Homeಕರ್ನಾಟಕಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

ಲಿಂಗಾಯತರ ಕುರಿತು ಬಿಎಲ್‌ ಸಂತೋಷ್ ಹೇಳಿಕೆ ಸುಳ್ಳು: ಬಿಜೆಪಿ ಸ್ಪಷ್ಟನೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು ಇದನ್ನು ನಿರಾಕರಿಸಿರುವ ಬಿಜೆಪಿ ಪತ್ರಿಕಾಪ್ರಕಟಣೆ ಹೊರಡಿಸಿದೆ.

ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್, ಅವಧಿಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತು. ಅದಾದನಂತೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರರ ಬಗ್ಗೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತಿಚೆಗೆ ಪಂಚಮಸಾಲಿ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್‌ ಹಾಗೂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಿಲ್ಲ. ಅವರು ಬಿಜೆಪಿಯನ್ನೇ ತೊರೆದು ಕಾಂಗ್ರೆಸ್ ಸೇರಿಕೊಂಡರು. ಈ ಎಲ್ಲ ಬೆಳವಣಿಗೆಯ ಮಧ್ಯೆ ಇದೀಗ ಬಿಎಲ್ ಸಂತೋಷ್ ಅವರು ಲಿಂಗಾಯತ ನಾಯಕರು ಹಾಗೂ ಆ ಸಮುದಾಯದವರ ಅವಶ್ಯಕತೆ ಬಿಜೆಪಿಗೆ ಇಲ್ಲ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿಯ ಪೇಪರ್ ಕಟಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸತ್ಯವಾದ ಸುದ್ದಿಯೋ ಅಥವಾ ಸುಳ್ಳೋ ಎನ್ನುವ ಬಗ್ಗೆ ಗೊಂದಲಗಳಿದ್ದು, ಈ ಸುದ್ದಿಯ ಮೂಲ ಯಾವುದು ಎಂಬ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ.

ಈ ಬಗ್ಗೆ ಬಿಜೆಪಿ ನಿರಾಕರಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸುಳ್ಳು ಸುದ್ದಿ ಪೋಸ್ಟ್ ಮಾಡಲಾಗಿದೆ. ಈ ರೀತಿ ಹೇಳಿಕೆಯನ್ನು ಸಂತೋಷ್‌ ಅವರು ಎಂದಿಗೂ ಹೇಳಿರುವುದಿಲ್ಲ ಎಂದು ಅಧಿಕೃತವಾಗಿ ಧೃಢೀಕರಿಸಿದ್ದಾರೆ. ಅಪಪ್ರಚಾರಕ್ಕಾಗಿ ಸುಳ್ಳು ಸುದ್ದಿ ಹರಿಬಿಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ವೈರಲ್ ಆದ ಸುದ್ದಿ ಪತ್ರಿಕೆಯಲ್ಲಿ ಏನಿದೆ?

ಬಿಜೆಪಿ ನಂಬಿಕ ಇಟ್ಟಿರುವುದು, ಹಿಂದುತ್ವದ ಆಧಾರದ ಮೇಲೆ ಹೊರತು ಯಾವುದೊ ನಾಯಕನ ಜಾತಿಯ ಮೇಲಲ್ಲ. ಕಾರ್ಯಕರ್ತರು ಹಿಂದುತ್ವದ ಮೇಲೆ ನಂಬಿಕೆ ಇಡಬೇಕೆ ಹೊರತು ಯಾವುದೋ ವ್ಯಕ್ತಿಯ ಮೇಲಲ್ಲ. ಎಂದು ಬಿಜೆಪಿಯ ಸಂಘಟನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ರಾಜ್ಯ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು..

ರಾಜ್ಯದಲ್ಲಿ ಲಿಂಗಾಯತರ ಮತಗಳು ಕೈ ತಪ್ಪಿಹೋದರೆ ಪಕ್ಷಕ್ಕೆ ಭಾರೀ ಹೊಡತ ಎಂದು ಸಭೆಯಲ್ಲಿ ದನಿ ಎತ್ತಿದ ಕಾರ್ಯಕರ್ತರ ಮಾತಿಗೆ ಸಿಡಿಮಿಡಿಗೊಂಡು ಉತ್ತರಿಸಿ ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಹೇಳಿದರು.

ನಮಗೆ ಲಿಂಗಾಯತರ ಅಗತ್ಯವಿಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಅವರ ಈಗಲೂ ಅದನ್ನೇ ಹೇಳುತ್ತೇನೆ. ಇಲ್ಲಿ ಯಾರೂ ಸಹ ಚಿರಂಜೀವಿಗಳಲ್ಲ. ಎಂದು ಪರೋಕ್ಷವಾಗಿ ಬಿ.ಎಸ್‌.ವೈ ಅವರ ಹೇಳದೆ ವ್ಯಂಗ್ಯವಾಡಿದರು.

ಬಿಜೆಪಿ ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ, ಲಿಂಗಾಯತರನ್ನು ಇನ್ನೆಷ್ಟು ದಿನ ಉತ್ತರ ಓಲೈಕೆ ಮಾಡಬೇಕು.

ಅವರ ಇಬ್ಬರು ಮಕ್ಕಳನ್ನು ಬೆಳೆಸಿದರೆ ಒಂದೇ ಸಮುದಾಯ ಬೆಳೆಯುತ್ತದೆ ಹೊರತು ಪಕ್ಷ ಬೆಳೆಯುವುದಿಲ್ಲ ಎಂದು ಕಾರ್ಯಕರ್ತರ ಮೇಲೆ ಕಿಡಿ ಕಾರಿದರು.

ಈ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಹುಬ್ಬಳ್ಳಿ, ಧಾರವಾಡ ಮೈಸೂರು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಕಾರ್ಯಕರ್ತರು ಸಭೆಯಿಂದ ಹೊರ ನಡೆದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...