Homeಚಳವಳಿಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ಯೋಗಿ ಆದಿತ್ಯನಾಥ್ ಫೋಟೊ ಏಕೆ ಹಾಕಬೇಕು ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬೆಂಗಳೂರಿನ ಲಾಲ್‌ಬಾಗ್‌ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಸಂಪೂರ್ಣ ಹಿಂದಿಮಯ ಬ್ಯಾನರ್‌ ಹಾಕಿದ್ದಕ್ಕೆ ಮತ್ತು ಒಂದು ಕಡೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇನ್ನೊಂದು ಕಡೆ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿದ್ದಕ್ಕೆ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ. ಬ್ಯಾನರ್‌ಗೆ ಮಸಿ ಬಳಿದು ‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು. ಕನ್ನಡ ಬಳಸಿ’ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಯಾನರ್‌ನಲ್ಲಿ ಉಜ್ವಲ 2.0 ಯೋಜನೆಯ ಮಾಹಿತಿಯನ್ನು ಸಂಪೂರ್ಣ ಹಿಂದಿಯಲ್ಲಿ ನೀಡಲಾಗಿದೆ. ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ಯೋಗಿ ಆದಿತ್ಯನಾಥ್ ಫೋಟೊ ಏಕೆ ಹಾಕಬೇಕು? ನಾವು ಹಿಂದಿಗೆ ವಿರುದ್ಧವಲ್ಲ, ಆದರೆ ಹಿಂದಿ ಹೇರಿಕೆಗೆ ವಿರುದ್ಧವಿದ್ದೇವೆ. ಕನ್ನಡನಾಡಿನಲ್ಲಿ ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕನ್ನಡದಲ್ಲಿ ಮಾಹಿತಿ ನೀಡಬೇಕು, ಕನ್ನಡ ನಾಡಿನ ಮುಖಂಡರುಗಳಾದ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಥವಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಫೋಟೊ ಬೇಕಾದರೆ ಹಾಕಿ. ಆದರೆ ಯೋಗಿ ಆದಿತ್ಯನಾಥ್‌ ಫೋಟೊ ಏಕೆ? ನಿನ್ನೆ ನಡೆದ ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಪೂರ್ಣ ಇಂಗ್ಲಿಷ್ ಬ್ಯಾನರ್ ಬಳಸಲಾಗಿದೆ. ಹೀಗೆ ಆದರೆ ಕನ್ನಡ ನಶಿಸಿ ಮುಂದೊಂದು ದಿನ ನಮ್ಮ ಮೊಮ್ಮಕ್ಕಳು ಕನ್ನಡ ಅಂದರೆ ಏನು ಎಂದು ಕೇಳುವ ಪರಿಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ನೋಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿವಮೊಗ್ಗದ ಕಾರ್ಯಕ್ರಮದಿಂದ ಆರಂಭವಾಗಿ ಎಲ್ಲಡೆ ಹಿಂದಿ ಪ್ರಚಾರ ಮಾಡುತ್ತಿದೆ. ಏಕೆ ಪ್ರಾದೇಶಿಕ ಭಾಷೆಗಳನ್ನು  ಹತ್ತಿಕ್ಕಲಾಗುತ್ತಿದೆ? ಇದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪೆಟ್ರೋಲ್ ಬಂಕ್‌ನ ಮಾಲೀಕರನ್ನು ಸಹ ಏಕೆ ಇಂತಹ ಬ್ಯಾನರ್ ಹಾಕಿಸುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರೂಪೇಶ್ ರಾಜಣ್ಣ, “ಇಂದು ನಮ್ಮ ರಾಜ್ಯದಲ್ಲಿ ರಸ್ತೆಗಳು ಸೇರಿದಂತೆ ಎಲ್ಲೆಡೆ ಹಿಂದಿ ರಾರಾಜಿಸುತ್ತಿದೆ, ಕನ್ನಡ ನಶಿಸುತ್ತಿದೆ. ಏಕೆ ಹೀಗೆ? ರಾಜಾರೋಷವಾಗಿ ಬೆಂಗಳೂರಿನ ಮಧ್ಯಭಾಗದಲ್ಲಿ ಹಿಂದಿಯಲ್ಲಿ ಬ್ಯಾನರ್ ಹಾಕಲು ಇವರಿಗೆ ಎಷ್ಟು ಧೈರ್ಯ? ಯೋಗಿ ಆದಿತ್ಯನಾಥ್‌ಗೂ ಕರ್ನಾಟಕಕ್ಕೂ ಏನು ಸಂಬಂಧ? ಹಾಗಾಗಿ ಮಸಿ ಬಳಿದೆ” ಎಂದರು.

ಇಂದು ಜಾತಿ, ಧರ್ಮದ ಬೇಧಭಾವವಿಲ್ಲದೆ ನಮ್ಮೆಲ್ಲರನ್ನು ಒಂದು ಮಾಡುವುದು ನಮ್ಮ ಕನ್ನಡ ಭಾಷೆಯಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಅದು ಕೇವಲ ಭಾಷೆಯಲ್ಲ ದೈತ್ಯ ಶಕ್ತಿಯಾಗಿದೆ. ನಾವು ಕನ್ನಡಕ್ಕಾಗಿ ಹೋರಾಡದಿದ್ದರೆ ನಮ್ಮ ಅಸ್ತಿತ್ವ, ಅಸ್ಮಿತೆ ನಾಶವಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅವರು ತಿಳಿಸಿದರು.


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Correct aagi heliddeeri Adithyanathana abhimanigalidre anthavaru Utthara Pradeshakke hogi alli Banner haakli….. Kannadada Banner mathu kannadada Rajakaranigalu taare aagli bembalisona…. Adithyanathanige kannadadalli soppu haakiru yaaru illa.

  2. ಕರ್ನಾಟಕ್ಕೆ ಸಂಭಂದ ಇರದ ಫಾರೂಕ್ ಅಬ್ದುಲ್/ಮಮತಾ ದಿದಿ/ ಮಾಜಿ ಸಿಎಂ ಚಂದ್ರ ಬಾಬು ನಾಯಿಡು ಇವರೆಲ್ಲರ ಫೋಟೋ ಕರ್ನಾಟಕದಲ್ಲಿ ರಾರಾಜಿಸಿದಾಗ ರೂಪಾಯಿ ರಾಜಣ್ಣ ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ಕೊಂಡಿದ್ದ…!!
    ಅದು ಹೋಗ್ಲಿ ಕನ್ಶಯ್ಯ/ ಶರ್ಜಿಲ್ ಇಮಾಮ್ /ಶೇಹ್ಲಾ ರಶೀದ್ ಬೆಂಗಳೂರ್ ಬಂದಾಗ ಅವರ ಫೋಟೋ ಗೆ ಈ ರೂಪಿಯಿ ರಾಜಣ್ಣ ಏಕೆ ಪ್ರತಿಭಟನೆ ಮಾಡಲಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...