾರದಲ್ಲಿ ಪ್ರಧಾನಿ ಯಾರ ಪರ ನಿಂತಿದ್ದಾರೆ? ಎಂದು ಜೈರಾಮ್‌ ರಮೇಶ್ ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ  ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ  ದಿನಕ್ಕೆ 7 ರೈತರು ತಮ್ಮ ಪ್ರಾಣವನ್ನು ತೆಗೆದುಕೊಳ್ಳುತ್ತಾರೆ. ಈ ಅಂಕಿ-ಅಂಶಗಳನ್ನು ರಾಜ್ಯದ ಸಚಿವರೋರ್ವರು ನೀಡಿದ್ದಾರೆ. ಅವರು ಕಳೆದ ವರ್ಷದ ಜನವರಿಯಿಂದ-ಅಕ್ಟೋಬರ್ ನಡುವೆ 2,366 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು  ಮಾಹಿತಿ ನೀಡಿದ್ದಾರೆ. ಕಳೆದ ವರ್ಷ 60 ಪ್ರತಿಶತ ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಎದುರಿಸಿದವು ಆದರೆ ಸರಕಾರದಿಂದ ಯಾವುದೇ ಸಹಾಯ ಬಂದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ನ್ಯಾಯ ಪತ್ರವು ಸ್ವಾಮಿನಾಥನ್ ಸಮಿತಿಯ ಶಿಫಾರಸಿನಂತೆ ರೈತರಿಗೆ ಎಂಎಸ್‌ಪಿ, ಕೃಷಿ ಸಾಲ ಮನ್ನಾ ಮತ್ತು 30 ದಿನಗಳಲ್ಲಿ ಎಲ್ಲಾ ಬೆಳೆ ವಿಮೆ ನೀಡುವ ಭರವಸೆ ನೀಡಿದೆ. ಮಹಾರಾಷ್ಟ್ರ ಮತ್ತು ಭಾರತದ ರೈತರನ್ನು ಬೆಂಬಲಿಸುವ ವಿಚಾರದಲ್ಲಿ ಬಿಜೆಪಿಯ ದೃಷ್ಟಿಕೋನ ಏನು? ಎಂದು ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಬಿಜೆಪಿಯ ಕೆಲವು ನಾಯಕರು ಮಹಾತ್ಮಾ ಗಾಂಧಿ ಅವರನ್ನು ನಿಂದಿಸಿದ್ದಾರೆ, ಮತ್ತೆ ಕೆಲವರು ಗೋಡ್ಸೆ ಮತ್ತು ಗಾಂಧಿ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟ ಎಂದಿದ್ದಾರೆ. ಬಿಜೆಪಿ ನಾಯಕರು ಪದೇ ಪದೇ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವುದು ಏಕೆ? ಈ ಬಗ್ಗೆ ಮೋದಿ ಮೌನ ಮುರಿಯಬೇಕು ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

2006ರಲ್ಲಿ, ಕಾಂಗ್ರೆಸ್ ಕ್ರಾಂತಿಕಾರಿ ಅರಣ್ಯ ಹಕ್ಕುಗಳ ಕಾಯಿದೆಯನ್ನು (ಎಫ್‌ಆರ್‌ಎ) ಅಂಗೀಕರಿಸಿತು, ಇದು ಆದಿವಾಸಿಗಳು ಮತ್ತು ಅರಣ್ಯದಲ್ಲಿ ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿದೆ ಮತ್ತು ಅವರು ಸಂಗ್ರಹಿಸುವ ಅರಣ್ಯ ಉತ್ಪನ್ನದಿಂದ ಆರ್ಥಿಕವಾಗಿ ಲಾಭ ಪಡೆಯಲು ಅವಕಾಶವನ್ನು ನೀಡುತ್ತದೆ. ಆದರೆ ಬಿಜೆಪಿ ಸರ್ಕಾರವು ಎಫ್‌ಆರ್‌ಎ ಅನುಷ್ಠಾನಕ್ಕೆ ಅಡ್ಡಿಪಡಿಸಿದೆ, ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳನ್ನು ಪಡೆಯದಂತೆ ತಡೆಹಿಡಿಯಲಾಗಿದೆ ಎಂದು ಜೈರಾಮ್ ರಮೇಶ್‌ ಆರೋಪಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...