Homeಮುಖಪುಟಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

ಬಿಜೆಪಿ ಸರ್ಕಾರದ ಜನಸ್ಪಂದನದ ವಿರುದ್ಧ ಕರಾಳೋತ್ಸವ ಪ್ರತಿಭಟನೆ: 100ಕ್ಕೂ ಅಧಿಕ ಜನರ ಬಂಧನ

- Advertisement -
- Advertisement -

ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಕರಾಳೋತ್ಸವ ಪ್ರತಿಭಟನೆ ನಡೆಸಿದ 100 ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಹಲವಾರು ವರ್ಷಗಳಿಂದ ಹೋರಾಡುತ್ತಿದೆ. ಅದನ್ನು ಕಡೆಗಣಿಸಿ ಬಿಜೆಪಿ ಸರ್ಕಾರವು ಸಾಧನಾ ಸಮಾವೇಶವನ್ನು ದೊಡ್ಡಬಳ್ಳಾಪುರದಲ್ಲಿ ಹೊರಟಿರುವುದನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳು ಕರಾಳೋತ್ಸವ ಆಚರಣೆಗೆ ಕರೆ ನೀಡಿದ್ದರು.

ಆಗಸ್ಟ್ 15 ರಂದು ದೇವನಹಳ್ಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಒಂದು ತಿಂಗಳ ಒಳಗಾಗಿ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಅಂದಿನಿಂದ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ವತಿಯಿಂದ ಹಂತ ಹಂತವಾಗಿ ಹೋರಾಟಗಳನ್ನು ರೂಪಿಸುತ್ತಿದ್ದಾರೆ. ಒಂದು ಕಾರ್ಖಾನೆಗೆ ಮುಖ್ಯಮಂತ್ರಿ ಬಂದಾಗ ಅವರನ್ನು ಬೇಟಿ ಮಾಡಿ ಮನವಿ ಕೊಟ್ಟಿದ್ದರು, ಮುಖ್ಯಮಂತ್ರಿ ಎರಡೂ ತಾಲ್ಲೂಕಿನ ವರದಿ ತರಿಸಿಕೊಂಡು ತೀರ್ಮಾನಿಸುವುದಾಗಿ ಹೇಳಿದ್ದರು. ಆದರೆ ಸುಧಾಕರ್ ಹೋದಲ್ಲಿ ಬಂದಲ್ಲಿ ದೇವನಹಳ್ಳಿ ಜಿಲ್ಲಾ ಕೇಂದ್ರ ಮಾಡ್ತೀವಿ ಎಂಬ ಹೇಳಿಕೆಗಳನ್ನ ಕೊಡುತ್ತಾ ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಎಲ್ಲಾ ಮಾನದಂಡಗಳ ಅನ್ವಯ ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವಾಗಿ ಮಾಡಲು ಅರ್ಹತೆ ಹೊಂದಿದೆ.  ಈ ಕುರಿತು ನಾವು ಮುಖ್ಯಮಂತ್ರಿಗಳಿಗೆ ಮನವಿ ಕೊಡಲು ನಿರ್ಧರಿಸಿದ್ದೆವು. ಆದರೆ ಉಸ್ತುವಾರಿ ಸಚಿವರಾದ ಸುಧಾಕರ್‌ರವರು ಪೂರ್ವಗ್ರಹ ಪೀಡಿತರಾಗಿದ್ದಾರೆ. ಅವರು ಸರ್ಕಾರದ ಪ್ರತಿನಿಧಿಯಾಗಿ ವರ್ತಿಸುತ್ತಿಲ್ಲ. ಹಾಗಾಗಿ ನಮಗೆ ಸಿಎಂರನ್ನು ಭೇಟಿ ಮಾಡಲು ಅನುಮತಿ ನೀಡುತ್ತಿಲ್ಲ. ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೋರಾಟಗಾರರಾದ ಪ್ರಮೀಳಾ ಮಹಾದೇವ್ ಕಿಡಿಕಾರಿದ್ದಾರೆ.

