Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...