Homeಮುಖಪುಟಕರ್ಪೂರಿ ಠಾಕೂರ್‌ಗೆ 'ಭಾರತ ರತ್ನ' ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್‌ಗೆ ‘ಭಾರತ ರತ್ನ’ ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

- Advertisement -
- Advertisement -

ಸಮಾಜವಾದಿ ನಾಯಕ, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಿಸಿದೆ.

ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ಸ್ವಾತಂತ್ರ ಹೋರಾಟಗಾರರಾಗಿದ್ದ ಕರ್ಪೂರಿ ಠಾಕೂರ್ ಅವರು, ಶಿಕ್ಷಣ, ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ದೇಶದ ಪ್ರಮುಖ ರಾಜಕಾರಣಿಗಳಾದ ಲಾಲು ಪ್ರಸಾದ್ ಯಾದವ್, ಬಿಹಾರ ಸಿಎಂ ನಿತೀಶ್ ಕುಮಾರ್, ರಾಮ್‌ ವಿಲಾಸ್ ಪಾಸ್ವಾನ್ ಹಾಗೂ ಸುನಿಲ್ ಕುಮಾರ್ ಮೋದಿ ರಾಜಕೀಯದಲ್ಲಿ ಕರ್ಪೂರಿ ಠಾಕೂರ್ ಅವರ ಶಿಷ್ಯಂದಿರು.

ಕರ್ಪೂರಿ ಠಾಕೂರ್ ಹುಟ್ಟಿದ್ದು 1924ರ ಜನವರಿ 24ರಂದು. ತಂದೆ ಶ್ರೀ ಕೋಗುಲ್‌ ಠಾಕೂರ್, ತಾಯಿ ರಾಮ್‌ದುಲಾರಿ ದೇವಿ. ಅವರ ತಂದೆ ಕ್ಷೌರಿಕ ವೃತ್ತಿ ಮಾಡುತ್ತಿದ್ದರು. ಕೃಷಿಕರೂ ಆಗಿದ್ದರು.

ಬಿಎ ಪದವಿ ಪಡೆದು ತಮ್ಮ ಹಳ್ಳಿಯಲ್ಲಿ ಶಿಕ್ಷಕರಾಗಿದ್ದ ಠಾಕೂರ್ ಅವರು, ಕ್ವಿಟ್‌ ಇಂಡಿಯಾ ಚಳವಳಿ ಪ್ರಾರಂಭವಾದಾಗ ಅದರಲ್ಲಿ ಪಾಲ್ಗೊಂಡಿದ್ದರು. ಜಯಪ್ರಕಾಶ್ ನಾರಾಯಣ್ ರಚಿಸಿದ್ದ ‘ಆಜಾದ್ ದಾಸ್ತಾ’ದ ಸಕ್ರಿಯ ಸದಸ್ಯರಾಗಿದ್ದರು. ಕ್ವಿಟ್‌ ಇಂಡಿಯಾ ಚಳವಳಿ ಸಂದರ್ಭದಲ್ಲಿ 26 ತಿಂಗಳು ಅವರು ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ಬರುವ ಮೊದಲು ಎರಡು ಸಲ ಹಾಗೂ ಬಂದ ನಂತರ 18 ಸಲ ಅವರು ಜೈಲು ಶಿಕ್ಷೆಗೆ ಒಳಗಾಗಿದ್ದರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ 1952ರಲ್ಲಿ ಬಿಹಾರದ ತೈಪುರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಠಾಕೂರ್, ಮೊದಲ ಬಾರಿಗೆ ಗೆಲುವು ದಾಖಲಿಸಿದ್ದರು. 1967ರಲ್ಲಿ ಮಹಾಮಾಯಾ ಪ್ರಸಾದ್ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. 1970ರಲ್ಲಿ ಕರ್ಪೂರಿ ಠಾಕೂರ್ ಅವರ ನೇತೃತ್ವದ ಸರ್ಕಾರ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿತ್ತು.

ತನ್ನ ರಾಜಕೀಯ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕರ್ಪೂರಿ ಠಾಕೂರ್ ಹಲವು ಕೊಡುಗೆಗಳನ್ನು ನೀಡಿದ್ದರು. ಆ ಮೂಲಕ ಮಧ್ಯಮ ಮತ್ತು ಬಡ ವರ್ಗದ ಯುವಜನರಿಗೆ ಸಹಾಯ ಮಾಡಿದ್ದರು. ಕರ್ಪೂರಿ ಠಾಕೂರ್ ಅವರು ಮೆಟ್ರಿಕ್ಯುಲೇಷನ್ ತೇರ್ಗಡೆಯಾಗಲು ಇದ್ದ ಇಂಗ್ಲಿಷ್‌ನ ಅಗತ್ಯವನ್ನು ತಪ್ಪಿಸಿದ್ದರು. ಎಂಟನೇ ತರಗತಿಯವರೆಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸಿದ್ದರು. ಉರ್ದು ಭಾಷೆಗೆ ಬಿಹಾರದಲ್ಲಿ ಎರಡನೇ ಸ್ಥಾನಮಾನ ನೀಡಿದ್ದರು.

