Homeಮುಖಪುಟಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ...

ಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ : ಆರೋಪ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನದ ಮುನ್ನಾದಿನ ಇಂದು (ನ.19) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಬರೋಬ್ಬರಿ 5 ಕೋಟಿ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪ ಕೇಳಿ ಬಂದಿದೆ.

ಫಾಲ್ಘರ್ ಜಿಲ್ಲೆಯ ವಿರಾರ್ ನಗರದ ಹೋಟೆಲೊಂದರಲ್ಲಿ ವಿನೋದ್ ತಾವ್ಡೆ ಹಣ ಹಂಚುತ್ತಿದ್ದಾಗ ಬಹುಜನ ವಿಕಾಸ್ ಅಘಾಡಿ (ಬಿವಿಎ) ಕಾರ್ಯಕರ್ತರು ಸೆರೆ ಹಿಡಿದಿದ್ದಾರೆ ಎಂದು ವರದಿಯಾಗಿದೆ. ಅದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಬಿವಿಎ ಕಾರ್ಯಕರ್ತರು ತಾವ್ಡೆ ಮೇಲೆ ಮುಗಿ ಬೀಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅವರಿಗೆ ರಕ್ಷಣ ಒದಗಿಸಿದ್ದಾರೆ. ವಿಡಿಯೋದಲ್ಲಿ ವಿನೋದ್ ತಾವ್ಡೆಯನ್ನು ಜನರ ಗುಂಪೊಂದು ಸುತ್ತುವರಿದಿರುವುದನ್ನು ನೋಡಬಹುದು.

ವರದಿಗಳ ಪ್ರಕಾರ, ವಿನೋದ್ ತಾವ್ಡೆ ಅವರು ಮನ್ವೇಲ್ಪಾಡಾದ ವಿವಾಂತ್ ಹೋಟೆಲ್‌ನಲ್ಲಿ ಬಿಜೆಪಿ ಅಭ್ಯರ್ಥಿರಾಜನ್ ನಾಯ್ಕ್ ಮತ್ತು ಮುಖಂಡರ ಜೊತೆ ಸಭೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಬಿವಿಎ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

“ತಾವ್ಡೆ ಸಭೆಯಲ್ಲಿ ಹಾಜರಿದ್ದವರಿಗೆ ಹಣ ಹಂಚುವುದನ್ನು ತಾವು ಕಣ್ಣಾರೆ ಕಂಡಿದ್ದೇವೆ” ಎಂದು ಬಿವಿಎ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಬಿವಿಎ ಅಭ್ಯರ್ಥಿ ಕ್ಷಿತಿಜ್ ಠಾಕೂರ್ ಅವರು ತಾವ್ಡೆ ಬಳಿ 5 ಕೋಟಿ ರೂಪಾಯಿ ಹಣ ಮತ್ತು ಎರಡು ಡೈರಿಗಳಲ್ಲಿ ಹೆಸರುಗಳಿತ್ತು ಎಂದು ಹೇಳಿದ್ದಾರೆ. ತಾವ್ಡೆ ಅವರು ಸಭೆ ನಡೆಸುತ್ತಿದ್ದಾಗ ಹೊಟೇಲ್‌ನ ಮುಖ್ಯ ದ್ವಾರವನ್ನು ಮುಚ್ಚಲಾಗಿತ್ತು ಎಂದು ಬಿವಿಎ ಆರೋಪಿಸಿದೆ.

ನಲಸೋಪಾರ ಕ್ಷೇತ್ರದ ಎಲ್ಲಾ 507 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಬಗ್ಗೆ ಬಿವಿಎ ಕಳವಳ ವ್ಯಕ್ತಪಡಿಸಿದೆ. ಈ ಪ್ರದೇಶವು ಪಾಲ್ಘರ್ ಜಿಲ್ಲೆಯ ಎರಡು ನಿರ್ಣಾಯಕ ಮತಗಟ್ಟೆಗಳಲ್ಲಿ ಒಂದನ್ನು ಒಳಗೊಂಡಿದೆ. ಜಿಲ್ಲೆಯ ಮತ್ತೊಂದು ಕ್ಷೇತ್ರ ವಸಾಯಿಯಲ್ಲಿ ಠಾಕೂರ್ ಅವರು ಬಿಜೆಪಿ ಅಭ್ಯರ್ಥಿ ಸ್ನೇಹಾ ದುಬೆ ಅವರನ್ನು ಎದುರಿಸಲಿದ್ದಾರೆ. ವಸಾಯಿಯಲ್ಲಿ ಶೇ.93 ಬೂತ್‌ಗಳನ್ನು ವೆಬ್‌ಕಾಸ್ಟ್ ಮಾಡಲಾಗಿದೆ.

ವಿರಾರ್‌ನಲ್ಲಿ ತಾನು ವಾಸ್ತವ್ಯ ಹೂಡಿದ್ದಕ್ಕೆ ಕ್ಷಮೆಯಾಚಿಸಲು ತಾವ್ಡೆ ನನಗೆ ಫೋನ್ ಮಾಡಿದ್ದರು ಎಂದು ಠಾಕೂರ್ ಹೇಳಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಗಮನಹರಿಸುವಂತೆ ಒತ್ತಾಯಿಸಿದ್ದಾರೆ.

ವಿನೋದ್ ತಾವ್ಡೆ ಹಣದ ಜೊತೆ ಸಿಕ್ಕಿಬಿದ್ದ ವಿರಾರ್ ಪ್ರದೇಶ ನಲಸೋಪಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಬಿವಿಎ ಪಕ್ಷದ ಕ್ಷಿತಿಜ್ ಠಾಕೂರ್ ಇಲ್ಲಿನ ಹಾಲಿ ಶಾಸಕರಾಗಿದ್ದರು. ಪ್ರಸ್ತುತ ನಡೆಯುತ್ತಿರುವ ಚುನಾವಣೆಗೆ ಕ್ಷಿತಿಜ್ ಠಾಕೂರ್ ಮತ್ತೊಮ್ಮೆ ಸ್ಪರ್ದಿಸಿದ್ದು, ಇವರ ವಿರುದ್ದ ಬಿಜೆಪಿಯಿಂದ ರಾಜನ್ ನಾಯ್ಕ್, ಕಾಂಗ್ರೆಸ್‌ನಿಂದ ಸಂದೀಪ್ ಪಾಂಡೆ ಕಣಕ್ಕಿಳಿದಿದ್ದಾರೆ.

2019ರಲ್ಲಿ ಮೂವರು ಶಾಸಕರ ಮೂಲಕ ಬಿವಿಎ ಬಿಜೆಪಿ ನೇತೃತ್ವದ ಮಹಾಯುತಿಯನ್ನು ಬೆಂಬಲಿಸಿತ್ತು. ಈ ಬಾರಿ ಪ್ರಚಾರದ ಅವಧಿ ಕೊನೆಗೊಂಡು ನಾಳೆ ಮತದಾನ ನಡೆಯಲಿದ್ದರೂ, ಹೊರಗಿನ ರಾಜಕಾರಣಿಗಳು ಕ್ಷೇತ್ರದಲ್ಲಿರುವುದನ್ನು ಬಿವಿಎ ಅಧ್ಯಕ್ಷ ಹಿತೇಂದ್ರ ಠಾಕೂರ್ ಪ್ರಶ್ನಿಸಿದ್ದಾರೆ.

ಮಹಾರಾಷ್ಟ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿನೋದ್ ತಾವ್ಡೆ ವಾರ್ಡ್‌ ಮಟ್ಟದಲ್ಲಿ ಹಣ ಹಂಚುತ್ತಾರೆಯೇ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ : ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...