Homeಮುಖಪುಟಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ...

ಮಹಾರಾಷ್ಟ್ರ ಚುನಾವಣೆ | ಹಣ ಹಂಚುವಾಗ ಸಿಕ್ಕಿಬಿದ್ದ ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ವಿನೋದ್ ತಾವ್ಡೆ : ಆರೋಪ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನದ ಮುನ್ನಾದಿನ ಇಂದು (ನ.19) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಬರೋಬ್ಬರಿ 5 ಕೋಟಿ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪ ಕೇಳಿ ಬಂದಿದೆ.

ಫಾಲ್ಘರ್ ಜಿಲ್ಲೆಯ ವಿರಾರ್ ನಗರದ ಹೋಟೆಲೊಂದರಲ್ಲಿ ವಿನೋದ್ ತಾವ್ಡೆ ಹಣ ಹಂಚುತ್ತಿದ್ದಾಗ ಬಹುಜನ ವಿಕಾಸ್ ಅಘಾಡಿ (ಬಿವಿಎ) ಕಾರ್ಯಕರ್ತರು ಸೆರೆ ಹಿಡಿದಿದ್ದಾರೆ ಎಂದು ವರದಿಯಾಗಿದೆ. ಅದಕ್ಕೆ ಸಂಬಂಧಿಸಿದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಬಿವಿಎ ಕಾರ್ಯಕರ್ತರು ತಾವ್ಡೆ ಮೇಲೆ ಮುಗಿ ಬೀಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅವರಿಗೆ ರಕ್ಷಣ ಒದಗಿಸಿದ್ದಾರೆ. ವಿಡಿಯೋದಲ್ಲಿ ವಿನೋದ್ ತಾವ್ಡೆಯನ್ನು ಜನರ ಗುಂಪೊಂದು ಸುತ್ತುವರಿದಿರುವುದನ್ನು ನೋಡಬಹುದು.

ವರದಿಗಳ ಪ್ರಕಾರ, ವಿನೋದ್ ತಾವ್ಡೆ ಅವರು ಮನ್ವೇಲ್ಪಾಡಾದ ವಿವಾಂತ್ ಹೋಟೆಲ್‌ನಲ್ಲಿ ಬಿಜೆಪಿ ಅಭ್ಯರ್ಥಿರಾಜನ್ ನಾಯ್ಕ್ ಮತ್ತು ಮುಖಂಡರ ಜೊತೆ ಸಭೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಬಿವಿಎ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

“ತಾವ್ಡೆ ಸಭೆಯಲ್ಲಿ ಹಾಜರಿದ್ದವರಿಗೆ ಹಣ ಹಂಚುವುದನ್ನು ತಾವು ಕಣ್ಣಾರೆ ಕಂಡಿದ್ದೇವೆ” ಎಂದು ಬಿವಿಎ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ. ಬಿವಿಎ ಅಭ್ಯರ್ಥಿ ಕ್ಷಿತಿಜ್ ಠಾಕೂರ್ ಅವರು ತಾವ್ಡೆ ಬಳಿ 5 ಕೋಟಿ ರೂಪಾಯಿ ಹಣ ಮತ್ತು ಎರಡು ಡೈರಿಗಳಲ್ಲಿ ಹೆಸರುಗಳಿತ್ತು ಎಂದು ಹೇಳಿದ್ದಾರೆ. ತಾವ್ಡೆ ಅವರು ಸಭೆ ನಡೆಸುತ್ತಿದ್ದಾಗ ಹೊಟೇಲ್‌ನ ಮುಖ್ಯ ದ್ವಾರವನ್ನು ಮುಚ್ಚಲಾಗಿತ್ತು ಎಂದು ಬಿವಿಎ ಆರೋಪಿಸಿದೆ.