ಕರಾಳೋತ್ಸವ ಅಂಗವಾಗಿ ಇಂದು ನಗರದ ಕನ್ನಡ ಜಾಗೃತ ಭವನದಿಂದ ಜಗದೀಶ್ ವೃತ್ತದವರೆಗೂ ಜಾಥಾ ನಡೆಸಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ ಕಪ್ಪು ಪಟ್ಟಿ ಧರಿಸಿ ಕನ್ನಡ ಜಾಗೃತ ಭವನದ ಮುಂದೆ ಪ್ರತಿಭಟನೆ ಮಾಡುತ್ತಿದ್ದ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿಯದು ಜನೋತ್ಸವವಲ್ಲ ಭ್ರಷ್ಟಾಚಾರೋತ್ಸವ – ಸಿಪಿಐ(ಎಂ) ಟೀಕೆ

ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು, ತೀವ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದು, ರಾಜ್ಯದಲ್ಲಿ ದುರಾಡಳಿತ ನಡೆಯುತ್ತಿದೆ. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವುದನ್ನು ಸಿಪಿಐ(ಎಂ) ಪಕ್ಷ ತೀವ್ರವಾಗಿ ಖಂಡಿಸಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40 ಲಂಚ ಪಡೆಯುತ್ತಿದ್ದು, ಗುತ್ತಿಗೆದಾರರ ಸಂಘದ ಮುಖಂಡರು ಪ್ರಧಾನಿ ಸೇರಿದಂತೆ ರಾಜ್ಯದ ಮುಖ್ಯಮಂತ್ರಿಯವರಿಗೆ ದೂರು ನೀಡಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ. ಖಾಸಗಿ ಶಾಲೆಗಳ ಆಡಳಿತ ವರ್ಗದವರಿಂದ, ಇಲಾಖೆಯ ಎಲ್ಲಾ ಕೆಲಸಗಳಿಗೆ, ಆದೇಶಗಳಿಗೆ ಹಣ ನೀಡದೆ ಕೆಲಸವಾಗುವುದಿಲ್ಲವೆಂದು ಪ್ರಧಾನಮಂತ್ರಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲ. ರಾಜ್ಯದ ಬೊಕ್ಕಸವನ್ನು ಲೂಟಿಮಾಡುವ ಮೂಲಕ ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾವ ಸಾಧನೆಗಳಿಗಾಗಿ ಜನೋತ್ಸವ ನಡೆಸಲಾಗುತ್ತಿದೆ ಎಂದು ಜನರಿಗೆ ಉತ್ತರಿಸಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕೆಪಿಟಿಸಿಎಲ್ ಪ್ರವೇಶ ಪರೀಕ್ಷೆ ನಡೆಸುವಲ್ಲಿ ಮತ್ತು ನೇಮಕಾತಿಗಳಲ್ಲಿ ಲಕ್ಷಾಂತರ ರೂ ಲಂಚ ಹಗರಣ ನಡೆದಿದೆ. ಬಿಡಿಎ ನಿವೇಶನಗಳನ್ನು ಗೃಹ ಮಂತ್ರಿ ಮತ್ತಿತ್ತರರಿಂದ ಕಬಳಿಕೆ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಛೀಮಾರಿ ಹಾಕಿದೆ. ಆರೋಗ್ಯ ಸಚಿವರು ಕಂದಾಯ ಸಚಿವ, ಕೈಗಾರಿಕಾ ಸಚಿವರ ಮೇಲಿನ ಭ್ರಷ್ಟಾಚಾರದ ಆರೋಪಗಳಿವೆ. ಚನ್ನರಾಯಪಟ್ಟಣ ಹೋಬಳಿಯ ಬಡ ರೈತರ ಕೃಷಿ ಯೋಗ್ಯ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆದು, ಚಾಣಕ್ಯ ಖಾಸಗಿ ವಿವಿಗೆ ಕೆಐಎಡಿಬಿ ಸೇರಿದ 116 ಎಕರೆ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವುದು, ರಾಜ್ಯದ ಬೊಕ್ಕಸಕ್ಕೆ ಸುಮಾರು 250 ಕೋಟಿ ರೂ ನಷ್ಟ ವಾಗಿದೆ. ಟ್ರಸ್ಟ್ ಮತ್ತು ಗೋಶಾಲೆಗಳ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ರಾಜ್ಯದಲ್ಲಿ ಕಬಳಿಸಿರುವುದು ಮೊದಲಾಗಿ ಭ್ರಷ್ಟಾಚಾರಗಳು ನಡೆದಿವೆ ಎಂದು ಸಿಪಿಎಂ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯಾ ಅವರಿಗೆ ‘ಉಚಿತ ದೋಸೆ’ ರವಾನೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....