Homeಮುಖಪುಟಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಡಿಜಿಟಲ್ ಮುಷ್ಕರ'

ಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಡಿಜಿಟಲ್ ಮುಷ್ಕರ’

- Advertisement -
- Advertisement -

ದೀಪಾವಳಿಯ ಸಂಭ್ರಮದ ನಡುವೆ ದೇಶದಾದ್ಯಂತ ಗುರುವಾರ (ಅ.31) ಸುಮಾರು 11 ನಗರಗಳಲ್ಲಿ ಮಹಿಳಾ ಗಿಗ್ ಕಾರ್ಮಿಕರು ‘ಡಿಜಿಟಲ್ ಪ್ರತಿಭಟನೆ’ ನಡೆಸುವ ಮೂಲಕ ‘ಕರಾಳ ದೀಪಾವಳಿ’ ಆಚರಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ವತಂತ್ರ ಪತ್ರಕರ್ತೆ ಗ್ರೀಷ್ಮಾ ಕುತಾರ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಮಾಹಿತಿ ಆಧರಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಮಾಡಿರುವ ವರದಿಯ ಪ್ರಕಾರ, ಮಹಿಳಾ ಗಿಗ್ ಕಾರ್ಮಿಕರ ಒಕ್ಕೂಟ ‘ದಿ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್‌ ಸರ್ವಿಸ್ ವರ್ಕರ್ಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯು)’ ನೇತೃತ್ವದಲ್ಲಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡುವ ಡಿಜಿಟಲ್ ಮುಷ್ಕರ ನಡೆಸಲಾಗಿದೆ.

ಈ ಮೂಲಕ ಸರ್ಕಾರಿ ರಜಾದಿನಗಳಲ್ಲಿಯೂ ಕೆಲಸ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ವಿವಿಧ ಫ್ಲ್ಯಾಟ್‌ಫಾರ್ಮ್ ಕಂಪನಿಗಳ ಶೋಷಣೆಯ ವಿರುದ್ದ ಮೊದಲ ಬಾರಿಗೆ ಧ್ವನಿಯೆತ್ತಲಾಗಿದೆ.

ಕಂಪನಿಗಳ ಶೋಷಣೆಯ ಖಂಡನೆ, ತಮ್ಮ ಹಕ್ಕುಗಳನ್ನು ದೊರಕಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಮತ್ತು ದೇಶದಾದ್ಯಂತ ವಿವಿಧ ಗಿಗ್ ಕಾರ್ಮಿಕರನ್ನು ಒಗ್ಗೂಡಿಸುವುದು ಮುಷ್ಕರದ ಉದ್ಧೇಶ ಎಂದು ಜಿಐಪಿಎಸ್‌ಡಬ್ಲ್ಯುಯು ಹೇಳಿದೆ.

ರಜೆ ನೀಡದಿರುವುದು, ಸರ್ಕಾರಿ ರಜಾ ದಿನಗಳಲ್ಲಿಯೂ ಕೆಲಸ ಮಾಡಿಸುವುದು, ಹೆಚ್ಚು ದುಡಿಸಿಕೊಂಡು ಕಡಿಮೆ ವೇತನ ಕೊಡುವುದು, ಸರಿಯಾಗಿ ವೇತನ ನೀಡದಿರುವುದು, ಅಸಾಧ್ಯವಾದ ಗಡುವುಗಳನ್ನು (Deadlines)ಪೂರೈಸಲು ಒತ್ತಡ ಹೇರುವುದು, ಕೆಲಸದ ಸ್ಥಳದ ಕಿರುಕುಳ, ಮಹಿಳಾ ಕಾರ್ಮಿಕರ ಖಾಸಗಿ ಬದುಕಿಗೆ ಅವಕಾಶ ಕೊಡದಿರುವುದು ಸೇರಿದಂತೆ ಅನೇಕ ಶೋಷಣೆಗಳ ವಿರುದ್ದ ಡಿಜಿಟಲ್ ಮುಷ್ಕರ ನಡೆಸಲಾಗಿದೆ ಎಂದಿದೆ.

ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಕಾರ್ಮಿಕ ಕಾನೂನುಗಳಿಲ್ಲ. ಸರ್ಕಾರ ಕಾರ್ಮಿಕರಿಗೆ ಹಕ್ಕುಗಳ ದೊರಕಿಸಿ ಕೊಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ಕಾಪಾಡುತ್ತಿವೆ ಎಂದು ಮುಷ್ಕರ ನಿರತ ಮಹಿಳಾ ಗಿಗ್ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಕಾರ್ಮಿಕರಿಗೆ ಕೆಲಸಕ್ಕೆ ಸಂಬಂಧಿಸಿದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ನೀಡುವುದರ ಜೊತೆಗೆ, ಅವರಿಗೆ ಹೆರಿಗೆ, ಮುಟ್ಟು, ಮಕ್ಕಳ ಆರೈಕೆಗೆ ರಜೆ ನೀಡುವುದು. ಮಹಿಳಾ ಕಾರ್ಮಿಕರ ಕುಂದು ಕೊರೆತಗಳನ್ನು ಆಲಿಸಲು ಅಥವಾ ಹೇಳಿಕೊಳ್ಳಲು ಒಂದು ವೇದಿಕೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳು ನಮ್ಮ ಮುಷ್ಕರದಲ್ಲಿ ಒಳಗೊಂಡಿವೆ ಎಂದು ಜಿಐಪಿಎಸ್‌ಡಬ್ಲ್ಯುಯುನ ಪ್ರಧಾನ ಕಾರ್ಯದರ್ಶಿ ಸೀಮಾ ಸಿಂಗ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ಗ್ರಾಹಕರ ಮನೆಯೊಳಗೆ ಹೋಗಿ ಸೇವೆ ಒದಗಿಸಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ಅವರು ಲೈಂಗಿಕ ಕಿರುಕುಳ, ನಿಂದನೆ, ಹಲ್ಲೆ, ತುರ್ತು ಸಂದರ್ಭಗಳಲ್ಲಿ ಶೌಚಾಲಯದ ನಿರಾಕರಣೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವೇಳೆ ಅವರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಕಂಪನಿಗಳು ಯಾವುದೇ ಸಹಾಯಕ್ಕೆ ಬರುವುದಿಲ್ಲ ಎಂದು ಸೀಮಾ ಸಿಂಗ್ ವಿವರಿಸಿದ್ದಾರೆ.

ನಾವು ದುರ್ಬಲರು, ನಮ್ಮ ಕೈಯ್ಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ನಮಗೆ ಕುಟುಂಬ ನಡೆಸಲು ಕೆಲಸ ಅನಿವಾರ್ಯ ಎಂದು ಅವರಿಗೆ (ಕಂಪನಿಗಳಿಗೆ) ಗೊತ್ತಿದೆ. ಇಂದು ನಾವು ಮೊದಲ ಮುಷ್ಕರ ನಡೆಸುತ್ತಿದ್ದೇವೆ. ಮುಂದೆ ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸುವ ಉದ್ದೇಶವಿದೆ. ನಮ್ಮನ್ನು ದುಡಿಸಿಕೊಳ್ಳುವ ಪ್ಲಾಟ್‌ಫಾರ್ಮ್ ಕಂಪನಿಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಜಿಐಪಿಎಸ್‌ಡಬ್ಲ್ಯುಯುನ ಉಪಾಧ್ಯಕ್ಷೆ ಸೆಲ್ವಿ ಎಂ ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...