Homeಮುಖಪುಟಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಡಿಜಿಟಲ್ ಮುಷ್ಕರ'

ಮಹಿಳಾ ಗಿಗ್ ಕಾರ್ಮಿಕರಿಂದ ಕರಾಳ ದೀಪಾವಳಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಡಿಜಿಟಲ್ ಮುಷ್ಕರ’

- Advertisement -
- Advertisement -

ದೀಪಾವಳಿಯ ಸಂಭ್ರಮದ ನಡುವೆ ದೇಶದಾದ್ಯಂತ ಗುರುವಾರ (ಅ.31) ಸುಮಾರು 11 ನಗರಗಳಲ್ಲಿ ಮಹಿಳಾ ಗಿಗ್ ಕಾರ್ಮಿಕರು ‘ಡಿಜಿಟಲ್ ಪ್ರತಿಭಟನೆ’ ನಡೆಸುವ ಮೂಲಕ ‘ಕರಾಳ ದೀಪಾವಳಿ’ ಆಚರಣೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಸ್ವತಂತ್ರ ಪತ್ರಕರ್ತೆ ಗ್ರೀಷ್ಮಾ ಕುತಾರ್ ಅವರು ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದ ಮಾಹಿತಿ ಆಧರಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಮಾಡಿರುವ ವರದಿಯ ಪ್ರಕಾರ, ಮಹಿಳಾ ಗಿಗ್ ಕಾರ್ಮಿಕರ ಒಕ್ಕೂಟ ‘ದಿ ಗಿಗ್ ಅಂಡ್ ಫ್ಲ್ಯಾಟ್‌ಫಾರ್ಮ್‌ ಸರ್ವಿಸ್ ವರ್ಕರ್ಸ್ ಯೂನಿಯನ್ (ಜಿಐಪಿಎಸ್‌ಡಬ್ಲ್ಯುಯು)’ ನೇತೃತ್ವದಲ್ಲಿ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡುವ ಡಿಜಿಟಲ್ ಮುಷ್ಕರ ನಡೆಸಲಾಗಿದೆ.

ಈ ಮೂಲಕ ಸರ್ಕಾರಿ ರಜಾದಿನಗಳಲ್ಲಿಯೂ ಕೆಲಸ ಮಾಡುವಂತೆ ಒತ್ತಾಯಿಸುವುದು ಸೇರಿದಂತೆ ವಿವಿಧ ಫ್ಲ್ಯಾಟ್‌ಫಾರ್ಮ್ ಕಂಪನಿಗಳ ಶೋಷಣೆಯ ವಿರುದ್ದ ಮೊದಲ ಬಾರಿಗೆ ಧ್ವನಿಯೆತ್ತಲಾಗಿದೆ.

ಕಂಪನಿಗಳ ಶೋಷಣೆಯ ಖಂಡನೆ, ತಮ್ಮ ಹಕ್ಕುಗಳನ್ನು ದೊರಕಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು ಮತ್ತು ದೇಶದಾದ್ಯಂತ ವಿವಿಧ ಗಿಗ್ ಕಾರ್ಮಿಕರನ್ನು ಒಗ್ಗೂಡಿಸುವುದು ಮುಷ್ಕರದ ಉದ್ಧೇಶ ಎಂದು ಜಿಐಪಿಎಸ್‌ಡಬ್ಲ್ಯುಯು ಹೇಳಿದೆ.

ರಜೆ ನೀಡದಿರುವುದು, ಸರ್ಕಾರಿ ರಜಾ ದಿನಗಳಲ್ಲಿಯೂ ಕೆಲಸ ಮಾಡಿಸುವುದು, ಹೆಚ್ಚು ದುಡಿಸಿಕೊಂಡು ಕಡಿಮೆ ವೇತನ ಕೊಡುವುದು, ಸರಿಯಾಗಿ ವೇತನ ನೀಡದಿರುವುದು, ಅಸಾಧ್ಯವಾದ ಗಡುವುಗಳನ್ನು (Deadlines)ಪೂರೈಸಲು ಒತ್ತಡ ಹೇರುವುದು, ಕೆಲಸದ ಸ್ಥಳದ ಕಿರುಕುಳ, ಮಹಿಳಾ ಕಾರ್ಮಿಕರ ಖಾಸಗಿ ಬದುಕಿಗೆ ಅವಕಾಶ ಕೊಡದಿರುವುದು ಸೇರಿದಂತೆ ಅನೇಕ ಶೋಷಣೆಗಳ ವಿರುದ್ದ ಡಿಜಿಟಲ್ ಮುಷ್ಕರ ನಡೆಸಲಾಗಿದೆ ಎಂದಿದೆ.