ನಲಸೋಪಾರ ಕ್ಷೇತ್ರದ ಎಲ್ಲಾ 507 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಬಗ್ಗೆ ಬಿವಿಎ ಕಳವಳ ವ್ಯಕ್ತಪಡಿಸಿದೆ. ಈ ಪ್ರದೇಶವು ಪಾಲ್ಘರ್ ಜಿಲ್ಲೆಯ ಎರಡು ನಿರ್ಣಾಯಕ ಮತಗಟ್ಟೆಗಳಲ್ಲಿ ಒಂದನ್ನು ಒಳಗೊಂಡಿದೆ. ಜಿಲ್ಲೆಯ ಮತ್ತೊಂದು ಕ್ಷೇತ್ರ ವಸಾಯಿಯಲ್ಲಿ ಠಾಕೂರ್ ಅವರು ಬಿಜೆಪಿ ಅಭ್ಯರ್ಥಿ ಸ್ನೇಹಾ ದುಬೆ ಅವರನ್ನು ಎದುರಿಸಲಿದ್ದಾರೆ. ವಸಾಯಿಯಲ್ಲಿ ಶೇ.93 ಬೂತ್‌ಗಳನ್ನು ವೆಬ್‌ಕಾಸ್ಟ್ ಮಾಡಲಾಗಿದೆ.

ವಿರಾರ್‌ನಲ್ಲಿ ತಾನು ವಾಸ್ತವ್ಯ ಹೂಡಿದ್ದಕ್ಕೆ ಕ್ಷಮೆಯಾಚಿಸಲು ತಾವ್ಡೆ ನನಗೆ ಫೋನ್ ಮಾಡಿದ್ದರು ಎಂದು ಠಾಕೂರ್ ಹೇಳಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಗಮನಹರಿಸುವಂತೆ ಒತ್ತಾಯಿಸಿದ್ದಾರೆ.

ವಿನೋದ್ ತಾವ್ಡೆ ಹಣದ ಜೊತೆ ಸಿಕ್ಕಿಬಿದ್ದ ವಿರಾರ್ ಪ್ರದೇಶ ನಲಸೋಪಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಬಿವಿಎ ಪಕ್ಷದ ಕ್ಷಿತಿಜ್ ಠಾಕೂರ್ ಇಲ್ಲಿನ ಹಾಲಿ ಶಾಸಕರಾಗಿದ್ದರು. ಪ್ರಸ್ತುತ ನಡೆಯುತ್ತಿರುವ ಚುನಾವಣೆಗೆ ಕ್ಷಿತಿಜ್ ಠಾಕೂರ್ ಮತ್ತೊಮ್ಮೆ ಸ್ಪರ್ದಿಸಿದ್ದು, ಇವರ ವಿರುದ್ದ ಬಿಜೆಪಿಯಿಂದ ರಾಜನ್ ನಾಯ್ಕ್, ಕಾಂಗ್ರೆಸ್‌ನಿಂದ ಸಂದೀಪ್ ಪಾಂಡೆ ಕಣಕ್ಕಿಳಿದಿದ್ದಾರೆ.

2019ರಲ್ಲಿ ಮೂವರು ಶಾಸಕರ ಮೂಲಕ ಬಿವಿಎ ಬಿಜೆಪಿ ನೇತೃತ್ವದ ಮಹಾಯುತಿಯನ್ನು ಬೆಂಬಲಿಸಿತ್ತು. ಈ ಬಾರಿ ಪ್ರಚಾರದ ಅವಧಿ ಕೊನೆಗೊಂಡು ನಾಳೆ ಮತದಾನ ನಡೆಯಲಿದ್ದರೂ, ಹೊರಗಿನ ರಾಜಕಾರಣಿಗಳು ಕ್ಷೇತ್ರದಲ್ಲಿರುವುದನ್ನು ಬಿವಿಎ ಅಧ್ಯಕ್ಷ ಹಿತೇಂದ್ರ ಠಾಕೂರ್ ಪ್ರಶ್ನಿಸಿದ್ದಾರೆ.

ಮಹಾರಾಷ್ಟ ಬಿಜೆಪಿ ಆರೋಪವನ್ನು ತಳ್ಳಿ ಹಾಕಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ವಿನೋದ್ ತಾವ್ಡೆ ವಾರ್ಡ್‌ ಮಟ್ಟದಲ್ಲಿ ಹಣ ಹಂಚುತ್ತಾರೆಯೇ? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ : ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಹೆಸರಿನಲ್ಲಿ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...