Homeಮುಖಪುಟಕರ್ಪೂರಿ ಠಾಕೂರ್‌ಗೆ 'ಭಾರತ ರತ್ನ' ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್‌ಗೆ ‘ಭಾರತ ರತ್ನ’ ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

- Advertisement -
- Advertisement -

ಸಮಾಜವಾದಿ ನಾಯಕ, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಿಸಿದೆ.

ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ಸ್ವಾತಂತ್ರ ಹೋರಾಟಗಾರರಾಗಿದ್ದ ಕರ್ಪೂರಿ ಠಾಕೂರ್ ಅವರು, ಶಿಕ್ಷಣ, ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ದೇಶದ ಪ್ರಮುಖ ರಾಜಕಾರಣಿಗಳಾದ ಲಾಲು ಪ್ರಸಾದ್ ಯಾದವ್, ಬಿಹಾರ ಸಿಎಂ ನಿತೀಶ್ ಕುಮಾರ್, ರಾಮ್‌ ವಿಲಾಸ್ ಪಾಸ್ವಾನ್ ಹಾಗೂ ಸುನಿಲ್ ಕುಮಾರ್ ಮೋದಿ ರಾಜಕೀಯದಲ್ಲಿ ಕರ್ಪೂರಿ ಠಾಕೂರ್ ಅವರ ಶಿಷ್ಯಂದಿರು.

ಕರ್ಪೂರಿ ಠಾಕೂರ್ ಹುಟ್ಟಿದ್ದು 1924ರ ಜನವರಿ 24ರಂದು. ತಂದೆ ಶ್ರೀ ಕೋಗುಲ್‌ ಠಾಕೂರ್, ತಾಯಿ ರಾಮ್‌ದುಲಾರಿ ದೇವಿ. ಅವರ ತಂದೆ ಕ್ಷೌರಿಕ ವೃತ್ತಿ ಮಾಡುತ್ತಿದ್ದರು. ಕೃಷಿಕರೂ ಆಗಿದ್ದರು.

ಬಿಎ ಪದವಿ ಪಡೆದು ತಮ್ಮ ಹಳ್ಳಿಯಲ್ಲಿ ಶಿಕ್ಷಕರಾಗಿದ್ದ ಠಾಕೂರ್ ಅವರು, ಕ್ವಿಟ್‌ ಇಂಡಿಯಾ ಚಳವಳಿ ಪ್ರಾರಂಭವಾದಾಗ ಅದರಲ್ಲಿ ಪಾಲ್ಗೊಂಡಿದ್ದರು. ಜಯಪ್ರಕಾಶ್ ನಾರಾಯಣ್ ರಚಿಸಿದ್ದ ‘ಆಜಾದ್ ದಾಸ್ತಾ’ದ ಸಕ್ರಿಯ ಸದಸ್ಯರಾಗಿದ್ದರು. ಕ್ವಿಟ್‌ ಇಂಡಿಯಾ ಚಳವಳಿ ಸಂದರ್ಭದಲ್ಲಿ 26 ತಿಂಗಳು ಅವರು ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ಬರುವ ಮೊದಲು ಎರಡು ಸಲ ಹಾಗೂ ಬಂದ ನಂತರ 18 ಸಲ ಅವರು ಜೈಲು ಶಿಕ್ಷೆಗೆ ಒಳಗಾಗಿದ್ದರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ 1952ರಲ್ಲಿ ಬಿಹಾರದ ತೈಪುರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಠಾಕೂರ್, ಮೊದಲ ಬಾರಿಗೆ ಗೆಲುವು ದಾಖಲಿಸಿದ್ದರು. 1967ರಲ್ಲಿ ಮಹಾಮಾಯಾ ಪ್ರಸಾದ್ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. 1970ರಲ್ಲಿ ಕರ್ಪೂರಿ ಠಾಕೂರ್ ಅವರ ನೇತೃತ್ವದ ಸರ್ಕಾರ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿತ್ತು.

ತನ್ನ ರಾಜಕೀಯ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕರ್ಪೂರಿ ಠಾಕೂರ್ ಹಲವು ಕೊಡುಗೆಗಳನ್ನು ನೀಡಿದ್ದರು. ಆ ಮೂಲಕ ಮಧ್ಯಮ ಮತ್ತು ಬಡ ವರ್ಗದ ಯುವಜನರಿಗೆ ಸಹಾಯ ಮಾಡಿದ್ದರು. ಕರ್ಪೂರಿ ಠಾಕೂರ್ ಅವರು ಮೆಟ್ರಿಕ್ಯುಲೇಷನ್ ತೇರ್ಗಡೆಯಾಗಲು ಇದ್ದ ಇಂಗ್ಲಿಷ್‌ನ ಅಗತ್ಯವನ್ನು ತಪ್ಪಿಸಿದ್ದರು. ಎಂಟನೇ ತರಗತಿಯವರೆಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸಿದ್ದರು. ಉರ್ದು ಭಾಷೆಗೆ ಬಿಹಾರದಲ್ಲಿ ಎರಡನೇ ಸ್ಥಾನಮಾನ ನೀಡಿದ್ದರು.