ಗಿಗ್ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಕಾರ್ಮಿಕ ಕಾನೂನುಗಳಿಲ್ಲ. ಸರ್ಕಾರ ಕಾರ್ಮಿಕರಿಗೆ ಹಕ್ಕುಗಳ ದೊರಕಿಸಿ ಕೊಡುವ ಬದಲು ಕಾರ್ಪೋರೇಟ್ ಕಂಪನಿಗಳ ಹಿತಾಸಕ್ತಿ ಕಾಪಾಡುತ್ತಿವೆ ಎಂದು ಮುಷ್ಕರ ನಿರತ ಮಹಿಳಾ ಗಿಗ್ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಕಾರ್ಮಿಕರಿಗೆ ಕೆಲಸಕ್ಕೆ ಸಂಬಂಧಿಸಿದ ಹಕ್ಕುಗಳನ್ನು ಮತ್ತು ಸೌಲಭ್ಯಗಳನ್ನು ನೀಡುವುದರ ಜೊತೆಗೆ, ಅವರಿಗೆ ಹೆರಿಗೆ, ಮುಟ್ಟು, ಮಕ್ಕಳ ಆರೈಕೆಗೆ ರಜೆ ನೀಡುವುದು. ಮಹಿಳಾ ಕಾರ್ಮಿಕರ ಕುಂದು ಕೊರೆತಗಳನ್ನು ಆಲಿಸಲು ಅಥವಾ ಹೇಳಿಕೊಳ್ಳಲು ಒಂದು ವೇದಿಕೆ ಒದಗಿಸುವುದು ಸೇರಿದಂತೆ ಇತರ ಬೇಡಿಕೆಗಳು ನಮ್ಮ ಮುಷ್ಕರದಲ್ಲಿ ಒಳಗೊಂಡಿವೆ ಎಂದು ಜಿಐಪಿಎಸ್‌ಡಬ್ಲ್ಯುಯುನ ಪ್ರಧಾನ ಕಾರ್ಯದರ್ಶಿ ಸೀಮಾ ಸಿಂಗ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವ ಮಹಿಳೆಯರು ಗ್ರಾಹಕರ ಮನೆಯೊಳಗೆ ಹೋಗಿ ಸೇವೆ ಒದಗಿಸಬೇಕಾಗುತ್ತದೆ. ಈ ಸಂದರ್ಭಗಳಲ್ಲಿ ಅವರು ಲೈಂಗಿಕ ಕಿರುಕುಳ, ನಿಂದನೆ, ಹಲ್ಲೆ, ತುರ್ತು ಸಂದರ್ಭಗಳಲ್ಲಿ ಶೌಚಾಲಯದ ನಿರಾಕರಣೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವೇಳೆ ಅವರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಕಂಪನಿಗಳು ಯಾವುದೇ ಸಹಾಯಕ್ಕೆ ಬರುವುದಿಲ್ಲ ಎಂದು ಸೀಮಾ ಸಿಂಗ್ ವಿವರಿಸಿದ್ದಾರೆ.

ನಾವು ದುರ್ಬಲರು, ನಮ್ಮ ಕೈಯ್ಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ನಮಗೆ ಕುಟುಂಬ ನಡೆಸಲು ಕೆಲಸ ಅನಿವಾರ್ಯ ಎಂದು ಅವರಿಗೆ (ಕಂಪನಿಗಳಿಗೆ) ಗೊತ್ತಿದೆ. ಇಂದು ನಾವು ಮೊದಲ ಮುಷ್ಕರ ನಡೆಸುತ್ತಿದ್ದೇವೆ. ಮುಂದೆ ದೊಡ್ಡ ಮಟ್ಟದ ಹೋರಾಟಗಳನ್ನು ನಡೆಸುವ ಉದ್ದೇಶವಿದೆ. ನಮ್ಮನ್ನು ದುಡಿಸಿಕೊಳ್ಳುವ ಪ್ಲಾಟ್‌ಫಾರ್ಮ್ ಕಂಪನಿಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುವಂತೆ ಮಾಡುವುದು ಸರ್ಕಾರದ ಜವಾಬ್ದಾರಿ ಎಂದು ಜಿಐಪಿಎಸ್‌ಡಬ್ಲ್ಯುಯುನ ಉಪಾಧ್ಯಕ್ಷೆ ಸೆಲ್ವಿ ಎಂ ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರಾಡಳಿತ ಸಂಸ್ಥಾಪನಾ ದಿನ ಜಮ್ಮು ಕಾಶ್ಮೀರಕ್ಕೆ ‘ಕಪ್ಪು ದಿನ’ – ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...