Homeಮುಖಪುಟಬಿಜೆಪಿಯ ಗೆಲುವು ಜನಾದೇಶವಲ್ಲ; ಯಂತ್ರೋಪಕರಣಗಳ ಆದೇಶ: ಮಮತಾ ಬ್ಯಾನರ್ಜಿ

ಬಿಜೆಪಿಯ ಗೆಲುವು ಜನಾದೇಶವಲ್ಲ; ಯಂತ್ರೋಪಕರಣಗಳ ಆದೇಶ: ಮಮತಾ ಬ್ಯಾನರ್ಜಿ

- Advertisement -
- Advertisement -

ಉತ್ತರ ಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ ಈ ಗೆಲುವು ಜನಾದೇಶವಲ್ಲ ಎಂದು ಅವರು ಹೇಳಿದ್ದು, “ಚುನಾವಣಾ ಯಂತ್ರಗಳು, ಕೇಂದ್ರ ಪಡೆಗಳು ಮತ್ತು ಏಜೆನ್ಸಿಗಳ ಸಹಾಯದಿಂದ ಪಡೆದ ಗೆಲುವಾಗಿದೆ” ಎಂದು ತಿಳಿಸಿದ್ದಾರೆ.

2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅನ್ನು ಗಣನೆಗೆ ತೆಗೆದುಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿರುವ ಅವರು, ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆಗಿನ ಚರ್ಚೆಯನ್ನು ಮುನ್ನಲೆಗೆ ತಂದಿದ್ದಾರೆ.

“ಚುನಾವಣಾ ಯಂತ್ರಗಳು, ಕೇಂದ್ರೀಯ ಪಡೆಗಳು ಮತ್ತು ಏಜೆನ್ಸಿಗಳ ಸಹಾಯದಿಂದ ಬಿಜೆಪಿ ಗೆದ್ದಿದ್ದಾರೆ. ಅವರು ನಗಾರಿಯನ್ನು ಬಾರಿಸುತ್ತಿದ್ದಾರೆ, ಆದರೆ ಅದರಿಂದ ಸಂಗೀತ ಹೊಮ್ಮಿಸಲು ಸಾಧ್ಯವಿಲ್ಲ. ಸಂಗೀತಕ್ಕಾಗಿ ಹಾರ್ಮೋನಿಯಂ ಬೇಕಾಗುತ್ತದೆ” ಎಂದು ಅವರು ಕೋಲ್ಕತ್ತಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಫಲಿತಾಂಶ 2024ರ ಚುನಾವಣೆಗೆ ದಿಕ್ಸೂಚಿ ಎಂದ ಮೋದಿ: ಇದು ಸುಳ್ಳು ನಿರೂಪಣೆ ಎಂದ ಪ್ರಶಾಂತ್ ಕಿಶೋರ್

“ಇವಿಎಂ ಅನ್ನು ತೆಗೆದಿದ್ದಕ್ಕಾಗಿ ವಾರಣಾಸಿಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಮಾನತುಗೊಂಡರೆ ಅದುವೆ ದೊಡ್ಡ ವಿಷಯ. ಅಖಿಲೇಶ್ ಅವರನ್ನು ಸೋಲುವಂತೆ ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಅಲ್ಲಿ ಲೂಟಿ ನಡೆದಿದೆ. ಅಖಿಲೇಶ್ ಬೇಸರಕ್ಕೆ ಒಳಗಾಗಬಾರದು, ಅಸಮಾಧಾನಗೊಳ್ಳಬಾರದು. ಇದನ್ನು ಎದುರಿಸಿ ಅವರು ಜನರ ಬಳಿಗೆ ಹೋಗಬೇಕು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಜನರು ಮತ ಚಲಾಯಿಸಲು ಬಳಸಿದ ಮತ್ತು ನಂತರ ಎಣಿಕೆಗೆ ತಂದ ಯಂತ್ರಗಳೇ ಎಂಬುದನ್ನು ನೋಡಲು ಎಲ್ಲಾ ಇವಿಎಂಗಳು ಫೋರೆನ್ಸಿಕ್ ಪರೀಕ್ಷೆಗೆ ಒಳಗಾಗಿಸಬೇಕು. ಒಂದು ವೇಳೆ ಬಿಜೆಪಿ ಗೆದ್ದಿದ್ದರೆ ಅದು ಜನಮತದಿಂದ ಅಲ್ಲ. ಇದು ಜನಾದೇಶವಲ್ಲ, ಯಂತ್ರೋಪಕರಣಗಳ ಆದೇಶ” ಎಂದು ಅವರು ಹೇಳಿದ್ದಾರೆ.

2024ರ ಚುನಾವಣೆಯ ಕುರಿತು ಮಾತನಾಡಿದ ಅವರು, “ಬಿಜೆಪಿ ವಿರುದ್ಧ ಹೋರಾಡಲು ಬಯಸುವ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ನಾನು ಹೇಳುತ್ತೇನೆ. ಕಾಂಗ್ರೆಸ್ ಅನ್ನು ಅವಲಂಬಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಕಾಂಗ್ರೆಸ್ ಮೊದಲು ತಮ್ಮ ಸಂಘಟನೆಯ ಮೂಲಕ ಇಡೀ ದೇಶವನ್ನು ವಶಪಡಿಸಿಕೊಳ್ಳುತ್ತಿತ್ತು. ಆದರೆ ಈಗ ಆ ರೀತಿ ಇಲ್ಲ, ಅವರು ಜನರ ಆಸಕ್ತಿ ಮತ್ತು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಹಲವಾರು ಪ್ರಾದೇಶಿಕ ರಾಜಕೀಯ ಪಕ್ಷಗಳಿವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಮತ್ತು ಈ ಬಗ್ಗೆ ನಿರ್ಧಾರವನ್ನು ಖಂಡಿತವಾಗಿಯೂ ತೆಗೆದುಕೊಳ್ಳಬಹುದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...