ಕರ್ಪೂರಿ ಠಾಕೂರ್ 1978ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಉದ್ಯೋಗದಲ್ಲಿ ದಮನಿತರಿಗೆ ಶೇ 26ರಷ್ಟು ಮೀಸಲಾತಿಯನ್ನು ಜಾರಿಗೆ ತಂದರು. ರಾಜ್ಯದ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಲು ವೇತನ ಆಯೋಗದ ಮೂಲಕ ಸಮಾನ ವೇತನ ಪದ್ದತಿ ಜಾರಿಗೆ ತಂದರು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಿದ್ದರು.

ತನ್ನ ಉತ್ತಮ ಕೆಲಸಗಳ ಕಾರಣಕ್ಕೆ ಜನರಿಂದ ‘ಜನ ಸೇವಕ್‌’ ಎಂದು ಬಿರುದು ಪಡೆದಿದ್ದ ಕರ್ಪೂರಿ ಠಾಕೂರ್, 1988ರಲ್ಲಿ ಹೃದಯಾಘಾತದಿಂದ ನಿಧನರಾದರು.

‘ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್ ಅವರಿಗೆ ರಾಷ್ಟ್ರಪತಿ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದರ ಹಿಂದೆ ಬಿಜೆಪಿಯ ರಾಜಕೀಯ ಲೆಕ್ಕಾಚಾರ ಇರಬಹುದು ಎಂದು ಕೆಲ ಮಾಧ್ಯಮಗಳು ವಿಶ್ಲೇಷಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ ಸಾಮಾಜಿಕ ನ್ಯಾಯವನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಬಿಜೆಪಿ ಸಾಮಾಜಿಕ ನ್ಯಾಯದ ಮುಂದಾಳುಗೆ ಪ್ರಶಸ್ತಿ ಘೋಷಣೆ ಮಾಡಿದೆ ಎನ್ನಲಾಗಿದೆ.

ಅಲ್ಲದೆ, ಕರ್ಪೂರಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದರ ಹಿಂದೆ ಅತೀ ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಸೆಳೆಯುವ ತಂತ್ರವೂ ಅಡಗಿದೆ ಎಂದು ಹೇಳಲಾಗ್ತಿದೆ. ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಪ್ರಸ್ತುತ  ಇಂಡಿಯಾದ ಒಕ್ಕೂಟದ ಪಕ್ಷಗಳ ಬಳಿಯೇ ಇದೆ. ಅವುಗಳನ್ನು ತಮ್ಮತ್ತ ಸೆಳೆಯುವ ಬಿಜೆಪಿಯ ತಂತ್ರದ ಭಾಗವೇ ಪ್ರಶಸ್ತಿ ಎಂದು ಹೇಳಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಶಸ್ತಿ ಘೋಷಣೆಯನ್ನು ಸ್ವಾಗತಿಸಿದ್ದಾರೆ. ಆದರೆ, ಅವರ ಪಕ್ಷ ಜೆಡಿಯುನ ಮಿತ್ರ ಪಕ್ಷ ಆರ್‌ಜೆಡಿ “ಇದು ಬಿಜೆಪಿಯ ರಾಜಕೀಯ ಗಿಮಿಕ್” ಎಂದಿದೆ.

“ಕರ್ಪೂರಿ ಠಾಕೂರ್ ಅವರ 100ನೇ ಜನ್ಮ ಜಯಂತಿಯ ಸಂದರ್ಭದಲ್ಲಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಘೋಷಣೆ ಮಾಡಿರುವುದು ಸಮಾಜದ ದಲಿತರು, ವಂಚಿತ ಮತ್ತು ನಿರ್ಲಕ್ಷಿತ ವರ್ಗಗಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸಲಿದೆ. ಕರ್ಪೂರಿ ಠಾಕೂರ್‌ಗೆ ಭಾರತ ರತ್ನ ನೀಡಬೇಕೆಂದು ನಾನು ಯಾವಾತ್ತೋ ಒತ್ತಾಯಿಸಿದ್ದೆವು. ಸರ್ಕಾರದ ನಿರ್ಧಾರವು ಸಂತೋಷವನ್ನುಂಟು ಮಾಡಿದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...