Homeಮುಖಪುಟಕರ್ಪೂರಿ ಠಾಕೂರ್‌ಗೆ 'ಭಾರತ ರತ್ನ' ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್‌ಗೆ ‘ಭಾರತ ರತ್ನ’ ಘೋಷಣೆ: ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

- Advertisement -
- Advertisement -

ಸಮಾಜವಾದಿ ನಾಯಕ, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ ನೀಡಲಾಗುವುದು ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಿಸಿದೆ.

ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಣೆಯ ಒಂದು ದಿನ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ಸ್ವಾತಂತ್ರ ಹೋರಾಟಗಾರರಾಗಿದ್ದ ಕರ್ಪೂರಿ ಠಾಕೂರ್ ಅವರು, ಶಿಕ್ಷಣ, ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ದೇಶದ ಪ್ರಮುಖ ರಾಜಕಾರಣಿಗಳಾದ ಲಾಲು ಪ್ರಸಾದ್ ಯಾದವ್, ಬಿಹಾರ ಸಿಎಂ ನಿತೀಶ್ ಕುಮಾರ್, ರಾಮ್‌ ವಿಲಾಸ್ ಪಾಸ್ವಾನ್ ಹಾಗೂ ಸುನಿಲ್ ಕುಮಾರ್ ಮೋದಿ ರಾಜಕೀಯದಲ್ಲಿ ಕರ್ಪೂರಿ ಠಾಕೂರ್ ಅವರ ಶಿಷ್ಯಂದಿರು.

ಕರ್ಪೂರಿ ಠಾಕೂರ್ ಹುಟ್ಟಿದ್ದು 1924ರ ಜನವರಿ 24ರಂದು. ತಂದೆ ಶ್ರೀ ಕೋಗುಲ್‌ ಠಾಕೂರ್, ತಾಯಿ ರಾಮ್‌ದುಲಾರಿ ದೇವಿ. ಅವರ ತಂದೆ ಕ್ಷೌರಿಕ ವೃತ್ತಿ ಮಾಡುತ್ತಿದ್ದರು. ಕೃಷಿಕರೂ ಆಗಿದ್ದರು.

ಬಿಎ ಪದವಿ ಪಡೆದು ತಮ್ಮ ಹಳ್ಳಿಯಲ್ಲಿ ಶಿಕ್ಷಕರಾಗಿದ್ದ ಠಾಕೂರ್ ಅವರು, ಕ್ವಿಟ್‌ ಇಂಡಿಯಾ ಚಳವಳಿ ಪ್ರಾರಂಭವಾದಾಗ ಅದರಲ್ಲಿ ಪಾಲ್ಗೊಂಡಿದ್ದರು. ಜಯಪ್ರಕಾಶ್ ನಾರಾಯಣ್ ರಚಿಸಿದ್ದ ‘ಆಜಾದ್ ದಾಸ್ತಾ’ದ ಸಕ್ರಿಯ ಸದಸ್ಯರಾಗಿದ್ದರು. ಕ್ವಿಟ್‌ ಇಂಡಿಯಾ ಚಳವಳಿ ಸಂದರ್ಭದಲ್ಲಿ 26 ತಿಂಗಳು ಅವರು ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ಬರುವ ಮೊದಲು ಎರಡು ಸಲ ಹಾಗೂ ಬಂದ ನಂತರ 18 ಸಲ ಅವರು ಜೈಲು ಶಿಕ್ಷೆಗೆ ಒಳಗಾಗಿದ್ದರು.

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ 1952ರಲ್ಲಿ ಬಿಹಾರದ ತೈಪುರ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಠಾಕೂರ್, ಮೊದಲ ಬಾರಿಗೆ ಗೆಲುವು ದಾಖಲಿಸಿದ್ದರು. 1967ರಲ್ಲಿ ಮಹಾಮಾಯಾ ಪ್ರಸಾದ್ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. 1970ರಲ್ಲಿ ಕರ್ಪೂರಿ ಠಾಕೂರ್ ಅವರ ನೇತೃತ್ವದ ಸರ್ಕಾರ ಬಿಹಾರದಲ್ಲಿ ಅಧಿಕಾರಕ್ಕೆ ಬಂದಿತ್ತು.

ತನ್ನ ರಾಜಕೀಯ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕರ್ಪೂರಿ ಠಾಕೂರ್ ಹಲವು ಕೊಡುಗೆಗಳನ್ನು ನೀಡಿದ್ದರು. ಆ ಮೂಲಕ ಮಧ್ಯಮ ಮತ್ತು ಬಡ ವರ್ಗದ ಯುವಜನರಿಗೆ ಸಹಾಯ ಮಾಡಿದ್ದರು. ಕರ್ಪೂರಿ ಠಾಕೂರ್ ಅವರು ಮೆಟ್ರಿಕ್ಯುಲೇಷನ್ ತೇರ್ಗಡೆಯಾಗಲು ಇದ್ದ ಇಂಗ್ಲಿಷ್‌ನ ಅಗತ್ಯವನ್ನು ತಪ್ಪಿಸಿದ್ದರು. ಎಂಟನೇ ತರಗತಿಯವರೆಗೆ ಉಚಿತ ಶಿಕ್ಷಣ ಸೌಲಭ್ಯ ಕಲ್ಪಿಸಿದ್ದರು. ಉರ್ದು ಭಾಷೆಗೆ ಬಿಹಾರದಲ್ಲಿ ಎರಡನೇ ಸ್ಥಾನಮಾನ ನೀಡಿದ್ದರು.