ಕರ್ಪೂರಿ ಠಾಕೂರ್ 1978ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಉದ್ಯೋಗದಲ್ಲಿ ದಮನಿತರಿಗೆ ಶೇ 26ರಷ್ಟು ಮೀಸಲಾತಿಯನ್ನು ಜಾರಿಗೆ ತಂದರು. ರಾಜ್ಯದ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಲು ವೇತನ ಆಯೋಗದ ಮೂಲಕ ಸಮಾನ ವೇತನ ಪದ್ದತಿ ಜಾರಿಗೆ ತಂದರು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಿದ್ದರು.

ತನ್ನ ಉತ್ತಮ ಕೆಲಸಗಳ ಕಾರಣಕ್ಕೆ ಜನರಿಂದ ‘ಜನ ಸೇವಕ್‌’ ಎಂದು ಬಿರುದು ಪಡೆದಿದ್ದ ಕರ್ಪೂರಿ ಠಾಕೂರ್, 1988ರಲ್ಲಿ ಹೃದಯಾಘಾತದಿಂದ ನಿಧನರಾದರು.

‘ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್ ಅವರಿಗೆ ರಾಷ್ಟ್ರಪತಿ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದರ ಹಿಂದೆ ಬಿಜೆಪಿಯ ರಾಜಕೀಯ ಲೆಕ್ಕಾಚಾರ ಇರಬಹುದು ಎಂದು ಕೆಲ ಮಾಧ್ಯಮಗಳು ವಿಶ್ಲೇಷಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ ಸಾಮಾಜಿಕ ನ್ಯಾಯವನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಬಿಜೆಪಿ ಸಾಮಾಜಿಕ ನ್ಯಾಯದ ಮುಂದಾಳುಗೆ ಪ್ರಶಸ್ತಿ ಘೋಷಣೆ ಮಾಡಿದೆ ಎನ್ನಲಾಗಿದೆ.

ಅಲ್ಲದೆ, ಕರ್ಪೂರಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದರ ಹಿಂದೆ ಅತೀ ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಸೆಳೆಯುವ ತಂತ್ರವೂ ಅಡಗಿದೆ ಎಂದು ಹೇಳಲಾಗ್ತಿದೆ. ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಪ್ರಸ್ತುತ  ಇಂಡಿಯಾದ ಒಕ್ಕೂಟದ ಪಕ್ಷಗಳ ಬಳಿಯೇ ಇದೆ. ಅವುಗಳನ್ನು ತಮ್ಮತ್ತ ಸೆಳೆಯುವ ಬಿಜೆಪಿಯ ತಂತ್ರದ ಭಾಗವೇ ಪ್ರಶಸ್ತಿ ಎಂದು ಹೇಳಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಶಸ್ತಿ ಘೋಷಣೆಯನ್ನು ಸ್ವಾಗತಿಸಿದ್ದಾರೆ. ಆದರೆ, ಅವರ ಪಕ್ಷ ಜೆಡಿಯುನ ಮಿತ್ರ ಪಕ್ಷ ಆರ್‌ಜೆಡಿ “ಇದು ಬಿಜೆಪಿಯ ರಾಜಕೀಯ ಗಿಮಿಕ್” ಎಂದಿದೆ.

“ಕರ್ಪೂರಿ ಠಾಕೂರ್ ಅವರ 100ನೇ ಜನ್ಮ ಜಯಂತಿಯ ಸಂದರ್ಭದಲ್ಲಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಘೋಷಣೆ ಮಾಡಿರುವುದು ಸಮಾಜದ ದಲಿತರು, ವಂಚಿತ ಮತ್ತು ನಿರ್ಲಕ್ಷಿತ ವರ್ಗಗಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸಲಿದೆ. ಕರ್ಪೂರಿ ಠಾಕೂರ್‌ಗೆ ಭಾರತ ರತ್ನ ನೀಡಬೇಕೆಂದು ನಾನು ಯಾವಾತ್ತೋ ಒತ್ತಾಯಿಸಿದ್ದೆವು. ಸರ್ಕಾರದ ನಿರ್ಧಾರವು ಸಂತೋಷವನ್ನುಂಟು ಮಾಡಿದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...