Homeಮುಖಪುಟಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ

- Advertisement -
- Advertisement -

‘ಇಂಡಿಯಾ ಟುಡೇ ವಿಡಿಯೋ’ ಪತ್ರಕರ್ತರೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರು ಸೋಮವಾರದೊಳಗೆ ಸಂಪೂರ್ಣ, ಎಡಿಟ್ ಮಾಡದ ವಿಡಿಯೊವನ್ನು ಒದಗಿಸುವಂತೆ ರಾಜ್‌ದೀಪ್ ಸರ್ದೇಸಾಯಿ ಮತ್ತು ಇಂಡಿಯಾ ಟುಡೇಗೆ ನಿರ್ದೇಶಿಸಿದ್ದು, ಮುಂದಿನ ಮಂಗಳವಾರಕ್ಕೆ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಿದ್ದಾರೆ.

“ನಮಗೆ ಪ್ರಕರಣ ಪ್ರತಿಯನ್ನು ನೀಡಿಲ್ಲ” ಎಂದು ಸರ್ದೇಸಾಯಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಮೂರ್ತಿ ಅರೋರಾ ಅವರು ಸರ್ದೇಸಾಯಿ ಮತ್ತು ಇಂಡಿಯಾ ಟುಡೇ ಇಬ್ಬರಿಗೂ ಪ್ರತಿಯನ್ನು ನೀಡಲು ಇಲ್ಮಿ ಪರ ವಕೀಲರಿಗೆ ಸೂಚಿಸಿದ್ದಾರೆ.

“ಆನ್‌ಲೈನ್‌ನಲ್ಲಿ ಈಗಲೂ ಸರ್ದೇಸಾಯಿ ಪೋಸ್ಟ್ ಮಾಡಿರುವ ವಿಡಿಯೋ ಹರಿದಾಡುತಿದ್ದು, ಜನರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ” ಎಂದು ಇಲ್ಮಿ ಪರ ವಕೀಲೆ ನತಾಶಾ ಗಾರ್ಗ್ ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯವು ಈ ವಿಷಯವನ್ನು ಆಲಿಸುವವರೆಗೆ ಸರ್ದೇಸಾಯಿ ಅವರ ಟ್ವೀಟ್‌ಗಳನ್ನು ಖಾಸಗಿಯಾಗಿಸಬೇಕು ಎಂದು ವಿನಂತಿಸಿದ್ದಾರೆ. ಆದರೆ, ಈ ಸಂಬಂಧ ಆದೇಶ ನೀಡಲು ನಿರಾಕರಿಸಿದ ನ್ಯಾಯಾಲಯ ಮಂಗಳವಾರಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ಸರ್ದೇಸಾಯಿ ಅವರು ಜುಲೈ 26ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ : ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...