Homeಚಳವಳಿಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು: ಹಿಂದಿ ಬ್ಯಾನರ್‌ಗೆ ಮಸಿ ಬಳಿದ ರೂಪೇಶ್ ರಾಜಣ್ಣ

ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ಯೋಗಿ ಆದಿತ್ಯನಾಥ್ ಫೋಟೊ ಏಕೆ ಹಾಕಬೇಕು ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬೆಂಗಳೂರಿನ ಲಾಲ್‌ಬಾಗ್‌ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಸಂಪೂರ್ಣ ಹಿಂದಿಮಯ ಬ್ಯಾನರ್‌ ಹಾಕಿದ್ದಕ್ಕೆ ಮತ್ತು ಒಂದು ಕಡೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇನ್ನೊಂದು ಕಡೆ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿದ್ದಕ್ಕೆ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ. ಬ್ಯಾನರ್‌ಗೆ ಮಸಿ ಬಳಿದು ‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು. ಕನ್ನಡ ಬಳಸಿ’ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಯಾನರ್‌ನಲ್ಲಿ ಉಜ್ವಲ 2.0 ಯೋಜನೆಯ ಮಾಹಿತಿಯನ್ನು ಸಂಪೂರ್ಣ ಹಿಂದಿಯಲ್ಲಿ ನೀಡಲಾಗಿದೆ. ಕರ್ನಾಟಕಕ್ಕೆ ಯಾವುದೇ ಸಂಬಂಧವಿಲ್ಲದ ಯೋಗಿ ಆದಿತ್ಯನಾಥ್ ಫೋಟೊ ಏಕೆ ಹಾಕಬೇಕು? ನಾವು ಹಿಂದಿಗೆ ವಿರುದ್ಧವಲ್ಲ, ಆದರೆ ಹಿಂದಿ ಹೇರಿಕೆಗೆ ವಿರುದ್ಧವಿದ್ದೇವೆ. ಕನ್ನಡನಾಡಿನಲ್ಲಿ ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಕನ್ನಡದಲ್ಲಿ ಮಾಹಿತಿ ನೀಡಬೇಕು, ಕನ್ನಡ ನಾಡಿನ ಮುಖಂಡರುಗಳಾದ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅಥವಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಫೋಟೊ ಬೇಕಾದರೆ ಹಾಕಿ. ಆದರೆ ಯೋಗಿ ಆದಿತ್ಯನಾಥ್‌ ಫೋಟೊ ಏಕೆ? ನಿನ್ನೆ ನಡೆದ ಮೆಟ್ರೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಪೂರ್ಣ ಇಂಗ್ಲಿಷ್ ಬ್ಯಾನರ್ ಬಳಸಲಾಗಿದೆ. ಹೀಗೆ ಆದರೆ ಕನ್ನಡ ನಶಿಸಿ ಮುಂದೊಂದು ದಿನ ನಮ್ಮ ಮೊಮ್ಮಕ್ಕಳು ಕನ್ನಡ ಅಂದರೆ ಏನು ಎಂದು ಕೇಳುವ ಪರಿಸ್ಥಿತಿ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ನೋಡಿ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿವಮೊಗ್ಗದ ಕಾರ್ಯಕ್ರಮದಿಂದ ಆರಂಭವಾಗಿ ಎಲ್ಲಡೆ ಹಿಂದಿ ಪ್ರಚಾರ ಮಾಡುತ್ತಿದೆ. ಏಕೆ ಪ್ರಾದೇಶಿಕ ಭಾಷೆಗಳನ್ನು  ಹತ್ತಿಕ್ಕಲಾಗುತ್ತಿದೆ? ಇದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪೆಟ್ರೋಲ್ ಬಂಕ್‌ನ ಮಾಲೀಕರನ್ನು ಸಹ ಏಕೆ ಇಂತಹ ಬ್ಯಾನರ್ ಹಾಕಿಸುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ರೂಪೇಶ್ ರಾಜಣ್ಣ, “ಇಂದು ನಮ್ಮ ರಾಜ್ಯದಲ್ಲಿ ರಸ್ತೆಗಳು ಸೇರಿದಂತೆ ಎಲ್ಲೆಡೆ ಹಿಂದಿ ರಾರಾಜಿಸುತ್ತಿದೆ, ಕನ್ನಡ ನಶಿಸುತ್ತಿದೆ. ಏಕೆ ಹೀಗೆ? ರಾಜಾರೋಷವಾಗಿ ಬೆಂಗಳೂರಿನ ಮಧ್ಯಭಾಗದಲ್ಲಿ ಹಿಂದಿಯಲ್ಲಿ ಬ್ಯಾನರ್ ಹಾಕಲು ಇವರಿಗೆ ಎಷ್ಟು ಧೈರ್ಯ? ಯೋಗಿ ಆದಿತ್ಯನಾಥ್‌ಗೂ ಕರ್ನಾಟಕಕ್ಕೂ ಏನು ಸಂಬಂಧ? ಹಾಗಾಗಿ ಮಸಿ ಬಳಿದೆ” ಎಂದರು.

ಇಂದು ಜಾತಿ, ಧರ್ಮದ ಬೇಧಭಾವವಿಲ್ಲದೆ ನಮ್ಮೆಲ್ಲರನ್ನು ಒಂದು ಮಾಡುವುದು ನಮ್ಮ ಕನ್ನಡ ಭಾಷೆಯಾಗಿದೆ. ಹಾಗಾಗಿ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಅದು ಕೇವಲ ಭಾಷೆಯಲ್ಲ ದೈತ್ಯ ಶಕ್ತಿಯಾಗಿದೆ. ನಾವು ಕನ್ನಡಕ್ಕಾಗಿ ಹೋರಾಡದಿದ್ದರೆ ನಮ್ಮ ಅಸ್ತಿತ್ವ, ಅಸ್ಮಿತೆ ನಾಶವಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅವರು ತಿಳಿಸಿದರು.


ಇದನ್ನೂ ಓದಿ; ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Correct aagi heliddeeri Adithyanathana abhimanigalidre anthavaru Utthara Pradeshakke hogi alli Banner haakli….. Kannadada Banner mathu kannadada Rajakaranigalu taare aagli bembalisona…. Adithyanathanige kannadadalli soppu haakiru yaaru illa.

  2. ಕರ್ನಾಟಕ್ಕೆ ಸಂಭಂದ ಇರದ ಫಾರೂಕ್ ಅಬ್ದುಲ್/ಮಮತಾ ದಿದಿ/ ಮಾಜಿ ಸಿಎಂ ಚಂದ್ರ ಬಾಬು ನಾಯಿಡು ಇವರೆಲ್ಲರ ಫೋಟೋ ಕರ್ನಾಟಕದಲ್ಲಿ ರಾರಾಜಿಸಿದಾಗ ರೂಪಾಯಿ ರಾಜಣ್ಣ ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿ ಕೊಂಡಿದ್ದ…!!
    ಅದು ಹೋಗ್ಲಿ ಕನ್ಶಯ್ಯ/ ಶರ್ಜಿಲ್ ಇಮಾಮ್ /ಶೇಹ್ಲಾ ರಶೀದ್ ಬೆಂಗಳೂರ್ ಬಂದಾಗ ಅವರ ಫೋಟೋ ಗೆ ಈ ರೂಪಿಯಿ ರಾಜಣ್ಣ ಏಕೆ ಪ್ರತಿಭಟನೆ ಮಾಡಲಿಲ್ಲ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...