ಕರ್ಪೂರಿ ಠಾಕೂರ್ 1978ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಉದ್ಯೋಗದಲ್ಲಿ ದಮನಿತರಿಗೆ ಶೇ 26ರಷ್ಟು ಮೀಸಲಾತಿಯನ್ನು ಜಾರಿಗೆ ತಂದರು. ರಾಜ್ಯದ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಲು ವೇತನ ಆಯೋಗದ ಮೂಲಕ ಸಮಾನ ವೇತನ ಪದ್ದತಿ ಜಾರಿಗೆ ತಂದರು. ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಿದ್ದರು.

ತನ್ನ ಉತ್ತಮ ಕೆಲಸಗಳ ಕಾರಣಕ್ಕೆ ಜನರಿಂದ ‘ಜನ ಸೇವಕ್‌’ ಎಂದು ಬಿರುದು ಪಡೆದಿದ್ದ ಕರ್ಪೂರಿ ಠಾಕೂರ್, 1988ರಲ್ಲಿ ಹೃದಯಾಘಾತದಿಂದ ನಿಧನರಾದರು.

‘ಬಿಜೆಪಿಯ ಓಟ್‌ ಬ್ಯಾಂಕ್ ತಂತ್ರ?

ಕರ್ಪೂರಿ ಠಾಕೂರ್ ಅವರಿಗೆ ರಾಷ್ಟ್ರಪತಿ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಿರುವುದರ ಹಿಂದೆ ಬಿಜೆಪಿಯ ರಾಜಕೀಯ ಲೆಕ್ಕಾಚಾರ ಇರಬಹುದು ಎಂದು ಕೆಲ ಮಾಧ್ಯಮಗಳು ವಿಶ್ಲೇಷಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರತಿಪಕ್ಷಗಳ ‘ಇಂಡಿಯಾ ಒಕ್ಕೂಟ’ ಸಾಮಾಜಿಕ ನ್ಯಾಯವನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಬಿಜೆಪಿ ಸಾಮಾಜಿಕ ನ್ಯಾಯದ ಮುಂದಾಳುಗೆ ಪ್ರಶಸ್ತಿ ಘೋಷಣೆ ಮಾಡಿದೆ ಎನ್ನಲಾಗಿದೆ.

ಅಲ್ಲದೆ, ಕರ್ಪೂರಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದರ ಹಿಂದೆ ಅತೀ ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಸೆಳೆಯುವ ತಂತ್ರವೂ ಅಡಗಿದೆ ಎಂದು ಹೇಳಲಾಗ್ತಿದೆ. ಹಿಂದುಳಿದ ವರ್ಗಗಳ ಮತ ಬ್ಯಾಂಕ್ ಪ್ರಸ್ತುತ  ಇಂಡಿಯಾದ ಒಕ್ಕೂಟದ ಪಕ್ಷಗಳ ಬಳಿಯೇ ಇದೆ. ಅವುಗಳನ್ನು ತಮ್ಮತ್ತ ಸೆಳೆಯುವ ಬಿಜೆಪಿಯ ತಂತ್ರದ ಭಾಗವೇ ಪ್ರಶಸ್ತಿ ಎಂದು ಹೇಳಲಾಗಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಶಸ್ತಿ ಘೋಷಣೆಯನ್ನು ಸ್ವಾಗತಿಸಿದ್ದಾರೆ. ಆದರೆ, ಅವರ ಪಕ್ಷ ಜೆಡಿಯುನ ಮಿತ್ರ ಪಕ್ಷ ಆರ್‌ಜೆಡಿ “ಇದು ಬಿಜೆಪಿಯ ರಾಜಕೀಯ ಗಿಮಿಕ್” ಎಂದಿದೆ.

“ಕರ್ಪೂರಿ ಠಾಕೂರ್ ಅವರ 100ನೇ ಜನ್ಮ ಜಯಂತಿಯ ಸಂದರ್ಭದಲ್ಲಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಘೋಷಣೆ ಮಾಡಿರುವುದು ಸಮಾಜದ ದಲಿತರು, ವಂಚಿತ ಮತ್ತು ನಿರ್ಲಕ್ಷಿತ ವರ್ಗಗಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸಲಿದೆ. ಕರ್ಪೂರಿ ಠಾಕೂರ್‌ಗೆ ಭಾರತ ರತ್ನ ನೀಡಬೇಕೆಂದು ನಾನು ಯಾವಾತ್ತೋ ಒತ್ತಾಯಿಸಿದ್ದೆವು. ಸರ್ಕಾರದ ನಿರ್ಧಾರವು ಸಂತೋಷವನ್ನುಂಟು ಮಾಡಿದೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮೀರುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...