Homeಚಳವಳಿಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ಯೋಗಿ ಆದಿತ್ಯನಾಥ್ ಫೋಟೊ ಏಕೆ ಹಾಕಬೇಕು ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬೆಂಗಳೂರಿನ ಲಾಲ್‌ಬಾಗ್‌ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಸಂಪೂರ್ಣ ಹಿಂದಿಮಯ ಬ್ಯಾನರ್‌ ಹಾಕಿದ್ದಕ್ಕೆ ಮತ್ತು ಒಂದು ಕಡೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇನ್ನೊಂದು ಕಡೆ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿದ್ದಕ್ಕೆ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ. ಬ್ಯಾನರ್‌ಗೆ ಮಸಿ ಬಳಿದು ‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು. ಕನ್ನಡ ಬಳಸಿ’ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಯಾನರ್‌ನಲ್ಲಿ ಉಜ್ವಲ 2.0 ಯೋಜನೆಯ ಮಾಹಿತಿಯನ್ನು ಸಂಪೂರ್ಣ ಹಿಂದಿಯಲ್ಲಿ ನೀಡಲಾಗಿದೆ. ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ಯೋಗಿ ಆದಿತ್ಯನಾಥ್ ಫೋಟೊ ಏಕೆ ಹಾಕಬೇಕು? ನಾವು ಹಿಂದಿಗೆ ವಿರುದ್ಧವಲ್ಲ, ಆದರೆ ಹಿಂದಿ ಹೇರಿಕೆಗೆ ವಿರುದ್ಧವಿದ್ದೇವೆ. ಕನ್ನಡನಾಡಿನಲ್ಲಿ ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕನ್ನಡದಲ್ಲಿ ಮಾಹಿತಿ ನೀಡಬೇಕು, ಕನ್ನಡ ನಾಡಿನ ಮುಖಂಡರುಗಳಾದ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಥವಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಫೋಟೊ ಬೇಕಾದರೆ ಹಾಕಿ. ಆದರೆ ಯೋಗಿ ಆದಿತ್ಯನಾಥ್‌ ಫೋಟೊ ಏಕೆ? ನಿನ್ನೆ ನಡೆದ ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಪೂರ್ಣ ಇಂಗ್ಲಿಷ್ ಬ್ಯಾನರ್ ಬಳಸಲಾಗಿದೆ. ಹೀಗೆ ಆದರೆ ಕನ್ನಡ ನಶಿಸಿ ಮುಂದೊಂದು ದಿನ ನಮ್ಮ ಮೊಮ್ಮಕ್ಕಳು ಕನ್ನಡ ಅಂದರೆ ಏನು ಎಂದು ಕೇಳುವ ಪರಿಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ನೋಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿವಮೊಗ್ಗದ ಕಾರ್ಯಕ್ರಮದಿಂದ ಆರಂಭವಾಗಿ ಎಲ್ಲಡೆ ಹಿಂದಿ ಪ್ರಚಾರ ಮಾಡುತ್ತಿದೆ. ಏಕೆ ಪ್ರಾದೇಶಿಕ ಭಾಷೆಗಳನ್ನು  ಹತ್ತಿಕ್ಕಲಾಗುತ್ತಿದೆ? ಇದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪೆಟ್ರೋಲ್ ಬಂಕ್‌ನ ಮಾಲೀಕರನ್ನು ಸಹ ಏಕೆ ಇಂತಹ ಬ್ಯಾನರ್ ಹಾಕಿಸುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರೂಪೇಶ್ ರಾಜಣ್ಣ, “ಇಂದು ನಮ್ಮ ರಾಜ್ಯದಲ್ಲಿ ರಸ್ತೆಗಳು ಸೇರಿದಂತೆ ಎಲ್ಲೆಡೆ ಹಿಂದಿ ರಾರಾಜಿಸುತ್ತಿದೆ, ಕನ್ನಡ ನಶಿಸುತ್ತಿದೆ. ಏಕೆ ಹೀಗೆ? ರಾಜಾರೋಷವಾಗಿ ಬೆಂಗಳೂರಿನ ಮಧ್ಯಭಾಗದಲ್ಲಿ ಹಿಂದಿಯಲ್ಲಿ ಬ್ಯಾನರ್ ಹಾಕಲು ಇವರಿಗೆ ಎಷ್ಟು ಧೈರ್ಯ? ಯೋಗಿ ಆದಿತ್ಯನಾಥ್‌ಗೂ ಕರ್ನಾಟಕಕ್ಕೂ ಏನು ಸಂಬಂಧ? ಹಾಗಾಗಿ ಮಸಿ ಬಳಿದೆ” ಎಂದರು.

ಇಂದು ಜಾತಿ, ಧರ್ಮದ ಬೇಧಭಾವವಿಲ್ಲದೆ ನಮ್ಮೆಲ್ಲರನ್ನು ಒಂದು ಮಾಡುವುದು ನಮ್ಮ ಕನ್ನಡ ಭಾಷೆಯಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಅದು ಕೇವಲ ಭಾಷೆಯಲ್ಲ ದೈತ್ಯ ಶಕ್ತಿಯಾಗಿದೆ. ನಾವು ಕನ್ನಡಕ್ಕಾಗಿ ಹೋರಾಡದಿದ್ದರೆ ನಮ್ಮ ಅಸ್ತಿತ್ವ, ಅಸ್ಮಿತೆ ನಾಶವಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅವರು ತಿಳಿಸಿದರು.


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Correct aagi heliddeeri Adithyanathana abhimanigalidre anthavaru Utthara Pradeshakke hogi alli Banner haakli….. Kannadada Banner mathu kannadada Rajakaranigalu taare aagli bembalisona…. Adithyanathanige kannadadalli soppu haakiru yaaru illa.

  2. ಕರ್ನಾಟಕ್ಕೆ ಸಂಭಂದ ಇರದ ಫಾರೂಕ್ ಅಬ್ದುಲ್/ಮಮತಾ ದಿದಿ/ ಮಾಜಿ ಸಿಎಂ ಚಂದ್ರ ಬಾಬು ನಾಯಿಡು ಇವರೆಲ್ಲರ ಫೋಟೋ ಕರ್ನಾಟಕದಲ್ಲಿ ರಾರಾಜಿಸಿದಾಗ ರೂಪಾಯಿ ರಾಜಣ್ಣ ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ಕೊಂಡಿದ್ದ…!!
    ಅದು ಹೋಗ್ಲಿ ಕನ್ಶಯ್ಯ/ ಶರ್ಜಿಲ್ ಇಮಾಮ್ /ಶೇಹ್ಲಾ ರಶೀದ್ ಬೆಂಗಳೂರ್ ಬಂದಾಗ ಅವರ ಫೋಟೋ ಗೆ ಈ ರೂಪಿಯಿ ರಾಜಣ್ಣ ಏಕೆ ಪ್ರತಿಭಟನೆ ಮಾಡಲಿಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...