Homeಕರ್ನಾಟಕನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನನಗೆ ಟಿಕೆಟ್ ತಪ್ಪಲು ಬಿಎಲ್‌ ಸಂತೋಷ್ ನೇರ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

- Advertisement -
- Advertisement -

ಕಳೆದ ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಅವರು, ”ತಮಗೆ ಟಿಕೆಟ್ ಸಿಗದಿರಲು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರೇ ನೇರ ಕಾರಣ” ಎಂದು ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ” ಎಂದು ಹೊಸ ಬಾಂಬ್ ಸಿಡಿಸಿದರು.

”ಮೊದಲ ಪಟ್ಟಿ ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆಯಾಗಲಿಲ್ಲ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ?” ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.

”ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌” ಎಂದು ಕಾಂಗ್ರೆಸ್​ ಮುಖಂಡ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

”ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು 2 ವರ್ಷಗಳ ಕಾಲ ಕೇವಲ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ನಾನು ಮಂತ್ರಿ ಆಗಲಿಲ್ಲ. ಪಕ್ಷದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿ ನಿಲವು ಮಾಡಿಕೊಡಲು ನನ್ನ ಸೇವೆ ಇದೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ದಿವಂಗತ ಮಾಜಿ ಸಂಸದ ಅನಂತ ಕುಮಾರ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟಿದ್ದನೆ” ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ತಮ್ಮ ಹಳೆ ದಿನಗಳನ್ನು ಮೆಲಕು ಹಾಕಿದರು.

ಇದನ್ನೂ ಓದಿ: ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

”ಕೋರ್​ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದರೆ, ಕೊನೆಗೆ ಟಿಕೆಟ್​ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ, ಹಾಗಾಗಿ ರಾಮದಾಸ್​ಗೆ ಟಿಕೆಟ್​ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದರು, ಆದರೆ ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ” ಎಂದು ಸಂತೋಷ್​ ವಿರುದ್ಧ ಸಾಲು ಸಾಲು ಗಂಭೀರ ಆರೋಪಗಳನ್ನು ಮಾಡಿದರು.

”ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಫೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು” ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

”ಬಿಜೆಪಿಯೊಳಗಿನ ವೇದನೆಯನ್ನುಸಹಿಸಕೊಂಡರೆ ಜಗದೀಶ್​ ಶೆಟ್ಟರ್ ಅವರಿಗೆ ಮಾನ ಮರ್ಯಾದೆ ಇಲ್ಲ ಅಂತ ಕಾಣುತ್ತಾರೆ. ನಾನು 70 ವರ್ಷ ಆದ ಮೇಲೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇದು ನನ್ನ ಕೊನೆ ಚುನಾವಣೆ…” ಎನ್ನುತ್ತಾ ಕಾಂಗ್ರೆಸ್​ ನಾಯಕ ಜಗದೀಶ್​ ಶೆಟ್ಟರ್​​ ಭಾವುಕಾರದರು.

”ಕಾಂಗ್ರೆಸ್ ನಾಯಕರಿಗೆ ನಾನು ಗೌರವದಿಂದ ನಡೆಸಿಕೊಳ್ಳಿ ಎಂದು ಹೇಳಿದ್ದೇನೆ, ಪಕ್ಷ ನಶಿಸಿ ಹೋಗುತ್ತಿದೆ. ಪಕ್ಷವನ್ನು ಮುಗಿಸಲು ಕಾಯುತ್ತಿದ್ದಾರೆ. ಬಿಎಲ್ ಸಂತೋಷ್ ಜೊತೆ ಒಂದೊಂದೆ ಹೆಸರು ಬರತ್ತೆ. ಬಿಎಲ್​ ಸಂತೋಷ್ ಅವರಿಗೆ ಒಂದೇ ಹೇಳೋದು. ನಿಮ್ಮ ಮಾನಸ ಪುತ್ರನಿಗೆ ತೋರಿಸೋ ಪ್ರೀತಿ ನನಗೆ ಒಂದು ಪರ್ಸೆಂಟ್ ತೋರಸಬೇಕಿತ್ತು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...