Homeಮುಖಪುಟಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು 'ಕರಾಳ ದಿನ'ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

ಮೋದಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸದಿದ್ದರೆ ದೇಶವು ‘ಕರಾಳ ದಿನ’ಗಳನ್ನು ನೋಡಲಿದೆ: ಉದ್ಧವ್ ಠಾಕ್ರೆ

- Advertisement -
- Advertisement -

ಮೋದಿ ಸರ್ಕಾರವನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸದಿದ್ದರೆ ದೇಶವು “ಕರಾಳ ದಿನಗಳನ್ನು” ನೋಡಲಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಭಾರತದ ಜನರು ತಮ್ಮ ನಾಯಕರ ಭವಿಷ್ಯವನ್ನು ನಿರ್ಧರಿಸುತ್ತಾರೆ. ಪ್ರಸ್ತುತ ಸರ್ಕಾರವನ್ನು ಸೋಲಿಸಿದರೆ ದೇಶದ ಭವಿಷ್ಯವು ಶಾಂತಿಯುತವಾಗಿರುತ್ತದೆ ಮತ್ತು ಪ್ರಜಾಪ್ರಭುತ್ವವು ಬಲವಾಗುತ್ತದೆ. ಇಲ್ಲದಿದ್ದರೆ ದೇಶವು ಕರಾಳ ದಿನಗಳನ್ನು ನೋಡಲಿದೆ. ಅಚ್ಛೇ ದಿನ್ ಎಂದಿಗೂ ಬರಲಿಲ್ಲ, ಆದರೆ ಕರಾಳ ದಿನಗಳು ಬರುತ್ತವೆ ಎಂದು ಹೇಳಿದ್ದಾರೆ.

ಭ್ರಷ್ಟರ ರಕ್ಷಣೆ ಮೋದಿ ಗ್ಯಾರಂಟಿ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. ಎಲ್ಲಾ ಧೂಳು ಮತ್ತು ಮಣ್ಣನ್ನು ಹೀರುವ ವ್ಯಾಕ್ಯೂಮ್ ಕ್ಲೀನರ್‌ನಂತೆ ಬಿಜೆಪಿ ಎಲ್ಲಾ ಭ್ರಷ್ಟರನ್ನು ಸೇರಿಸುತ್ತಿದೆ. ಕಾಂಗ್ರೆಸ್, ಶಿವಸೇನೆ ಭ್ರಷ್ಟರಿಂದ ಮುಕ್ತವಾಗಿದೆ ಎಂದು ಹೇಳಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಗೆ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲ, ಆದ್ದರಿಂದ ಚುನಾವಣಾ ಭಾಷಣದಲ್ಲಿ ಬಿಜೆಪಿ ರಾಮನ ಹೆಸರು ಹೇಳುತ್ತಿದೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳ ಬಗ್ಗೆ ಕೇಳಿದ ಪ್ರಶ್ನೆಗೆ ಠಾಕ್ರೆ, ಪ್ರಧಾನಿ ತಮ್ಮ ಭಾಷಣಗಳಲ್ಲಿ ಪಾಕಿಸ್ತಾನ ಬಗ್ಗೆ ಮಾತನಾಡುತ್ತಾರೆ, ಆದರೆ ಪ್ರತಿಪಕ್ಷಗಳು ಭಾರತದ ಬಗ್ಗೆ ಮಾತನಾಡುತ್ತವೆ ಎಂದು ಹೇಳಿದ್ದಾರೆ.

ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಟೀಕೆಗಳನ್ನು ಸಹಿಸುವುದಿಲ್ಲ ಆದರೆ ಇತರರ ವಿರುದ್ಧ ಏನೇನೋ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಣೆ ವೇಳೆ ಮಾತನಾಡಿದ್ದ ಶರದ್ ಪವಾರ್, ಮೋದಿ ಅವರು ಮುಸ್ಲಿಮರನ್ನು ಬಹಿರಂಗವಾಗಿ ಗುರಿಯಾಗಿಸಿದ್ದಾರೆ, ಆದರೆ ಅವರು ಪ್ರಧಾನಿಯಾಗಿದ್ದರೂ ಅವರು ಎಲ್ಲಾ ಜಾತಿಗಳು ಮತ್ತು ಧರ್ಮಗಳ ನಾಗರಿಕರ ಪರವಾಗಿ ನಿಲ್ಲಬೇಕು ಎಂದು ಹೇಳಿದ್ದರು.

ಮೋದಿ ಮಹಿಳಾ ವಿರೋಧಿ ಮತ್ತು ರೈತ ವಿರೋಧಿಯಾಗಿದ್ದಾರೆ. ಕಳೆದ 10 ವರ್ಷಗಳಲ್ಲಿ ರೈತರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ ಏನನ್ನೂ ಮಾಡಿಲ್ಲ, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆಯೂ ಅವರ ಸರ್ಕಾರ ಕಣ್ಣು ಮುಚ್ಚಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಹೇಮಂತ್ ಸೋರೆನ್ ಅವರ ಬಂಧನವು ಅಧಿಕಾರದ ದುರುಪಯೋಗ ಮತ್ತು ದುರಹಂಕಾರಕ್ಕೆ ಉದಾಹರಣೆಯಾಗಿದೆ ಎಂದು ಶರದ್‌ ಪವಾರ್‌ ಹೇಳಿದ್ದಾರೆ.

ಇದನ್ನು ಓದಿ; ಮೋದಿ ವಿರುದ್ಧ ಸ್ಪರ್ಧೆ: ವಾರಣಾಸಿಯಲ್ಲಿ ಅಧಿಕಾರಿಗಳು ನಾಮಪತ್ರದ ಅರ್ಜಿಯೇ ಕೊಡುತ್ತಿಲ್ಲ; ಶ್ಯಾಮ್ ರಂಗೀಲಾ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...