Homeಮುಖಪುಟಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಡಿಜಿಟಲ್ ಮುಷ್ಕರ'

ಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಡಿಜಿಟಲ್ ಮುಷ್ಕರ’

- Advertisement -
- Advertisement -

ದೀಪಾವಳಿಯ ಸಂಭ್ರಮದ ನಡುವೆ ದೇಶದಾದ್ಯಂತ ಗುರುವಾರ (ಅ.31) ಸುಮಾರು 11 ನಗರಗಳಲ್ಲಿ ಮಹಿಳಾ ಗಿಗ್ ಕಾರ್ಮಿಕರು ‘ಡಿಜಿಟಲ್ ಪ್ರತಿಭಟನೆ’ ನಡೆಸುವ ಮೂಲಕ ‘ಕರಾಳ ದೀಪಾವಳಿ’ ಆಚರಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ವತಂತ್ರ ಪತ್ರಕರ್ತೆ ಗ್ರೀಷ್ಮಾ ಕುತಾರ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಮಾಹಿತಿ ಆಧರಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಮಾಡಿರುವ ವರದಿಯ ಪ್ರಕಾರ, ಮಹಿಳಾ ಗಿಗ್ ಕಾರ್ಮಿಕರ ಒಕ್ಕೂಟ ‘ದಿ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್‌ ಸರ್ವಿಸ್ ವರ್ಕರ್ಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯು)’ ನೇತೃತ್ವದಲ್ಲಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡುವ ಡಿಜಿಟಲ್ ಮುಷ್ಕರ ನಡೆಸಲಾಗಿದೆ.

ಈ ಮೂಲಕ ಸರ್ಕಾರಿ ರಜಾದಿನಗಳಲ್ಲಿಯೂ ಕೆಲಸ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ವಿವಿಧ ಫ್ಲ್ಯಾಟ್‌ಫಾರ್ಮ್ ಕಂಪನಿಗಳ ಶೋಷಣೆಯ ವಿರುದ್ದ ಮೊದಲ ಬಾರಿಗೆ ಧ್ವನಿಯೆತ್ತಲಾಗಿದೆ.

ಕಂಪನಿಗಳ ಶೋಷಣೆಯ ಖಂಡನೆ, ತಮ್ಮ ಹಕ್ಕುಗಳನ್ನು ದೊರಕಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಮತ್ತು ದೇಶದಾದ್ಯಂತ ವಿವಿಧ ಗಿಗ್ ಕಾರ್ಮಿಕರನ್ನು ಒಗ್ಗೂಡಿಸುವುದು ಮುಷ್ಕರದ ಉದ್ಧೇಶ ಎಂದು ಜಿಐಪಿಎಸ್‌ಡಬ್ಲ್ಯುಯು ಹೇಳಿದೆ.

ರಜೆ ನೀಡದಿರುವುದು, ಸರ್ಕಾರಿ ರಜಾ ದಿನಗಳಲ್ಲಿಯೂ ಕೆಲಸ ಮಾಡಿಸುವುದು, ಹೆಚ್ಚು ದುಡಿಸಿಕೊಂಡು ಕಡಿಮೆ ವೇತನ ಕೊಡುವುದು, ಸರಿಯಾಗಿ ವೇತನ ನೀಡದಿರುವುದು, ಅಸಾಧ್ಯವಾದ ಗಡುವುಗಳನ್ನು (Deadlines)ಪೂರೈಸಲು ಒತ್ತಡ ಹೇರುವುದು, ಕೆಲಸದ ಸ್ಥಳದ ಕಿರುಕುಳ, ಮಹಿಳಾ ಕಾರ್ಮಿಕರ ಖಾಸಗಿ ಬದುಕಿಗೆ ಅವಕಾಶ ಕೊಡದಿರುವುದು ಸೇರಿದಂತೆ ಅನೇಕ ಶೋಷಣೆಗಳ ವಿರುದ್ದ ಡಿಜಿಟಲ್ ಮುಷ್ಕರ ನಡೆಸಲಾಗಿದೆ ಎಂದಿದೆ.

ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಕಾರ್ಮಿಕ ಕಾನೂನುಗಳಿಲ್ಲ. ಸರ್ಕಾರ ಕಾರ್ಮಿಕರಿಗೆ ಹಕ್ಕುಗಳ ದೊರಕಿಸಿ ಕೊಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ಕಾಪಾಡುತ್ತಿವೆ ಎಂದು ಮುಷ್ಕರ ನಿರತ ಮಹಿಳಾ ಗಿಗ್ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಕಾರ್ಮಿಕರಿಗೆ ಕೆಲಸಕ್ಕೆ ಸಂಬಂಧಿಸಿದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ನೀಡುವುದರ ಜೊತೆಗೆ, ಅವರಿಗೆ ಹೆರಿಗೆ, ಮುಟ್ಟು, ಮಕ್ಕಳ ಆರೈಕೆಗೆ ರಜೆ ನೀಡುವುದು. ಮಹಿಳಾ ಕಾರ್ಮಿಕರ ಕುಂದು ಕೊರೆತಗಳನ್ನು ಆಲಿಸಲು ಅಥವಾ ಹೇಳಿಕೊಳ್ಳಲು ಒಂದು ವೇದಿಕೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳು ನಮ್ಮ ಮುಷ್ಕರದಲ್ಲಿ ಒಳಗೊಂಡಿವೆ ಎಂದು ಜಿಐಪಿಎಸ್‌ಡಬ್ಲ್ಯುಯುನ ಪ್ರಧಾನ ಕಾರ್ಯದರ್ಶಿ ಸೀಮಾ ಸಿಂಗ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ಗ್ರಾಹಕರ ಮನೆಯೊಳಗೆ ಹೋಗಿ ಸೇವೆ ಒದಗಿಸಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ಅವರು ಲೈಂಗಿಕ ಕಿರುಕುಳ, ನಿಂದನೆ, ಹಲ್ಲೆ, ತುರ್ತು ಸಂದರ್ಭಗಳಲ್ಲಿ ಶೌಚಾಲಯದ ನಿರಾಕರಣೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವೇಳೆ ಅವರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಕಂಪನಿಗಳು ಯಾವುದೇ ಸಹಾಯಕ್ಕೆ ಬರುವುದಿಲ್ಲ ಎಂದು ಸೀಮಾ ಸಿಂಗ್ ವಿವರಿಸಿದ್ದಾರೆ.

ನಾವು ದುರ್ಬಲರು, ನಮ್ಮ ಕೈಯ್ಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ನಮಗೆ ಕುಟುಂಬ ನಡೆಸಲು ಕೆಲಸ ಅನಿವಾರ್ಯ ಎಂದು ಅವರಿಗೆ (ಕಂಪನಿಗಳಿಗೆ) ಗೊತ್ತಿದೆ. ಇಂದು ನಾವು ಮೊದಲ ಮುಷ್ಕರ ನಡೆಸುತ್ತಿದ್ದೇವೆ. ಮುಂದೆ ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸುವ ಉದ್ದೇಶವಿದೆ. ನಮ್ಮನ್ನು ದುಡಿಸಿಕೊಳ್ಳುವ ಪ್ಲಾಟ್‌ಫಾರ್ಮ್ ಕಂಪನಿಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಜಿಐಪಿಎಸ್‌ಡಬ್ಲ್ಯುಯುನ ಉಪಾಧ್ಯಕ್ಷೆ ಸೆಲ್ವಿ ಎಂ ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...