Homeಮುಖಪುಟಬಿಜೆಪಿಯ ಗೆಲುವು ಜನಾದೇಶವಲ್ಲ; ಯಂತ್ರೋಪಕರಣಗಳ ಆದೇಶ: ಮಮತಾ ಬ್ಯಾನರ್ಜಿ

ಬಿಜೆಪಿಯ ಗೆಲುವು ಜನಾದೇಶವಲ್ಲ; ಯಂತ್ರೋಪಕರಣಗಳ ಆದೇಶ: ಮಮತಾ ಬ್ಯಾನರ್ಜಿ

- Advertisement -
- Advertisement -

ಉತ್ತರ ಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಈ ಗೆಲುವು ಜನಾದೇಶವಲ್ಲ ಎಂದು ಅವರು ಹೇಳಿದ್ದು, “ಚುನಾವಣಾ ಯಂತ್ರಗಳು, ಕೇಂದ್ರ ಪಡೆಗಳು ಮತ್ತು ಏಜೆನ್ಸಿಗಳ ಸಹಾಯದಿಂದ ಪಡೆದ ಗೆಲುವಾಗಿದೆ” ಎಂದು ತಿಳಿಸಿದ್ದಾರೆ.

2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅನ್ನು ಗಣನೆಗೆ ತೆಗೆದುಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿರುವ ಅವರು, ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆಗಿನ ಚರ್ಚೆಯನ್ನು ಮುನ್ನಲೆಗೆ ತಂದಿದ್ದಾರೆ.

“ಚುನಾವಣಾ ಯಂತ್ರಗಳು, ಕೇಂದ್ರೀಯ ಪಡೆಗಳು ಮತ್ತು ಏಜೆನ್ಸಿಗಳ ಸಹಾಯದಿಂದ ಬಿಜೆಪಿ ಗೆದ್ದಿದ್ದಾರೆ. ಅವರು ನಗಾರಿಯನ್ನು ಬಾರಿಸುತ್ತಿದ್ದಾರೆ, ಆದರೆ ಅದರಿಂದ ಸಂಗೀತ ಹೊಮ್ಮಿಸಲು ಸಾಧ್ಯವಿಲ್ಲ. ಸಂಗೀತಕ್ಕಾಗಿ ಹಾರ್ಮೋನಿಯಂ ಬೇಕಾಗುತ್ತದೆ” ಎಂದು ಅವರು ಕೋಲ್ಕತ್ತಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್ ಕಿಶೋರ್

“ಇವಿಎಂ ಅನ್ನು ತೆಗೆದಿದ್ದಕ್ಕಾಗಿ ವಾರಣಾಸಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಮಾನತುಗೊಂಡರೆ ಅದುವೆ ದೊಡ್ಡ ವಿಷಯ. ಅಖಿಲೇಶ್ ಅವರನ್ನು ಸೋಲುವಂತೆ ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಅಲ್ಲಿ ಲೂಟಿ ನಡೆದಿದೆ. ಅಖಿಲೇಶ್ ಬೇಸರಕ್ಕೆ ಒಳಗಾಗಬಾರದು, ಅಸಮಾಧಾನಗೊಳ್ಳಬಾರದು. ಇದನ್ನು ಎದುರಿಸಿ ಅವರು ಜನರ ಬಳಿಗೆ ಹೋಗಬೇಕು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಜನರು ಮತ ಚಲಾಯಿಸಲು ಬಳಸಿದ ಮತ್ತು ನಂತರ ಎಣಿಕೆಗೆ ತಂದ ಯಂತ್ರಗಳೇ ಎಂಬುದನ್ನು ನೋಡಲು ಎಲ್ಲಾ ಇವಿಎಂಗಳು ಫೋರೆನ್ಸಿಕ್ ಪರೀಕ್ಷೆಗೆ ಒಳಗಾಗಿಸಬೇಕು. ಒಂದು ವೇಳೆ ಬಿಜೆಪಿ ಗೆದ್ದಿದ್ದರೆ ಅದು ಜನಮತದಿಂದ ಅಲ್ಲ. ಇದು ಜನಾದೇಶವಲ್ಲ, ಯಂತ್ರೋಪಕರಣಗಳ ಆದೇಶ” ಎಂದು ಅವರು ಹೇಳಿದ್ದಾರೆ.

2024ರ ಚುನಾವಣೆಯ ಕುರಿತು ಮಾತನಾಡಿದ ಅವರು, “ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನಾನು ಹೇಳುತ್ತೇನೆ. ಕಾಂಗ್ರೆಸ್ ಅನ್ನು ಅವಲಂಬಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಕಾಂಗ್ರೆಸ್ ಮೊದಲು ತಮ್ಮ ಸಂಘಟನೆಯ ಮೂಲಕ ಇಡೀ ದೇಶವನ್ನು ವಶಪಡಿಸಿಕೊಳ್ಳುತ್ತಿತ್ತು. ಆದರೆ ಈಗ ಆ ರೀತಿ ಇಲ್ಲ, ಅವರು ಜನರ ಆಸಕ್ತಿ ಮತ್ತು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಹಲವಾರು ಪ್ರಾದೇಶಿಕ ರಾಜಕೀಯ ಪಕ್ಷಗಳಿವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಈ ಬಗ್ಗೆ ನಿರ್ಧಾರವನ್ನು ಖಂಡಿತವಾಗಿಯೂ ತೆಗೆದುಕೊಳ್ಳಬಹುದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....