Homeಮುಖಪುಟಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

- Advertisement -
- Advertisement -

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಪ್ರತಿಭಟನೆ ನಡೆಸಿದ 100 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹಲವಾರು ವರ್ಷಗಳಿಂದ ಹೋರಾಡುತ್ತಿದೆ. ಅದನ್ನು ಕಡೆಗಣಿಸಿ ಬಿಜೆಪಿ ಸರ್ಕಾರವು ಸಾಧನಾ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಹೊರಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳು ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದರು.

ಆಗಸ್ಟ್ 15 ರಂದು ದೇವನಹಳ್ಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಒಂದು ತಿಂಗಳ ಒಳಗಾಗಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಅಂದಿನಿಂದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ವತಿಯಿಂದ ಹಂತ ಹಂತವಾಗಿ ಹೋರಾಟಗಳನ್ನು ರೂಪಿಸುತ್ತಿದ್ದಾರೆ. ಒಂದು ಕಾರ್ಖಾನೆಗೆ ಮುಖ್ಯಮಂತ್ರಿ ಬಂದಾಗ ಅವರನ್ನು ಬೇಟಿ ಮಾಡಿ ಮನವಿ ಕೊಟ್ಟಿದ್ದರು, ಮುಖ್ಯಮಂತ್ರಿ ಎರಡೂ ತಾಲ್ಲೂಕಿನ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಸುಧಾಕರ್ ಹೋದಲ್ಲಿ ಬಂದಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡ್ತೀವಿ ಎಂಬ ಹೇಳಿಕೆಗಳನ್ನ ಕೊಡುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಮಾನದಂಡಗಳ ಅನ್ವಯ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಲು ಅರ್ಹತೆ ಹೊಂದಿದೆ.  ಈ ಕುರಿತು ನಾವು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ನಿರ್ಧರಿಸಿದ್ದೆವು. ಆದರೆ ಉಸ್ತುವಾರಿ ಸಚಿವರಾದ ಸುಧಾಕರ್‌ರವರು ಪೂರ್ವಗ್ರಹ ಪೀಡಿತರಾಗಿದ್ದಾರೆ. ಅವರು ಸರ್ಕಾರದ ಪ್ರತಿನಿಧಿಯಾಗಿ ವರ್ತಿಸುತ್ತಿಲ್ಲ. ಹಾಗಾಗಿ ನಮಗೆ ಸಿಎಂರನ್ನು ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೋರಾಟಗಾರರಾದ ಪ್ರಮೀಳಾ ಮಹಾದೇವ್ ಕಿಡಿಕಾರಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ ಕಪ್ಪು ಪಟ್ಟಿ ಧರಿಸಿ ಕನ್ನಡ ಜಾಗೃತ ಭವನದ ಮುಂದೆ ಪ್ರತಿಭಟನೆ ಮಾಡುತ್ತಿದ್ದ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯದು ಜನೋತ್ಸವವಲ್ಲ ಭ್ರಷ್ಟಾಚಾರೋತ್ಸವ – ಸಿಪಿಐ(ಎಂ) ಟೀಕೆ

ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು, ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವುದನ್ನು ಸಿಪಿಐ(ಎಂ) ಪಕ್ಷ ತೀವ್ರವಾಗಿ ಖಂಡಿಸಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40 ಲಂಚ ಪಡೆಯುತ್ತಿದ್ದು, ಗುತ್ತಿಗೆದಾರರ ಸಂಘದ ಮುಖಂಡರು ಪ್ರಧಾನಿ ಸೇರಿದಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ. ಖಾಸಗಿ ಶಾಲೆಗಳ ಆಡಳಿತ ವರ್ಗದವರಿಂದ, ಇಲಾಖೆಯ ಎಲ್ಲಾ ಕೆಲಸಗಳಿಗೆ, ಆದೇಶಗಳಿಗೆ ಹಣ ನೀಡದೆ ಕೆಲಸವಾಗುವುದಿಲ್ಲವೆಂದು ಪ್ರಧಾನಮಂತ್ರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ರಾಜ್ಯದ ಬೊಕ್ಕಸವನ್ನು ಲೂಟಿಮಾಡುವ ಮೂಲಕ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವ ಸಾಧನೆಗಳಿಗಾಗಿ ಜನೋತ್ಸವ ನಡೆಸಲಾಗುತ್ತಿದೆ ಎಂದು ಜನರಿಗೆ ಉತ್ತರಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆಸುವಲ್ಲಿ ಮತ್ತು ನೇಮಕಾತಿಗಳಲ್ಲಿ ಲಕ್ಷಾಂತರ ರೂ ಲಂಚ ಹಗರಣ ನಡೆದಿದೆ. ಬಿಡಿಎ ನಿವೇಶನಗಳನ್ನು ಗೃಹ ಮಂತ್ರಿ ಮತ್ತಿತ್ತರರಿಂದ ಕಬಳಿಕೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಛೀಮಾರಿ ಹಾಕಿದೆ. ಆರೋಗ್ಯ ಸಚಿವರು ಕಂದಾಯ ಸಚಿವ, ಕೈಗಾರಿಕಾ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳಿವೆ. ಚನ್ನರಾಯಪಟ್ಟಣ ಹೋಬಳಿಯ ಬಡ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆದು, ಚಾಣಕ್ಯ ಖಾಸಗಿ ವಿವಿಗೆ ಕೆಐಎಡಿಬಿ ಸೇರಿದ 116 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು, ರಾಜ್ಯದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ ನಷ್ಟ ವಾಗಿದೆ. ಟ್ರಸ್ಟ್ ಮತ್ತು ಗೋಶಾಲೆಗಳ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ರಾಜ್ಯದಲ್ಲಿ ಕಬಳಿಸಿರುವುದು ಮೊದಲಾಗಿ ಭ್ರಷ್ಟಾಚಾರಗಳು ನಡೆದಿವೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...