Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...