Homeಮುಖಪುಟಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

- Advertisement -
- Advertisement -

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಪ್ರತಿಭಟನೆ ನಡೆಸಿದ 100 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹಲವಾರು ವರ್ಷಗಳಿಂದ ಹೋರಾಡುತ್ತಿದೆ. ಅದನ್ನು ಕಡೆಗಣಿಸಿ ಬಿಜೆಪಿ ಸರ್ಕಾರವು ಸಾಧನಾ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಹೊರಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳು ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದರು.

ಆಗಸ್ಟ್ 15 ರಂದು ದೇವನಹಳ್ಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಒಂದು ತಿಂಗಳ ಒಳಗಾಗಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಅಂದಿನಿಂದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ವತಿಯಿಂದ ಹಂತ ಹಂತವಾಗಿ ಹೋರಾಟಗಳನ್ನು ರೂಪಿಸುತ್ತಿದ್ದಾರೆ. ಒಂದು ಕಾರ್ಖಾನೆಗೆ ಮುಖ್ಯಮಂತ್ರಿ ಬಂದಾಗ ಅವರನ್ನು ಬೇಟಿ ಮಾಡಿ ಮನವಿ ಕೊಟ್ಟಿದ್ದರು, ಮುಖ್ಯಮಂತ್ರಿ ಎರಡೂ ತಾಲ್ಲೂಕಿನ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಸುಧಾಕರ್ ಹೋದಲ್ಲಿ ಬಂದಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡ್ತೀವಿ ಎಂಬ ಹೇಳಿಕೆಗಳನ್ನ ಕೊಡುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಮಾನದಂಡಗಳ ಅನ್ವಯ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಲು ಅರ್ಹತೆ ಹೊಂದಿದೆ.  ಈ ಕುರಿತು ನಾವು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ನಿರ್ಧರಿಸಿದ್ದೆವು. ಆದರೆ ಉಸ್ತುವಾರಿ ಸಚಿವರಾದ ಸುಧಾಕರ್‌ರವರು ಪೂರ್ವಗ್ರಹ ಪೀಡಿತರಾಗಿದ್ದಾರೆ. ಅವರು ಸರ್ಕಾರದ ಪ್ರತಿನಿಧಿಯಾಗಿ ವರ್ತಿಸುತ್ತಿಲ್ಲ. ಹಾಗಾಗಿ ನಮಗೆ ಸಿಎಂರನ್ನು ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೋರಾಟಗಾರರಾದ ಪ್ರಮೀಳಾ ಮಹಾದೇವ್ ಕಿಡಿಕಾರಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ ಕಪ್ಪು ಪಟ್ಟಿ ಧರಿಸಿ ಕನ್ನಡ ಜಾಗೃತ ಭವನದ ಮುಂದೆ ಪ್ರತಿಭಟನೆ ಮಾಡುತ್ತಿದ್ದ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯದು ಜನೋತ್ಸವವಲ್ಲ ಭ್ರಷ್ಟಾಚಾರೋತ್ಸವ – ಸಿಪಿಐ(ಎಂ) ಟೀಕೆ

ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು, ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವುದನ್ನು ಸಿಪಿಐ(ಎಂ) ಪಕ್ಷ ತೀವ್ರವಾಗಿ ಖಂಡಿಸಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40 ಲಂಚ ಪಡೆಯುತ್ತಿದ್ದು, ಗುತ್ತಿಗೆದಾರರ ಸಂಘದ ಮುಖಂಡರು ಪ್ರಧಾನಿ ಸೇರಿದಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ. ಖಾಸಗಿ ಶಾಲೆಗಳ ಆಡಳಿತ ವರ್ಗದವರಿಂದ, ಇಲಾಖೆಯ ಎಲ್ಲಾ ಕೆಲಸಗಳಿಗೆ, ಆದೇಶಗಳಿಗೆ ಹಣ ನೀಡದೆ ಕೆಲಸವಾಗುವುದಿಲ್ಲವೆಂದು ಪ್ರಧಾನಮಂತ್ರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ರಾಜ್ಯದ ಬೊಕ್ಕಸವನ್ನು ಲೂಟಿಮಾಡುವ ಮೂಲಕ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವ ಸಾಧನೆಗಳಿಗಾಗಿ ಜನೋತ್ಸವ ನಡೆಸಲಾಗುತ್ತಿದೆ ಎಂದು ಜನರಿಗೆ ಉತ್ತರಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆಸುವಲ್ಲಿ ಮತ್ತು ನೇಮಕಾತಿಗಳಲ್ಲಿ ಲಕ್ಷಾಂತರ ರೂ ಲಂಚ ಹಗರಣ ನಡೆದಿದೆ. ಬಿಡಿಎ ನಿವೇಶನಗಳನ್ನು ಗೃಹ ಮಂತ್ರಿ ಮತ್ತಿತ್ತರರಿಂದ ಕಬಳಿಕೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಛೀಮಾರಿ ಹಾಕಿದೆ. ಆರೋಗ್ಯ ಸಚಿವರು ಕಂದಾಯ ಸಚಿವ, ಕೈಗಾರಿಕಾ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳಿವೆ. ಚನ್ನರಾಯಪಟ್ಟಣ ಹೋಬಳಿಯ ಬಡ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆದು, ಚಾಣಕ್ಯ ಖಾಸಗಿ ವಿವಿಗೆ ಕೆಐಎಡಿಬಿ ಸೇರಿದ 116 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು, ರಾಜ್ಯದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ ನಷ್ಟ ವಾಗಿದೆ. ಟ್ರಸ್ಟ್ ಮತ್ತು ಗೋಶಾಲೆಗಳ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ರಾಜ್ಯದಲ್ಲಿ ಕಬಳಿಸಿರುವುದು ಮೊದಲಾಗಿ ಭ್ರಷ್ಟಾಚಾರಗಳು ನಡೆದಿವೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...