Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...