Homeಮುಖಪುಟಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಡಿಜಿಟಲ್ ಮುಷ್ಕರ'

ಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಡಿಜಿಟಲ್ ಮುಷ್ಕರ’

- Advertisement -
- Advertisement -

ದೀಪಾವಳಿಯ ಸಂಭ್ರಮದ ನಡುವೆ ದೇಶದಾದ್ಯಂತ ಗುರುವಾರ (ಅ.31) ಸುಮಾರು 11 ನಗರಗಳಲ್ಲಿ ಮಹಿಳಾ ಗಿಗ್ ಕಾರ್ಮಿಕರು ‘ಡಿಜಿಟಲ್ ಪ್ರತಿಭಟನೆ’ ನಡೆಸುವ ಮೂಲಕ ‘ಕರಾಳ ದೀಪಾವಳಿ’ ಆಚರಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ವತಂತ್ರ ಪತ್ರಕರ್ತೆ ಗ್ರೀಷ್ಮಾ ಕುತಾರ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಮಾಹಿತಿ ಆಧರಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಮಾಡಿರುವ ವರದಿಯ ಪ್ರಕಾರ, ಮಹಿಳಾ ಗಿಗ್ ಕಾರ್ಮಿಕರ ಒಕ್ಕೂಟ ‘ದಿ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್‌ ಸರ್ವಿಸ್ ವರ್ಕರ್ಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯು)’ ನೇತೃತ್ವದಲ್ಲಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡುವ ಡಿಜಿಟಲ್ ಮುಷ್ಕರ ನಡೆಸಲಾಗಿದೆ.

ಈ ಮೂಲಕ ಸರ್ಕಾರಿ ರಜಾದಿನಗಳಲ್ಲಿಯೂ ಕೆಲಸ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ವಿವಿಧ ಫ್ಲ್ಯಾಟ್‌ಫಾರ್ಮ್ ಕಂಪನಿಗಳ ಶೋಷಣೆಯ ವಿರುದ್ದ ಮೊದಲ ಬಾರಿಗೆ ಧ್ವನಿಯೆತ್ತಲಾಗಿದೆ.

ಕಂಪನಿಗಳ ಶೋಷಣೆಯ ಖಂಡನೆ, ತಮ್ಮ ಹಕ್ಕುಗಳನ್ನು ದೊರಕಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಮತ್ತು ದೇಶದಾದ್ಯಂತ ವಿವಿಧ ಗಿಗ್ ಕಾರ್ಮಿಕರನ್ನು ಒಗ್ಗೂಡಿಸುವುದು ಮುಷ್ಕರದ ಉದ್ಧೇಶ ಎಂದು ಜಿಐಪಿಎಸ್‌ಡಬ್ಲ್ಯುಯು ಹೇಳಿದೆ.

ರಜೆ ನೀಡದಿರುವುದು, ಸರ್ಕಾರಿ ರಜಾ ದಿನಗಳಲ್ಲಿಯೂ ಕೆಲಸ ಮಾಡಿಸುವುದು, ಹೆಚ್ಚು ದುಡಿಸಿಕೊಂಡು ಕಡಿಮೆ ವೇತನ ಕೊಡುವುದು, ಸರಿಯಾಗಿ ವೇತನ ನೀಡದಿರುವುದು, ಅಸಾಧ್ಯವಾದ ಗಡುವುಗಳನ್ನು (Deadlines)ಪೂರೈಸಲು ಒತ್ತಡ ಹೇರುವುದು, ಕೆಲಸದ ಸ್ಥಳದ ಕಿರುಕುಳ, ಮಹಿಳಾ ಕಾರ್ಮಿಕರ ಖಾಸಗಿ ಬದುಕಿಗೆ ಅವಕಾಶ ಕೊಡದಿರುವುದು ಸೇರಿದಂತೆ ಅನೇಕ ಶೋಷಣೆಗಳ ವಿರುದ್ದ ಡಿಜಿಟಲ್ ಮುಷ್ಕರ ನಡೆಸಲಾಗಿದೆ ಎಂದಿದೆ.

ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಕಾರ್ಮಿಕ ಕಾನೂನುಗಳಿಲ್ಲ. ಸರ್ಕಾರ ಕಾರ್ಮಿಕರಿಗೆ ಹಕ್ಕುಗಳ ದೊರಕಿಸಿ ಕೊಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ಕಾಪಾಡುತ್ತಿವೆ ಎಂದು ಮುಷ್ಕರ ನಿರತ ಮಹಿಳಾ ಗಿಗ್ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಕಾರ್ಮಿಕರಿಗೆ ಕೆಲಸಕ್ಕೆ ಸಂಬಂಧಿಸಿದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ನೀಡುವುದರ ಜೊತೆಗೆ, ಅವರಿಗೆ ಹೆರಿಗೆ, ಮುಟ್ಟು, ಮಕ್ಕಳ ಆರೈಕೆಗೆ ರಜೆ ನೀಡುವುದು. ಮಹಿಳಾ ಕಾರ್ಮಿಕರ ಕುಂದು ಕೊರೆತಗಳನ್ನು ಆಲಿಸಲು ಅಥವಾ ಹೇಳಿಕೊಳ್ಳಲು ಒಂದು ವೇದಿಕೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳು ನಮ್ಮ ಮುಷ್ಕರದಲ್ಲಿ ಒಳಗೊಂಡಿವೆ ಎಂದು ಜಿಐಪಿಎಸ್‌ಡಬ್ಲ್ಯುಯುನ ಪ್ರಧಾನ ಕಾರ್ಯದರ್ಶಿ ಸೀಮಾ ಸಿಂಗ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ಗ್ರಾಹಕರ ಮನೆಯೊಳಗೆ ಹೋಗಿ ಸೇವೆ ಒದಗಿಸಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ಅವರು ಲೈಂಗಿಕ ಕಿರುಕುಳ, ನಿಂದನೆ, ಹಲ್ಲೆ, ತುರ್ತು ಸಂದರ್ಭಗಳಲ್ಲಿ ಶೌಚಾಲಯದ ನಿರಾಕರಣೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವೇಳೆ ಅವರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಕಂಪನಿಗಳು ಯಾವುದೇ ಸಹಾಯಕ್ಕೆ ಬರುವುದಿಲ್ಲ ಎಂದು ಸೀಮಾ ಸಿಂಗ್ ವಿವರಿಸಿದ್ದಾರೆ.

ನಾವು ದುರ್ಬಲರು, ನಮ್ಮ ಕೈಯ್ಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ನಮಗೆ ಕುಟುಂಬ ನಡೆಸಲು ಕೆಲಸ ಅನಿವಾರ್ಯ ಎಂದು ಅವರಿಗೆ (ಕಂಪನಿಗಳಿಗೆ) ಗೊತ್ತಿದೆ. ಇಂದು ನಾವು ಮೊದಲ ಮುಷ್ಕರ ನಡೆಸುತ್ತಿದ್ದೇವೆ. ಮುಂದೆ ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸುವ ಉದ್ದೇಶವಿದೆ. ನಮ್ಮನ್ನು ದುಡಿಸಿಕೊಳ್ಳುವ ಪ್ಲಾಟ್‌ಫಾರ್ಮ್ ಕಂಪನಿಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಜಿಐಪಿಎಸ್‌ಡಬ್ಲ್ಯುಯುನ ಉಪಾಧ್ಯಕ್ಷೆ ಸೆಲ್ವಿ ಎಂ ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...