Homeಮುಖಪುಟಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

- Advertisement -
- Advertisement -

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಪ್ರತಿಭಟನೆ ನಡೆಸಿದ 100 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹಲವಾರು ವರ್ಷಗಳಿಂದ ಹೋರಾಡುತ್ತಿದೆ. ಅದನ್ನು ಕಡೆಗಣಿಸಿ ಬಿಜೆಪಿ ಸರ್ಕಾರವು ಸಾಧನಾ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಹೊರಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳು ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದರು.

ಆಗಸ್ಟ್ 15 ರಂದು ದೇವನಹಳ್ಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಒಂದು ತಿಂಗಳ ಒಳಗಾಗಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಅಂದಿನಿಂದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ವತಿಯಿಂದ ಹಂತ ಹಂತವಾಗಿ ಹೋರಾಟಗಳನ್ನು ರೂಪಿಸುತ್ತಿದ್ದಾರೆ. ಒಂದು ಕಾರ್ಖಾನೆಗೆ ಮುಖ್ಯಮಂತ್ರಿ ಬಂದಾಗ ಅವರನ್ನು ಬೇಟಿ ಮಾಡಿ ಮನವಿ ಕೊಟ್ಟಿದ್ದರು, ಮುಖ್ಯಮಂತ್ರಿ ಎರಡೂ ತಾಲ್ಲೂಕಿನ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಸುಧಾಕರ್ ಹೋದಲ್ಲಿ ಬಂದಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡ್ತೀವಿ ಎಂಬ ಹೇಳಿಕೆಗಳನ್ನ ಕೊಡುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಮಾನದಂಡಗಳ ಅನ್ವಯ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಲು ಅರ್ಹತೆ ಹೊಂದಿದೆ.  ಈ ಕುರಿತು ನಾವು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ನಿರ್ಧರಿಸಿದ್ದೆವು. ಆದರೆ ಉಸ್ತುವಾರಿ ಸಚಿವರಾದ ಸುಧಾಕರ್‌ರವರು ಪೂರ್ವಗ್ರಹ ಪೀಡಿತರಾಗಿದ್ದಾರೆ. ಅವರು ಸರ್ಕಾರದ ಪ್ರತಿನಿಧಿಯಾಗಿ ವರ್ತಿಸುತ್ತಿಲ್ಲ. ಹಾಗಾಗಿ ನಮಗೆ ಸಿಎಂರನ್ನು ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೋರಾಟಗಾರರಾದ ಪ್ರಮೀಳಾ ಮಹಾದೇವ್ ಕಿಡಿಕಾರಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ ಕಪ್ಪು ಪಟ್ಟಿ ಧರಿಸಿ ಕನ್ನಡ ಜಾಗೃತ ಭವನದ ಮುಂದೆ ಪ್ರತಿಭಟನೆ ಮಾಡುತ್ತಿದ್ದ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯದು ಜನೋತ್ಸವವಲ್ಲ ಭ್ರಷ್ಟಾಚಾರೋತ್ಸವ – ಸಿಪಿಐ(ಎಂ) ಟೀಕೆ

ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು, ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವುದನ್ನು ಸಿಪಿಐ(ಎಂ) ಪಕ್ಷ ತೀವ್ರವಾಗಿ ಖಂಡಿಸಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40 ಲಂಚ ಪಡೆಯುತ್ತಿದ್ದು, ಗುತ್ತಿಗೆದಾರರ ಸಂಘದ ಮುಖಂಡರು ಪ್ರಧಾನಿ ಸೇರಿದಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ. ಖಾಸಗಿ ಶಾಲೆಗಳ ಆಡಳಿತ ವರ್ಗದವರಿಂದ, ಇಲಾಖೆಯ ಎಲ್ಲಾ ಕೆಲಸಗಳಿಗೆ, ಆದೇಶಗಳಿಗೆ ಹಣ ನೀಡದೆ ಕೆಲಸವಾಗುವುದಿಲ್ಲವೆಂದು ಪ್ರಧಾನಮಂತ್ರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ರಾಜ್ಯದ ಬೊಕ್ಕಸವನ್ನು ಲೂಟಿಮಾಡುವ ಮೂಲಕ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವ ಸಾಧನೆಗಳಿಗಾಗಿ ಜನೋತ್ಸವ ನಡೆಸಲಾಗುತ್ತಿದೆ ಎಂದು ಜನರಿಗೆ ಉತ್ತರಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆಸುವಲ್ಲಿ ಮತ್ತು ನೇಮಕಾತಿಗಳಲ್ಲಿ ಲಕ್ಷಾಂತರ ರೂ ಲಂಚ ಹಗರಣ ನಡೆದಿದೆ. ಬಿಡಿಎ ನಿವೇಶನಗಳನ್ನು ಗೃಹ ಮಂತ್ರಿ ಮತ್ತಿತ್ತರರಿಂದ ಕಬಳಿಕೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಛೀಮಾರಿ ಹಾಕಿದೆ. ಆರೋಗ್ಯ ಸಚಿವರು ಕಂದಾಯ ಸಚಿವ, ಕೈಗಾರಿಕಾ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳಿವೆ. ಚನ್ನರಾಯಪಟ್ಟಣ ಹೋಬಳಿಯ ಬಡ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆದು, ಚಾಣಕ್ಯ ಖಾಸಗಿ ವಿವಿಗೆ ಕೆಐಎಡಿಬಿ ಸೇರಿದ 116 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು, ರಾಜ್ಯದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ ನಷ್ಟ ವಾಗಿದೆ. ಟ್ರಸ್ಟ್ ಮತ್ತು ಗೋಶಾಲೆಗಳ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ರಾಜ್ಯದಲ್ಲಿ ಕಬಳಿಸಿರುವುದು ಮೊದಲಾಗಿ ಭ್ರಷ್ಟಾಚಾರಗಳು ನಡೆದಿವೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...