Homeಮುಖಪುಟರಾಜ್ಯಸಭೆಯಲ್ಲಿ 86ಕ್ಕೆ ಕುಸಿದ ಬಿಜೆಪಿಯ ಸದಸ್ಯ ಬಲ

ರಾಜ್ಯಸಭೆಯಲ್ಲಿ 86ಕ್ಕೆ ಕುಸಿದ ಬಿಜೆಪಿಯ ಸದಸ್ಯ ಬಲ

- Advertisement -
- Advertisement -

ನಾಲ್ವರು ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಬಿಜೆಪಿಯ ಸದಸ್ಯ ಬಲ ಕುಸಿದಿದೆ.

ಬಿಜೆಪಿ ಸದಸ್ಯ ಬಲ 86ಕ್ಕೆ ಹಾಗೂ ಎನ್‌ಡಿಎ ಸದಸ್ಯಬಲ 101ಕ್ಕೆ ಕುಸಿದಿದೆ. 19 ಸ್ಥಾನಗಳು ಖಾಲಿ ಇರುವುದರಿಂದ ರಾಜ್ಯಸಭೆಯ ಸದ್ಯದ ಸದಸ್ಯಬಲ 226ಕ್ಕೆ ತಲುಪಿದೆ.

ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತ ಇಲ್ಲದಿದ್ದರೂ, ಇತರ ಮಿತ್ರ ಪಕ್ಷಗಳ ಏಳು ಮಂದಿ ಸದಸ್ಯರ ಬೆಂಬಲದೊಂದಿಗೆ ಪ್ರಮುಖ ಮಸೂದೆಗಳಿಗೆ ಅನುಮೋದನೆ ಪಡೆಯುತ್ತಾ ಬಂದಿದೆ. ಇದರಲ್ಲಿ ಇಬ್ಬರು ಪಕ್ಷೇತರರು ಮತ್ತು ಮಿತ್ರಪಕ್ಷಗಳಾದ ಎಐಎಡಿಎಂಕೆ ಹಾಗೂ ವೈಎಸ್ಆರ್ ಸಿಪಿಯ ಸದಸ್ಯರು ಸೇರಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಮಿತ್ರಪಕ್ಷಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿಕೊಳ್ಳುವ ಉದ್ದೇಶದಿಂದ ಖಾಲಿ ಇರುವ ನಾಲ್ಕು ನಾಮನಿರ್ದೇಶನ ಸದಸ್ಯ ಸ್ಥಾನಗಳಿಗೆ ತಕ್ಷಣ ಭರ್ತಿ ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿದೆ.

ನಿವೃತ್ತರಾದ ನಾಲ್ವರು ಸದಸ್ಯರು ರಾಜ್ಯಸಭೆಗೆ ನಾಮಕರಣಗೊಂಡ ಬಳಿಕ ಅಧಿಕೃತವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು. ನಾಮನಿರ್ದೇಶಿತ ಸದಸ್ಯರಾಗಿ ಬಿಜೆಪಿ ಸೇರಿರುವ ಮತ್ತೊಬ್ಬ ಸದಸ್ಯರೆಂದರೆ ಗುಲಾಮ್ ಅಲಿ. ಅವರು 2028ರ ಸೆಪ್ಟೆಂಬರ್‌ನಲ್ಲಿ ನಿವೃತ್ತರಾಗಲಿದ್ದಾರೆ.

ರಾಷ್ಟ್ರಪತಿಗಳು 12 ಸದಸ್ಯರನ್ನು ಕೇಂದ್ರದ ಶಿಫಾರಸ್ಸಿನಂತೆ ರಾಜ್ಯಸಭೆಗೆ ನಾಮಕರಣ ಮಾಡುತ್ತಾರೆ. ಈ ಪೈಕಿ ಏಳು ಮಂದಿ ಅಧಿಕೃತವಾಗಿ ಬಿಜೆಪಿ ಜೊತೆ ಗುರುತಿಸಿಕೊಂಡಿಲ್ಲವಾದರೂ, ಪ್ರಮುಖ ಮಸೂದೆಗಳ ವಿಚಾರದಲ್ಲಿ ಅವರು ಆಡಳಿತ ಪಕ್ಷದ ಪರ ನಿಲುವು ತಾಳುತ್ತಾರೆ.

ಪ್ರಸ್ತುತ ಮೇಲ್ಮನೆಯಲ್ಲಿ 19 ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕು, ಅಸ್ಸಾಂ, ಬಿಹಾರ ಮತ್ತು ಮಹಾರಾಷ್ಟ್ರದಿಂದ ತಲಾ ಎರಡು, ಹರಿಯಾಣ, ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತ್ರಿಪುರಾದಿಂದ ತಲಾ ಒಂದು ಸ್ಥಾನಗಳು ಖಾಲಿ ಇವೆ.

ಇದನ್ನೂ ಓದಿ : ಗವರ್ನರ್ ಬೋಸ್ ಮಾನನಷ್ಟ ಮೊಕದ್ದಮೆ ಪ್ರಕರಣ: ‘ನನ್ನ ಹೇಳಿಕೆಯಲ್ಲಿ ಮಾನಹಾನಿಕರ ಏನೂ ಇಲ್ಲ’ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...