Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...