Homeಮುಖಪುಟಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ

- Advertisement -
- Advertisement -

‘ಇಂಡಿಯಾ ಟುಡೇ ವಿಡಿಯೋ’ ಪತ್ರಕರ್ತರೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರು ಸೋಮವಾರದೊಳಗೆ ಸಂಪೂರ್ಣ, ಎಡಿಟ್ ಮಾಡದ ವಿಡಿಯೊವನ್ನು ಒದಗಿಸುವಂತೆ ರಾಜ್‌ದೀಪ್ ಸರ್ದೇಸಾಯಿ ಮತ್ತು ಇಂಡಿಯಾ ಟುಡೇಗೆ ನಿರ್ದೇಶಿಸಿದ್ದು, ಮುಂದಿನ ಮಂಗಳವಾರಕ್ಕೆ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಿದ್ದಾರೆ.

“ನಮಗೆ ಪ್ರಕರಣ ಪ್ರತಿಯನ್ನು ನೀಡಿಲ್ಲ” ಎಂದು ಸರ್ದೇಸಾಯಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಮೂರ್ತಿ ಅರೋರಾ ಅವರು ಸರ್ದೇಸಾಯಿ ಮತ್ತು ಇಂಡಿಯಾ ಟುಡೇ ಇಬ್ಬರಿಗೂ ಪ್ರತಿಯನ್ನು ನೀಡಲು ಇಲ್ಮಿ ಪರ ವಕೀಲರಿಗೆ ಸೂಚಿಸಿದ್ದಾರೆ.

“ಆನ್‌ಲೈನ್‌ನಲ್ಲಿ ಈಗಲೂ ಸರ್ದೇಸಾಯಿ ಪೋಸ್ಟ್ ಮಾಡಿರುವ ವಿಡಿಯೋ ಹರಿದಾಡುತಿದ್ದು, ಜನರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ” ಎಂದು ಇಲ್ಮಿ ಪರ ವಕೀಲೆ ನತಾಶಾ ಗಾರ್ಗ್ ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯವು ಈ ವಿಷಯವನ್ನು ಆಲಿಸುವವರೆಗೆ ಸರ್ದೇಸಾಯಿ ಅವರ ಟ್ವೀಟ್‌ಗಳನ್ನು ಖಾಸಗಿಯಾಗಿಸಬೇಕು ಎಂದು ವಿನಂತಿಸಿದ್ದಾರೆ. ಆದರೆ, ಈ ಸಂಬಂಧ ಆದೇಶ ನೀಡಲು ನಿರಾಕರಿಸಿದ ನ್ಯಾಯಾಲಯ ಮಂಗಳವಾರಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ಸರ್ದೇಸಾಯಿ ಅವರು ಜುಲೈ 26ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ : ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...