Homeಮುಖಪುಟಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

ಬಿಜೆಪಿ ಸಂವಿಧಾನ ಬದಲಾಯಿಸುವ ಬಯಕೆ ಹೊಂದಿದೆ: ಜೈರಾಮ್‌ ರಮೇಶ್‌

- Advertisement -
- Advertisement -

ಬಿಜೆಪಿಯ ‘ಅಬ್‌ ಕಿ ಬಾರ್‌ 400 ಪಾರ್‌’ ರ್ಯಾಲಿಯು ಸಂವಿಧಾನವನ್ನು ಬದಲಾಯಿಸುವ ಬಯಕೆಯನ್ನು ಸೂಚಿಸುತ್ತದೆ.  ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿಯವರ ಪರಂಪರೆ ಮತ್ತು ಅವರ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ಮೋದಿ ಅವರ ರ್ಯಾಲಿಗಿಂತ ಮೊದಲು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ವಾರ್ಧಾ ಒಂದು ಕಾಲದಲ್ಲಿ ಮಹಾತ್ಮಾ ಗಾಂಧಿ ವಾಸಿಸುತ್ತಿದ್ದ ನಗರವಾಗಿದೆ. ಇಂದು ಮಹಾತ್ಮರ ಆದರ್ಶಗಳ ಮೇಲೆ ಪ್ರಧಾನಿಯವರ ಪಕ್ಷದ ನಾಯಕರಿಂದ ದಾಳಿ ನಡೆಯುತ್ತಿದೆ. ಪ್ರಧಾನಿ ಮೋದಿ ಅವರು ಗಾಂಧಿಯವರ ಪರಂಪರೆ ಮತ್ತು ಅವರು ಪ್ರತಿಪಾದಿಸಿದ ಮೌಲ್ಯಗಳನ್ನು ನಿಜವಾಗಿಯೂ ಗೌರವಿಸುತ್ತಾರೆಯೇ ಎಂದು ರಮೇಶ್ ಪ್ರಶ್ನಿಸಿದರು.

ರೈತರ ಆತ್ಮಹತ್ಯೆ ತಡೆಯಲು ಪ್ರಧಾನಿ ಏನು ಮಾಡಿದ್ದಾರೆ? ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ಬಿಜೆಪಿ ಆದಿವಾಸಿಗಳನ್ನು ಏಕೆ ನಿರಾಸೆಗೊಳಿಸಿದೆ? ಗಾಂಧಿ ಮತ್ತು ಗೋಡ್ಸೆ ವಿಚಾರದಲ್ಲಿ ಪ್ರಧಾನಿ ಯಾರ ಪರ ನಿಂತಿದ್ದಾರೆ? ಎಂದು ಜೈರಾಮ್‌ ರಮೇಶ್ ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ  ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲಿ  ದಿನಕ್ಕೆ 7 ರೈತರು ತಮ್ಮ ಪ್ರಾಣವನ್ನು ತೆಗೆದುಕೊಳ್ಳುತ್ತಾರೆ. ಈ ಅಂಕಿ-ಅಂಶಗಳನ್ನು ರಾಜ್ಯದ ಸಚಿವರೋರ್ವರು ನೀಡಿದ್ದಾರೆ. ಅವರು ಕಳೆದ ವರ್ಷದ ಜನವರಿಯಿಂದ-ಅಕ್ಟೋಬರ್ ನಡುವೆ 2,366 ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು  ಮಾಹಿತಿ ನೀಡಿದ್ದಾರೆ. ಕಳೆದ ವರ್ಷ 60 ಪ್ರತಿಶತ ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಎದುರಿಸಿದವು ಆದರೆ ಸರಕಾರದಿಂದ ಯಾವುದೇ ಸಹಾಯ ಬಂದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ನ್ಯಾಯ ಪತ್ರವು ಸ್ವಾಮಿನಾಥನ್ ಸಮಿತಿಯ ಶಿಫಾರಸಿನಂತೆ ರೈತರಿಗೆ ಎಂಎಸ್‌ಪಿ, ಕೃಷಿ ಸಾಲ ಮನ್ನಾ ಮತ್ತು 30 ದಿನಗಳಲ್ಲಿ ಎಲ್ಲಾ ಬೆಳೆ ವಿಮೆ ನೀಡುವ ಭರವಸೆ ನೀಡಿದೆ. ಮಹಾರಾಷ್ಟ್ರ ಮತ್ತು ಭಾರತದ ರೈತರನ್ನು ಬೆಂಬಲಿಸುವ ವಿಚಾರದಲ್ಲಿ ಬಿಜೆಪಿಯ ದೃಷ್ಟಿಕೋನ ಏನು? ಎಂದು ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಬಿಜೆಪಿಯ ಕೆಲವು ನಾಯಕರು ಮಹಾತ್ಮಾ ಗಾಂಧಿ ಅವರನ್ನು ನಿಂದಿಸಿದ್ದಾರೆ, ಮತ್ತೆ ಕೆಲವರು ಗೋಡ್ಸೆ ಮತ್ತು ಗಾಂಧಿ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡುವುದು ಕಷ್ಟ ಎಂದಿದ್ದಾರೆ. ಬಿಜೆಪಿ ನಾಯಕರು ಪದೇ ಪದೇ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವುದು ಏಕೆ? ಈ ಬಗ್ಗೆ ಮೋದಿ ಮೌನ ಮುರಿಯಬೇಕು ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

2006ರಲ್ಲಿ, ಕಾಂಗ್ರೆಸ್ ಕ್ರಾಂತಿಕಾರಿ ಅರಣ್ಯ ಹಕ್ಕುಗಳ ಕಾಯಿದೆಯನ್ನು (ಎಫ್‌ಆರ್‌ಎ) ಅಂಗೀಕರಿಸಿತು, ಇದು ಆದಿವಾಸಿಗಳು ಮತ್ತು ಅರಣ್ಯದಲ್ಲಿ ವಾಸಿಸುವ ಸಮುದಾಯಗಳಿಗೆ ತಮ್ಮದೇ ಆದ ಕಾಡುಗಳನ್ನು ನಿರ್ವಹಿಸಲು ಕಾನೂನು ಹಕ್ಕುಗಳನ್ನು ನೀಡಿದೆ ಮತ್ತು ಅವರು ಸಂಗ್ರಹಿಸುವ ಅರಣ್ಯ ಉತ್ಪನ್ನದಿಂದ ಆರ್ಥಿಕವಾಗಿ ಲಾಭ ಪಡೆಯಲು ಅವಕಾಶವನ್ನು ನೀಡುತ್ತದೆ. ಆದರೆ ಬಿಜೆಪಿ ಸರ್ಕಾರವು ಎಫ್‌ಆರ್‌ಎ ಅನುಷ್ಠಾನಕ್ಕೆ ಅಡ್ಡಿಪಡಿಸಿದೆ, ಲಕ್ಷಾಂತರ ಆದಿವಾಸಿಗಳು ಅದರ ಪ್ರಯೋಜನಗಳನ್ನು ಪಡೆಯದಂತೆ ತಡೆಹಿಡಿಯಲಾಗಿದೆ ಎಂದು ಜೈರಾಮ್ ರಮೇಶ್‌ ಆರೋಪಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಮಹಿಳೆಯರಿಗಷ್ಟೇ ಏಕೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...