Homeಮುಖಪುಟಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

- Advertisement -
- Advertisement -

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಪ್ರತಿಭಟನೆ ನಡೆಸಿದ 100 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹಲವಾರು ವರ್ಷಗಳಿಂದ ಹೋರಾಡುತ್ತಿದೆ. ಅದನ್ನು ಕಡೆಗಣಿಸಿ ಬಿಜೆಪಿ ಸರ್ಕಾರವು ಸಾಧನಾ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಹೊರಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳು ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದರು.

ಆಗಸ್ಟ್ 15 ರಂದು ದೇವನಹಳ್ಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಒಂದು ತಿಂಗಳ ಒಳಗಾಗಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಅಂದಿನಿಂದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ವತಿಯಿಂದ ಹಂತ ಹಂತವಾಗಿ ಹೋರಾಟಗಳನ್ನು ರೂಪಿಸುತ್ತಿದ್ದಾರೆ. ಒಂದು ಕಾರ್ಖಾನೆಗೆ ಮುಖ್ಯಮಂತ್ರಿ ಬಂದಾಗ ಅವರನ್ನು ಬೇಟಿ ಮಾಡಿ ಮನವಿ ಕೊಟ್ಟಿದ್ದರು, ಮುಖ್ಯಮಂತ್ರಿ ಎರಡೂ ತಾಲ್ಲೂಕಿನ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಸುಧಾಕರ್ ಹೋದಲ್ಲಿ ಬಂದಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡ್ತೀವಿ ಎಂಬ ಹೇಳಿಕೆಗಳನ್ನ ಕೊಡುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಮಾನದಂಡಗಳ ಅನ್ವಯ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಲು ಅರ್ಹತೆ ಹೊಂದಿದೆ.  ಈ ಕುರಿತು ನಾವು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ನಿರ್ಧರಿಸಿದ್ದೆವು. ಆದರೆ ಉಸ್ತುವಾರಿ ಸಚಿವರಾದ ಸುಧಾಕರ್‌ರವರು ಪೂರ್ವಗ್ರಹ ಪೀಡಿತರಾಗಿದ್ದಾರೆ. ಅವರು ಸರ್ಕಾರದ ಪ್ರತಿನಿಧಿಯಾಗಿ ವರ್ತಿಸುತ್ತಿಲ್ಲ. ಹಾಗಾಗಿ ನಮಗೆ ಸಿಎಂರನ್ನು ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೋರಾಟಗಾರರಾದ ಪ್ರಮೀಳಾ ಮಹಾದೇವ್ ಕಿಡಿಕಾರಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ ಕಪ್ಪು ಪಟ್ಟಿ ಧರಿಸಿ ಕನ್ನಡ ಜಾಗೃತ ಭವನದ ಮುಂದೆ ಪ್ರತಿಭಟನೆ ಮಾಡುತ್ತಿದ್ದ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯದು ಜನೋತ್ಸವವಲ್ಲ ಭ್ರಷ್ಟಾಚಾರೋತ್ಸವ – ಸಿಪಿಐ(ಎಂ) ಟೀಕೆ

ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು, ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವುದನ್ನು ಸಿಪಿಐ(ಎಂ) ಪಕ್ಷ ತೀವ್ರವಾಗಿ ಖಂಡಿಸಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40 ಲಂಚ ಪಡೆಯುತ್ತಿದ್ದು, ಗುತ್ತಿಗೆದಾರರ ಸಂಘದ ಮುಖಂಡರು ಪ್ರಧಾನಿ ಸೇರಿದಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ. ಖಾಸಗಿ ಶಾಲೆಗಳ ಆಡಳಿತ ವರ್ಗದವರಿಂದ, ಇಲಾಖೆಯ ಎಲ್ಲಾ ಕೆಲಸಗಳಿಗೆ, ಆದೇಶಗಳಿಗೆ ಹಣ ನೀಡದೆ ಕೆಲಸವಾಗುವುದಿಲ್ಲವೆಂದು ಪ್ರಧಾನಮಂತ್ರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ರಾಜ್ಯದ ಬೊಕ್ಕಸವನ್ನು ಲೂಟಿಮಾಡುವ ಮೂಲಕ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವ ಸಾಧನೆಗಳಿಗಾಗಿ ಜನೋತ್ಸವ ನಡೆಸಲಾಗುತ್ತಿದೆ ಎಂದು ಜನರಿಗೆ ಉತ್ತರಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆಸುವಲ್ಲಿ ಮತ್ತು ನೇಮಕಾತಿಗಳಲ್ಲಿ ಲಕ್ಷಾಂತರ ರೂ ಲಂಚ ಹಗರಣ ನಡೆದಿದೆ. ಬಿಡಿಎ ನಿವೇಶನಗಳನ್ನು ಗೃಹ ಮಂತ್ರಿ ಮತ್ತಿತ್ತರರಿಂದ ಕಬಳಿಕೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಛೀಮಾರಿ ಹಾಕಿದೆ. ಆರೋಗ್ಯ ಸಚಿವರು ಕಂದಾಯ ಸಚಿವ, ಕೈಗಾರಿಕಾ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳಿವೆ. ಚನ್ನರಾಯಪಟ್ಟಣ ಹೋಬಳಿಯ ಬಡ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆದು, ಚಾಣಕ್ಯ ಖಾಸಗಿ ವಿವಿಗೆ ಕೆಐಎಡಿಬಿ ಸೇರಿದ 116 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು, ರಾಜ್ಯದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ ನಷ್ಟ ವಾಗಿದೆ. ಟ್ರಸ್ಟ್ ಮತ್ತು ಗೋಶಾಲೆಗಳ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ರಾಜ್ಯದಲ್ಲಿ ಕಬಳಿಸಿರುವುದು ಮೊದಲಾಗಿ ಭ್ರಷ್ಟಾಚಾರಗಳು ನಡೆದಿವೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...